ಭಿನ್ನಮತ ಶಮನಕ್ಕೆ ಅಮಿತ್ ಶಾ ಬರ್ತಾರೆ: ಪ್ರಹ್ಲಾದ್ ಜೋಷಿ
Team Udayavani, Apr 28, 2017, 10:31 AM IST
ಕೋಲಾರ: ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಪಕ್ಷದ ಹೈಕಮಾಂಡ್ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಖುದ್ದಾಗಿ ಬರಲಿದ್ದಾರೆಂದು ಸಂಸದ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಬೆಂಬಲಿಗರ ನಡುವೆ ನಡೆದ ಜಗಳದ ಕುರಿತು ಪ್ರಶ್ನಿಸಿದಾಗ, ಪಕ್ಷದ ಬೆಳವಣಿಗೆಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದೆಂದು ಹೈಕಮಾಂಡ್ ತಿಳಿಸಿದೆ. ಆದ್ದರಿಂದ ಪ್ರತಿಕ್ರಿಯೆ ನೀಡುವುದಿಲ್ಲ. ಗುರುವಾರ ನಡೆದ ಘಟನೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ನುಣುಚಿಕೊಂಡರು. ಸೊಗಡು ಶಿವಣ್ಣ ಅವರ ಮನೆಗೆ ಮಧ್ಯರಾತ್ರಿ ಹೋಗಿದ್ದರ ಕುರಿತು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಜೋಷಿ, “ನಾನು ಬರಬೇಕಿದ್ದ ವಿಮಾನ ತಪ್ಪಿದ ಕಾರಣ ಬೇರೊಂದು ವಿಮಾನದಲ್ಲಿ ಬಂದಿದ್ದೇನೆ. ಸಮಯ ರಾತ್ರಿ 12.30 ಆಗಿತ್ತು. ಅಲ್ಲದೇ, ನಾನು ಸೊಗಡು ಶಿವಣ್ಣ ಅವರ ಮನೆಗೆ ಊಟಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.