
Big move! ಸಿಎಂ ಯೋಗಿಯಿಂದ ಪಾರದರ್ಶಕ ವರ್ಗಾವಣೆ, ಗುತ್ತಿಗೆ ನೀತಿ
Team Udayavani, Apr 18, 2017, 11:48 AM IST

ಲಕ್ನೋ :ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಮಂಗಳವಾರ ತಮ್ಮ ಸಚಿವ ಸಂಪುಟದ ಮೂರನೇ ಸಭೆಯನ್ನು ಕರೆಯುವ ಸಾಧ್ಯತೆ ಇದೆ. ಲೋಕಭವನದಲ್ಲಿ ಈ ಮಹತ್ವದ ಸಭೆಯು ಸಂಜೆ ಐದು ಗಂಟೆಗೆ ನಡೆಯಲಿದೆ.
ಈ ಮಹತ್ತರ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ರಾಜ್ಯದಲ್ಲಿ ಹೊಸ ವರ್ಗಾವಣೆ ನೀತಿ ಹಾಗೂ ಕೆಲವೊಂದು ಪ್ರಮುಖ ನೀತಿ-ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ. ನೂತನ ವರ್ಗಾವಣೆ ಹಾಗೂ ಸರಕಾರಿ ಗುತ್ತಿಗೆಗಳನ್ನು ಮಂಜೂರು ಮಾಡುವ ನೀತಿಯು ಗರಿಷ್ಠ ಪಾರದರ್ಶಕತೆಯದ್ದಾಗಿರುತ್ತದೆ ಎಂದು ಗೊತ್ತಾಗಿದೆ.
ಹೊಸ ವರ್ಗಾವಣೆ ನೀತಿಯ ಪ್ರಕಾರ ರಾಜ್ಯದ ವಿಭಾಗೀಯ ಅಧಿಕಾರಿಗಳ ಕರ್ತವ್ಯ ಅವಧಿಯು ಏಳು ವರ್ಷದ್ದಾಗಿರುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳ ಅವಧಿಯು ಐದು ವರ್ಷದ್ದಾಗಿರುತ್ತದೆ. ಈ ಅವಧಿ ಪೂರೈಸದೇ ಅಧಿಕಾರಿಗಳಿಗೆ ಬೇರೆಡೆಗೆ ವರ್ಗಾಯಿಸುವಂತಿಲ್ಲ ಎಂಬ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರುವ ನಿರೀಕ್ಷೆ ಇದೆ.
ಇದೇ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸಂಪುಟ ಸಚಿವರು ತಮ್ಮ ತಮ್ಮ ಖಾತೆಯಲ್ಲಿ ಈ ವರೆಗೆ ಮಾಡಿರುವ ಕೆಲಸ ಕಾರ್ಯಗಳ ವರದಿಯನ್ನು ಕೇಳಲಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.