10 ತಾಲೂಕು ಪಂಚಾಯತ್‌ ಸದಸ್ಯರು ಗೈರು-ಸಾಮಾನ್ಯ ಸಭೆ ಮುಂದೂಡಿಕೆ


Team Udayavani, Apr 26, 2017, 1:33 PM IST

hub2.jpg

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ನವಲಗುಂದ ತಾಲೂಕು ಪಂಚಾಯತಿಗೆ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಗೆ 15 ಸದಸ್ಯರಲ್ಲಿ 10 ಜನ ಸದಸ್ಯರು ಗೈರು ಹಾಜರಾಗಿದ್ದರಿಂದ ಕೋರಂ ಕೊರತೆಯಿಂದ ಸಭೆ ಮುಂದೂಡಿದ ಅಪರೂಪದ ಘಟನೆ ನಡೆಯಿತು.
 
ಜಿಲ್ಲೆಯ ಮೂರು ತಾಪಂಗಳಿಗೆ ಅನುದಾನ ಬಿಡುಗಡೆಯಾಗುತ್ತದೆ. ಆದರೆ ಹುಬ್ಬಳ್ಳಿ ಮತ್ತು ನವಲಗುಂದ ತಾಪಂಗಳಿಗೆ ಮಾತ್ರ ಅನುದಾನ ಬಿಡುಗಡೆ ಆಗಿಲ್ಲ. ಈ ಬಾರಿ ಅನುದಾನದಲ್ಲಿ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿತ್ತು. ಜಿಲ್ಲಾ  ಪಂಚಾಯತಿಗೆ ಹೆಚ್ಚಿನ ಅನುದಾನ ನೀಡುತ್ತಾರೆ. ಆದರೆ ತಾಲೂಕು ಪಂಚಾಯತಿಗೆ ಮಾತ್ರ ಏನೋ ಇಲ್ಲ.

ಇದು ತಾರತಮ್ಯದ ಪರಮಾವಧಿ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ತಾಲೂಕು ಪಂಚಾಯಿತಿಗೆ 1.35 ಕೋಟಿ ರೂ. ಅನುದಾನ ಬಂದಿತ್ತು. ಈ ಬಾರಿ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.

ಆದರೆ ಅನುದಾನ ಹೆಚ್ಚಿನ ಮಾಡುವುದಿರಲಿ, ಅನುದಾನವೇ ಬಿಡುಗಡೆ ಮಾಡಿಲ್ಲ. ಈ ಕುರಿತು ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ತಾಪಂನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಧಾರವಾಡ, ಕುಂದಗೋಳ ಮತ್ತು ಕಲಘಟಗಿ ತಾಪಂಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಿದ್ದು, ನವಲಗುಂದ ಮತ್ತು ಹುಬ್ಬಳ್ಳಿ ತಾಪಂಗಳಿಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.

ಇದರಿಂದ ನವಲಗುಂದ ತಾಪಂ ಸಭೆಯನ್ನು ಕರೆಯಲಾಗಿಲ್ಲ ಎಂದು ಸದಸ್ಯರು ಬೇಸರ ವ್ಯಕ್ತಪಡಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಬೇಸರಗೊಂಡಿರುವ ಸದಸ್ಯರುಮಂಗಳವಾರ ನಡೆಯಬೇಕಾಗಿದ್ದ ತಾಪಂ ಸಭೆಗೆ ಆಗಮಿಸದೆ, ಹೊಟೇಲ್‌ವೊಂದರಲ್ಲಿ ಸಭೆ ನಡೆಸಿ 10 ಜನರು ಗೈರು ಹಾಜರಾಗುವ ನಿರ್ಧಾರ ಕೈಗೊಂಡಿದ್ದಾಗಿ ಸದಸ್ಯರೊಬ್ಬರು ತಿಳಿಸಿದರು. 

ತಾಪಂ ಸಾಮಾನ್ಯ ಸಭೆಗೆ ತಾಲೂಕಿನ ಎಲ್ಲ ಅಧಿಕಾರಿಗಳು, ಪಿಡಿಒಗಳು ತಾಪಂ ಸಾಮಾನ್ಯ ಸಭೆ ಇರುವುದರಿಂದ ಬೆಳಿಗ್ಗೆ 11:00 ಗಂಟೆಯಿಂದ ಕಾಯುತ್ತಿದ್ದರು. ಸದಸ್ಯರ ಕೊರತೆಯಿಂದ 12:10ಗಂಟೆ ಸುಮಾರಿಗೆ ತಾಪಂ ಸಾಮಾನ್ಯ ಸಭೆಗೆ ಅಧ್ಯಕ್ಷೆ ಚನ್ನಮ್ಮ ಗೋರ್ಲ, ಉಪಾಧ್ಯಕ್ಷೆ ಸರೋಜಾ ಅಳಗವಾಡಿ, 

ಸದಸ್ಯರಾದ ಬಸವರಾಜ ಸಾಲಿ, ಬಸಪ್ಪ ಬೀರಣ್ಣವರ, ದೇವಕ್ಕ ಸವ್ವಾಸೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೋರಂ ಅಭಾವದಿಂದ ಸಭೆಯನ್ನು 10 ನಿಮಿಷ ಮುಂದೂಡಿದರು. ಅನಂತರವೂ ಸದಸ್ಯರು ಆಗಮಿಸದ್ದರಿಂದ ಸಭೆಯನ್ನು ಮುಂದೂಡಲಾಯಿತು.  

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.