ಬೇಸಿಗೆಯಲ್ಲಿ ರಸ್ತೆ ಬದಿ ಸಸಿಗಳಿಗೆ ನೀರು


Team Udayavani, Apr 19, 2017, 1:13 PM IST

dvg5.jpg

ಹರಪನಹಳ್ಳಿ: ಕಳೆದ ಮೂರು ವರ್ಷದಿಂದ ಸತತವಾಗಿ ಮಳೆ ಪ್ರಮಾಣ ಕಡಿಮೆಯಾದ ಪರಿಣಾಮ ತಾಲೂಕಿನಾದ್ಯಂತ ಕೆರೆ, ಗೋಕಟ್ಟೆ, ಚೆಕ್‌ ಡ್ಯಾಂ ಸೇರಿದಂತೆ ಎಲ್ಲಿಯೂ ಒಂದು ಹನಿ ನೀರು ಸಿಗುತ್ತಿಲ್ಲ. ಜನ, ಜನವಾರು, ಪ್ರಾಣಿ ಪಕ್ಷಿಗಳು ನೀರಿಗಾಗಿ ಪರದಾಟ ನಡೆಸುತ್ತಿವೆ. ಇಂತಹ ಸಮಯದಲ್ಲಿ ಸಸಿಗಳಿಗೆ ನೀರುಣಿಸುವುದು ದುಸ್ಸಾಹಸ ಕೆಲಸವಾಗಿದೆ.

ಆದರೆ ಸ್ಥಳೀಯ ಟಿ.ಎಂ. ಶಿವಶಂಕರ್‌ ಸ್ಮಾರಕ ಟ್ರಸ್ಟ್‌ ಪದಾಧಿ ಧಿಕಾರಿಗಳು ಅರಣ್ಯ ಇಲಾಖೆ ನೆಟ್ಟಿರುವ ಸಸಿಗಳಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿ ಹಾಗೂ ನಗರ ಹಸರೀಕರಣ ಯೋಜನೆಯಡಿ 2015-16ನೇ ಸಾಲಿನಲ್ಲಿ ಎರಡು ವರ್ಷ ನೆಟ್ಟಿರುವ 4500 ಸಸಿಗಳಿಗೆ ಎರಡು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಟ್ರಸ್ಟ್‌ ನಿರ್ಧರಿಸಿದೆ. 

ಆಸ್ಟ್ರೇಲಿಯಾದಲ್ಲಿ ಎಂಎಸ್ಸಿ ಕಂಪ್ಯೂಟರ್‌ ಸೈನ್ಸ್‌ ಅಭ್ಯಾಸ ಮಾಡಿರುವ ಟ್ರಸ್ಟ್‌ನ ಕಾರ್ಯದರ್ಶಿ ಟಿ.ಎಂ.ಶಿವಶಂಕರ್‌ ಅವರು ಜನರಲ್ಲಿ ಜಾಗೃತಿ ಮತ್ತು ಪರಿಸರ ಉಳಿವಿಗೆ ಪಣತೊಟ್ಟು ಪಟ್ಟಣದ ಹೊರವಲಯದ ಆನಂತನಹಳ್ಳಿ ಬಳಿ ಇರುವ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜ್‌ ಆವರಣದಲ್ಲಿ ಮಂಗಳವಾರ ಸಸಿಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ವಲಯ ಅರಣ್ಯಾಧಿಕಾರಿ ಎಂ.ಎಸ್‌. ಅಬ್ದುಲ್‌ಬಷೀರ್‌ ಮಾತನಾಡಿ, ನಗರ ಹಸರೀಕರಣ ಯೋಜನೆಯಡಿ ಪಟ್ಟಣದ ಪಾಲಿಟೆಕ್ನಿಕ್‌ ಕಾಲೇಜ್‌ ಆವರಣ, ಕೊಟ್ಟೂರು ರಸ್ತೆ, ಆದರ್ಶ ವಿದ್ಯಾಲಯ ಆವರಣ, ಇಂಡಿಯನ್‌ ರಿಜರ್‌ ಬೆಟಲಿಯನ್‌ ವಲಯ, ಕೆಎಚ್‌ಬಿ ಕಾಲೋನಿ, ಟೀಚರ್‌ ಕಾಲೋನಿ, ಎಚ್‌ಪಿಎಸ್‌ ಕಾಲೇಜ್‌ ಆವರಣ ಸೇರಿ ಒಟ್ಟು  4500 ವಿವಿಧ ಬಗೆಯ ಸಸಿಗಳನ್ನು ನೆಡಲಾಗಿದೆ.

ಸಸಿಗಳನ್ನು ಪೋಷಣೆ ಮಾಡುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯವಲ್ಲ, ಸಾರ್ವಜನಿಕರ ಪಾತ್ರವೂ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಟಿ.ಎಂ.  ಶಿವಶಂಕರ್‌ ಸ್ಮಾರಕ ಟ್ರಸ್ಟ್‌ನವರು ಮುಂದೆ ಬಂದಿರುವುದು ಶ್ಲಾಘನೀಯ. ಪ್ರತಿಯೊಬ್ಬರೂ 5 ಸಸಿಗಳನ್ನು ದತ್ತು ಪಡೆಯುವಂತೆ ಅವರು ಮನವಿ ಮಾಡಿದರು. 

ಟ್ರಸ್ಟ್‌ನ ಕಾರ್ಯದರ್ಶಿ ಟಿ.ಎಂ. ಶಿವಶಂಕರ್‌ ಮಾತನಾಡಿ, ಅರಣ್ಯ ಇಲಾಖೆ ನೆಟ್ಟಿರುವ ಸಸಿಗಳನ್ನು ಉಳಿಸಲು ಅರಣ್ಯಾಧಿಕಾರಿ ಕೆ.ಕಿರಣ್‌ ಕುಮಾರ್‌ ಸಲಹೆಯಂತೆ ಎರಡು ಟ್ಯಾಂಕರ್‌ ಮೂಲಕ ನೀರುಣಿಸಲು ಮುಂದಾದೆ. ಟ್ರಸ್ಟ್‌ ವತಿಯಿಂದ ಈಗಾಗಲೇ ಉಚಿತ ಆರೋಗ್ಯ ಶಿಬಿರ, ಪಶು ಆರೋಗ್ಯ ಶಿಬಿರ, ಔಷಧಿ ವಿತರಣೆ ಸೇರಿದಂತೆ ಅನೇಕ ಸಮಾಜಮುಖೀ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಉಪ ಅರಣ್ಯಾಧಿಕಾರಿ ಕೆ.ಕಿರಣ್‌ ಕುಮಾರ್‌, ಚಂದ್ರಶೇಖರಗೌಡ, ಟ್ರಸ್‌ನ ಎ.ವೀರಣ, ಟಿ.ಎಂ.ಸಿ.ಕೋಟ್ರಯ್ಯ, ಪಾಲಿಟೆಕ್ನಿಕ್‌ ಕಾಲೇಜ್‌ ಪ್ರಾಚಾರ್ಯ ಎಂ.ಎಸ್‌.ದೇವರಾಜ್‌, ಟಿ.ಸಿ. ಶ್ರೀಧರ್‌  ಹಾಗೂ ಅರಣ್ಯ ಸಿಬ್ಬಂದಿ ಹಾಜರಿದ್ದರು.  

ಟಾಪ್ ನ್ಯೂಸ್

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

16

BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್‌ To ಫೇಸ್‌ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್‌ಬಾಸ್?

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

1-SSC

Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!

Modi’s mindset has changed after the Lok Sabha elections: Rahul Gandhi

Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್‌ ಗಾಂಧಿ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.