ಉಗ್ರರಿಂದ ಬ್ಯಾಂಕ್ ಲೂಟಿ ಯತ್ನ ವಿಫಲಗೊಳಿಸಿದ ಭದ್ರತಾ ಪಡೆಗಳು
Team Udayavani, Apr 28, 2017, 3:58 PM IST
ಶ್ರೀನಗರ : ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿನ ಜಮ್ಮು ಕಾಶ್ಮೀರ ಬ್ಯಾಂಕ್ ಶಾಖೆಯನ್ನು ಲೂಟಿಗೈವ ಉಗ್ರರ ಯತ್ನವನ್ನು ಭದ್ರತಾ ಪಡೆಗಳಿಂದು ವಿಫಲಗೊಳಿಸಿದವು.
ಅನಂತ್ನಾಗ್ ಜಿಲ್ಲೆಯ ಮೆಹಂದಿ ಕದಲ್ ಎಂಬಲ್ಲಿನ ಜಮ್ಮು ಕಾಶ್ಮೀರ ಬ್ಯಾಂಕಿನ ತೆಹಶೀಲ್ ಕಚೇರಿಗೆ ಇಬ್ಬರು ಶಸ್ತ್ರಧಾರಿ ಉಗ್ರರು ಇಂದು ಶುಕ್ರವಾರ ಮಧ್ಯಾಹ್ನ ಲಗ್ಗೆ ಇಟ್ಟರು. ಈ ಉಗ್ರರನ್ನು ಸೆರೆ ಹಿಡಿಯಲು ಭದ್ರತಾ ಪಡೆಗಳು ಮುಂದಾದವಾದರೂ ಉಗ್ರರು ಗುಂಡು ಹಾರಿಸಲು ತೊಡಗಿದ ಕಾರಣ ಅದು ಸಾಧ್ಯವಾಗಲಿಲ್ಲ.
ಉಗ್ರರ ಗುಂಡಿಗೆ ಸಿಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಒಬ್ಬರು ಗಾಯಗೊಂಡರು. ಇಬ್ಬರು ಉಗ್ರರಲ್ಲಿ ಬಂದೂಕು ಹೊಂದಿದ್ದ ಉಗ್ರನು ಪರಾರಿಯಾಗುವಲ್ಲಿ ಯಶಸ್ವಿಯಾದ. ಆದರೆ ಇನ್ನೊಬ್ಬನನ್ನು ಭದ್ರತಾ ಪಡೆಗಳು ಸೆರೆ ಹಿಡಿದವು.
ಬಂಧಿತ ಉಗ್ರನನ್ನು ಶೋಪಿಯಾನ್ ಜಿಲ್ಲೆಯ ಋಷಿಪುರದ ನಿವಾಸಿ ಮುನೀಬ್ ಅಹ್ಮದ್ ಮಲ್ಲ ಎಂದು ಗುರುತಿಸಲಾಗಿದೆ.
ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.