ಕನ್ನಡಿಗರ ಜಲವಾಸ್ತುಶಿಲ್ಪ ಪ್ರೇರಣೀಯ


Team Udayavani, Apr 21, 2017, 1:03 PM IST

dvg3.jpg

ದಾವಣಗೆರೆ: ಹಲವಾರು ಶತಮಾನಗಳ ಹಿಂದೆಯೇ ಭಾರತೀಯರು ಅನುಸರಿಸುತ್ತಿದ್ದ ನೈಪುಣ್ಯತೆಯ ಜಲವಾಸ್ತುಶಿಲ್ಪ ತಾಂತ್ರಿಕತೆ ಇಂದಿನ ಹಲವಾರು ಜಲಾಶಯ, ಕ್ರೆಸ್ಟ್‌ಗೇಟ್‌ ವಿನ್ಯಾಸಕ್ಕೆ ಮೂಲ ಪ್ರೇರಣೆ ಎಂದು ಕುವೆಂಪು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಡಾ| ರಾಜಾರಾಮ ಹೆಗ್ಡೆ ತಿಳಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ, ರಾಜ್ಯ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ, ದಾವಣಗೆರೆ ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ವೇದಿಕೆ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ಕನ್ನಡ ಭವನದಲ್ಲಿಹಮ್ಮಿಕೊಂಡಿರುವ ಮಧ್ಯಕಾಲೀನ ಕರ್ನಾಟಕದ  ಜಲವಾಸ್ತುಶಿಲ್ಪ… ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಆಶಯ ನುಡಿಗಳಾಡಿದರು.

ಭಾರತೀಯರು ಕೆರೆಗೆ ಕಟ್ಟುತ್ತಿದ್ದ ಕೋಡಿಗಳನ್ನ ನೋಡಿಯೇ ಬ್ರಿಟಿಷರು ಜಲಾಶಯಗಳ ಕ್ರೆಸ್ಟ್‌ಗೇಟ್‌ ವಿನ್ಯಾಸ, ಅಳವಡಿಕೆ ಪ್ರಾರಂಭಿಸಿದ್ದು. ಭಾರತದ ಅದರಲ್ಲೂ ಕರ್ನಾಟಕದ ಜಲವಾಸ್ತುಶಿಲ್ಪ ಎಂತಹವರನ್ನು ನಿಬ್ಬೆರಗಾಗಿಸುವಂತದ್ದು ಎನ್ನುವುದಕ್ಕೆ ಸಾವಿರಾರು ಉದಾಹರಣೆ ಇವೆ ಎಂದರು. 

ಗುಜರಾತ್‌ನ ಗಿರ್‌ ಪ್ರದೇಶದಲ್ಲಿ 8ನೇ ಶತಮಾನದಲ್ಲಿ ನಿರ್ಮಿಸಿದ ಸುದರ್ಶನ ಕೆರೆ ಭಾರತೀಯ ಜಲವಾಸ್ತುಶಿಲ್ಪಕ್ಕೆ ಮೊದಲ ಉದಾಹರಣೆ. ರಟ್ಟಿಹಳ್ಳಿ ಸಮೀಪದ ಮದಗದ ಕೆರೆ, ಚನ್ನಗಿರಿ ಸಮೀಪದ ಸೂಳೆಕೆರೆ, ಸಂತೇಬೆನ್ನೂರು ಐತಿಹಾಸಿಕ ಪುಷ್ಕರಣಿ, ಹಂಪಿ, ವಿಜಯಪುರ, ಚಿತ್ರದುರ್ಗದಲ್ಲಿನ ಕೆರೆ, ಬಾವಿ, ಮಾಳಿಗೆ ಬಾವಿ,  ಬಾವಡಿ.. ಜಲವಾಸ್ತುಶಿಲ್ಪದ ವಿವಿಧ ಪ್ರಾಕಾರಗಳು. 

ಭಾರತೀಯರು ನೀರನ್ನು ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ. ಹಾಗಾಗಿಯೇ ನೀರನ್ನು ಗಂಗೆ, ಜಲದೇವತೆ ಎಂದೆಲ್ಲಾ ಪೂಜಿಸುತ್ತಾರೆ. ನೀರಿನ ಸಂರಕ್ಷಣೆಗಾಗಿ ರೂಪಿತವಾದ ಜಲವಾಸ್ತುಶಿಲ್ಪ ಇಂದಿನ ಅನೇಕ ಜಲಾಶಯ, ಕೃತಕ ಸರೋವರ ನಿರ್ಮಾಣಕ್ಕೆ ಕಾರಣವಾಗಿರುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು. 

ಕಲ್ಲು ತುಂಬಿರುವ ಬೆಟ್ಟದಲ್ಲೂ ಕೆರೆ, ಹೊಂಡ, ಪುಷ್ಕರಣಿ ನಿರ್ಮಿಸಿರುವ ಭಾರತೀಯರಿಗೆ ಶತಮಾನಗಳ ಹಿಂದೆಯೇ ಮಳೆ ನೀರು ಸಂರಕ್ಷಣೆ, ಮಳೆ ನೀರು ಕೊಯ್ಲು, ವೈಜ್ಞಾನಿಕ ವಿತರಣೆ ಬಗ್ಗೆ ಗೊತ್ತಿತ್ತು. ಈಗಿನವರೇ ಎಲ್ಲವನ್ನೂ ಮರೆಯುತ್ತಿರುವ ಕಾರಣಕ್ಕಾಗಿಯೇ ನಗರ, ಗ್ರಾಮೀಣ ಪ್ರದೇಶದಲ್ಲಿ  ನೀರಿನ ಹಾಹಾಕಾರ ಕಂಡು ಬರುತ್ತಿದೆ. 

ಜೀವನಾಧಾರವಾಗಿರುವ ನೀರಿನ ಸಂರಕ್ಷಣೆ ಮಾಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ನಮ್ಮ ಪೂರ್ವಜರು ಅನುಸರಿಸುತ್ತಿದ್ದ ಜಲ ಸಂರಕ್ಷಣಾ ವಾಸ್ತುಶಿಲ್ಪ ತಾಂತ್ರಿಕತೆಯನ್ನು ಮುಂದುವರೆಸುವ ದಿಕ್ಕಿನಲ್ಲಿ ಈ ವಿಚಾರ ಸಂಕಿರಣ ಮಾರ್ಗದರ್ಶನದ ವೇದಿಕೆಯಾಗಲಿ ಎಂದು ಆಶಿಸಿದರು.  

ಟಾಪ್ ನ್ಯೂಸ್

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

Sri Lanka: ಶ್ರೀಲಂಕಾ ನೂತನ ಅಧ್ಯಕ್ಷರಾಗಿ ದಿಸ್ಸಾನಾಯಕೆ ಆಯ್ಕೆ- ಭಾರತಕ್ಕೆ ಹೊಸ ಸಮಸ್ಯೆ!

Sri Lanka: ಶ್ರೀಲಂಕಾ ನೂತನ ಅಧ್ಯಕ್ಷರಾಗಿ ದಿಸ್ಸಾನಾಯಕೆ ಆಯ್ಕೆ- ಭಾರತಕ್ಕೆ ಹೊಸ ಸಮಸ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.