Big move! ಸಿಎಂ ಯೋಗಿಯಿಂದ ಪಾರದರ್ಶಕ ವರ್ಗಾವಣೆ, ಗುತ್ತಿಗೆ ನೀತಿ
Team Udayavani, Apr 18, 2017, 11:48 AM IST
ಲಕ್ನೋ :ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಮಂಗಳವಾರ ತಮ್ಮ ಸಚಿವ ಸಂಪುಟದ ಮೂರನೇ ಸಭೆಯನ್ನು ಕರೆಯುವ ಸಾಧ್ಯತೆ ಇದೆ. ಲೋಕಭವನದಲ್ಲಿ ಈ ಮಹತ್ವದ ಸಭೆಯು ಸಂಜೆ ಐದು ಗಂಟೆಗೆ ನಡೆಯಲಿದೆ.
ಈ ಮಹತ್ತರ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ರಾಜ್ಯದಲ್ಲಿ ಹೊಸ ವರ್ಗಾವಣೆ ನೀತಿ ಹಾಗೂ ಕೆಲವೊಂದು ಪ್ರಮುಖ ನೀತಿ-ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ. ನೂತನ ವರ್ಗಾವಣೆ ಹಾಗೂ ಸರಕಾರಿ ಗುತ್ತಿಗೆಗಳನ್ನು ಮಂಜೂರು ಮಾಡುವ ನೀತಿಯು ಗರಿಷ್ಠ ಪಾರದರ್ಶಕತೆಯದ್ದಾಗಿರುತ್ತದೆ ಎಂದು ಗೊತ್ತಾಗಿದೆ.
ಹೊಸ ವರ್ಗಾವಣೆ ನೀತಿಯ ಪ್ರಕಾರ ರಾಜ್ಯದ ವಿಭಾಗೀಯ ಅಧಿಕಾರಿಗಳ ಕರ್ತವ್ಯ ಅವಧಿಯು ಏಳು ವರ್ಷದ್ದಾಗಿರುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳ ಅವಧಿಯು ಐದು ವರ್ಷದ್ದಾಗಿರುತ್ತದೆ. ಈ ಅವಧಿ ಪೂರೈಸದೇ ಅಧಿಕಾರಿಗಳಿಗೆ ಬೇರೆಡೆಗೆ ವರ್ಗಾಯಿಸುವಂತಿಲ್ಲ ಎಂಬ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರುವ ನಿರೀಕ್ಷೆ ಇದೆ.
ಇದೇ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸಂಪುಟ ಸಚಿವರು ತಮ್ಮ ತಮ್ಮ ಖಾತೆಯಲ್ಲಿ ಈ ವರೆಗೆ ಮಾಡಿರುವ ಕೆಲಸ ಕಾರ್ಯಗಳ ವರದಿಯನ್ನು ಕೇಳಲಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.