ಅಧಿಕಾರಿಗೆ ಕ್ರಿಮಿನಲ್ ಬೆದರಿಕೆ: ರಾಜ್ಯಪಾಲರ ನಕಲಿ ಪುತ್ರ ಅರೆಸ್ಟ್
Team Udayavani, Apr 27, 2017, 3:29 PM IST
ಹೈದರಾಬಾದ್ : ಮಹಾರಾಷ್ಟ್ರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ ರಾವ್ ಅವರ ಪುತ್ರ ತಾನೆಂದು ಹೇಳಿಕೊಂಡು ಸರಕಾರಿ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿ ನಿವೇಶನವೊಂದರ ಮೇಲಿನ ಹಕ್ಕನ್ನು ತನಗೆ ಬಿಟ್ಟುಕೊಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶ್ರೀಧರ ರಾವ್ ಎಂದು ಗುರುತಿಸಲಾಗಿದೆ. ಈತನಿಗೂ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರ ಪುತ್ರ ವಿವೇಕ್ ಅವರಿಗೂ ಯಾವದೇ ಸಂಬಂಧ ಇಲ್ಲವೆಂದು ಖಚಿತವಾಗಿದೆ.
ಆರೋಪಿ ಶ್ರೀಧರ ರಾವ್ ತಾನು ರಾಜ್ಯಪಾಲರ ಪುತ್ರ ವಿವೇಕ್ ಎಂದು ಹೇಳಿಕೊಂಡು ಸರಕಾರಿ ಕಚೇರಿಯೊಂದರಲ್ಲಿ ಆಫೀಸ್ ಸುಪರಿಂಟೆಂಡೆಂಟ್ ಆಗಿ ದುಡಿಯುತ್ತಿರುವ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ 1800 ಚದರಡಿಯ ನಿವೇಶನವೊಂದರ ಮೇಲಿನ ಹಕ್ಕನ್ನು ತನಗೆ ಬಿಟ್ಟುಕೊಡಬೇಕೆಂದು ಬೆದರಿಕೆ ಒಡ್ಡಿ ಮಾನಸಿಕ ಕಿರುಕುಳ ನೀಡಿದ್ದ. ಸಂತ್ರಸ್ತ ಸುಪರಿಂಟೆಂಡೆಂಟ್ ಅಧಿಕಾರಿ ಬೊವೇನಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದರು.
ಪೊಲೀಸರು ಈ ದೂರಿನ ಆಧಾರದಲ್ಲಿ ರಾಜ್ಯಪಾಲರ ನಕಲಿ ಪುತ್ರನಾದ ಆರೋಪಿ ಶ್ರೀಧರ ರಾವ್ ನನ್ನು ಚಾಣಾಕ್ಷತನಿಂದ ಪತ್ತೆ ಹಚ್ಚಿ ಬಂಧಿಸಿದರು. ಆತನ ವಿರುದ್ಧ ಪೊಲೀಸರು ಐಪಿಸಿ ಸೆ.506ರ ಪ್ರಕಾರ (ಕ್ರಿಮಿನಲ್ ಬೆದರಿಕೆ) ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.