ವೆಂಕಟ್‌ ಹಾಗೆ ಮಾತಾಡೋದು ಯಾಕೆ?


Team Udayavani, Apr 18, 2017, 11:27 AM IST

Porki-Huccha-Venkat_(112).jpg

“ನನ್‌ ಮಗಂದ್‌… ನನ್‌ ಎಕ್ಕಡ…’ – ಹೀಗೆ ಮಾತ್‌ ಮಾತಿಗೂ ಡೈಲಾಗ್‌ ಹೇಳಿ ಎಲ್ಲೆಡೆ ಜೋರು ಸುದ್ದಿಯಾಗಿದ್ದ ಹುಚ್ಚವೆಂಕಟ್‌, ಯಾಕೆ ಹಾಗೆ ಹೇಳುತ್ತಿದ್ದರು, ಹಾಗೆಲ್ಲ ವರ್ತಿಸುತ್ತಿದ್ದದ್ದು ಯಾಕೆ ಎಂಬುದಕ್ಕೆ ರಿಲೀಸ್‌ ಆಗುತ್ತಿರುವ ಅವರ “ಪೊರ್ಕಿ ಹುಚ್ಚ ವೆಂಕಟ್‌’ ಚಿತ್ರದಲ್ಲಿ ಉತ್ತರ ಕೊಟ್ಟಿದ್ದಾರಂತೆ. ಈ ವಾರ ಬಿಡುಗಡೆಯಾಗುತ್ತಿರುವ ಈ ಚಿತ್ರ ಮಾಡಿದ್ದು, ಅವರ ತಾಯಿ, ತಂದೆಗಂತೆ.

ಅವರ ತಾಯಿ ಯಾವಾಗಲೂ ಅವರನ್ನು “ಪೊರ್ಕಿ’ ಎನ್ನುತ್ತಿದ್ದರಿಂದ, ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾಗಿ ಹೇಳುತ್ತಾರೆ ವೆಂಕಟ್‌. ಹುಚ್ಚ ವೆಂಕಟ್‌ ಈ ಚಿತ್ರ ಮಾಡೋಕೆ ತುಂಬಾನೇ ಕಷ್ಟಪಟ್ಟಿದ್ದಾರೆ. ಅವರೇ ಹೇಳುವಂತೆ, ಬೇರೆ ಸಿನಿಮಾಗಳಲ್ಲಿ ಅತಿಥಿಯಾಗಿ ನಟಿಸಿದ್ದು, ರಿಯಾಲಿಟಿ ಷೋಗಳಲ್ಲಿ ಕಾಣಿಸಿಕೊಂಡಿದ್ದು, ಅದೆಲ್ಲದ್ದರಿಂದ ಬಂದಂತಹ ಹಣವನ್ನೆಲ್ಲಾ ಈ ಚಿತ್ರಕ್ಕೆ ಸುರಿದು ಸಿನಿಮಾ ಮಾಡಿದ್ದಾರಂತೆ.

ಈಗ ಅವರು “ಸೂಪರ್‌ಜೋಡಿ’ ರಿಯಾಲಿಟಿ ಷೋನಲ್ಲಿ ಫಿನಾಲೆಗೆ ಎಂಟ್ರಿಯಾದ ಖುಷಿಯಲ್ಲಿದ್ದಾರೆ. ಎಲ್ಲರೂ ಹುಚ್ಚವೆಂಕಟ್‌ ಯಾಕೆ ಹಾಗೆ ಮಾಡ್ತಾನೆ ಅನ್ನುವ ಪ್ರಶ್ನೆ ಕಾಡಬಹುದು. ಅದಕ್ಕೆ ಈ ಚಿತ್ರದಲ್ಲಿ ಉತ್ತರ ಸಿಗಲಿದೆ ಎಂಬುದು ಅವರ ಮಾತು. ಅವರಿಲ್ಲಿ ಹಾಡೊಂದನ್ನು ಹಾಡಿದ್ದಾರೆ. ಡುಯೆಟ್‌ ಹಾಡೂ ಇದೆ. ಆದರೆ, ನಾಯಕಿಯನ್ನು ಸ್ಪರ್ಶಿಸದೆಯೇ ನಟಿಸಿದ್ದಾರಂತೆ. ಅವರು ಯಾವ ನಾಯಕಿಯನ್ನೂ ಹಾಡಲ್ಲಿ ಮುಟ್ಟೋದಿಲ್ಲವಂತೆ.

ಅವರು ಮುಟ್ಟುವುದಾದರೆ ಅದು ಅವರು ಪ್ರೀತಿಸುವ ಹುಡುಗಿಯನ್ನು ಮಾತ್ರವಂತೆ! ಅದೇನೆ ಇರಲಿ, ವೆಂಕಟ್‌ ಈ ಚಿತ್ರದ ಮೇಲೆ ಬಹಳ ನಂಬಿಕೆ ಇಟ್ಟಿದ್ದಾರಂತೆ. ಚಿತ್ರ ನೋಡಿದವರೆಲ್ಲರಿಗೂ ಇಷ್ಟವಾಗುತ್ತೆ ಎಂಬ ವಿಶ್ವಾಸ ಅವರದು. ಇನ್ನು, ವೆಂಕಟ್‌ ಅವರು ಮನೆಯವರನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ಸಮಾಜವನ್ನು ಪ್ರೀತಿಸಿದ್ದಾರಂತೆ. ಅದಕ್ಕೆ ಕಾರಣ, ಹಸಿವು ಎಂಬುದು ಅವರ ಮಾತು. ಅವರಿಗೆ ಮೊದ ಮೊದಲು ಹಸಿವು ಹೇಗಿರುತ್ತೆ ಅನ್ನೋದು ಗೊತ್ತಿರಲಿಲ್ಲವಂತೆ.

ಒಂದು ದಿನ ಏನನ್ನೂ ಸೇವಿಸದೆ ಇರುವಾಗ, ಹಸಿವಿನ ಅರಿವಾಯಿತಂತೆ. ಆಗಿನಿಂದ ಅವರ ಸೇನೆ ಮೂಲಕ ಸಾಧ್ಯವಾದಷ್ಟು ಹಸಿದವರಿಗೆ ಅನ್ನ ಹಾಕುವ ಕೆಲಸ ಮಾಡುತ್ತಿದ್ದಾರಂತೆ.  ಇನ್ನು ಈ ಚಿತ್ರಕ್ಕೆ ಚವ್ಹಾಣ್‌ ಕ್ಯಾಮೆರಾ ಹಿಡಿದಿದ್ದಾರೆ. ಅವರಿಗೆ ಇದು ವೆಂಕಟ್‌ ಜತೆ ಮೂರನೇ ಸಿನಿಮಾವಂತೆ. ಇನ್ನು, ಚಿತ್ರದಲ್ಲಿ ರಚನಾ ಮತ್ತು ಸೌಮ್ಯ ನಾಯಕಿಯರಾಗಿ ನಟಿಸಿದ್ದಾರೆ. ಉಳಿದಂತೆ ಜೈ ಜಗದೀಶ್‌, ಕೀರ್ತಿರಾಜ್‌ ಇತರರು ಚಿತ್ರದಲ್ಲಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.