ಎಂಜಿನಿಯರ್‌ಗಳು ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಬೇಕು


Team Udayavani, May 6, 2017, 1:05 PM IST

siddaramiah.jpg

ಬೆಂಗಳೂರು: ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಮುಗಿಸಿದರೆ ಜನರಿಗೂ ಅನುಕೂಲವಾಗಲಿದ್ದು, ಸರ್ಕಾರಕ್ಕೂ ಹಣ ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಎಂಜಿನಿಯರ್‌ಗಳು ಗಮನ ಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಎಂಜಿನಿಯರ್‌ಗಳಿಗೆ ಕಿವಿಮಾತು ಹೇಳಿದ್ದಾರೆ. ಜಲಸಂಪನ್ಮೂಲ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯ ಕ್ರಮದಲ್ಲಿ 2016ನೇ ಸಾಲಿನ ಎಸ್‌.ಜಿ.ಬಾಳೆಕುಂದ್ರಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಎಸ್‌.ಜಿ.ಬಾಳೆಕುಂದ್ರಿ ರಾಜ್ಯದ ಎಂಜಿನಿಯರಿಂಗ್‌ ಹಾಗೂ ನೀರಾವರಿ ಕ್ಷೇತ್ರದಲ್ಲಿ ಅವಿಸ್ಮರಣೀಯ ಕೆಲಸ ಮಾಡಿದ್ದಾರೆ. ಎಸ್‌.ಜಿ.ಬಾಳೆಕುಂದ್ರಿ ಅವರಂತೆ ಎತ್ತರದ ಮಟ್ಟಕ್ಕೆ ಬೆಳೆಯಲು
ಎಂಜಿನಿಯರ್‌ಗಳು ಮುಂದಾಗಬೇಕು.

ಅಂದಾಜು ಪಟ್ಟಿಗಳನ್ನು ಪದೇಪದೆ ಎಂಜಿನಿಯರ್‌ಗಳು ಪರಿಷ್ಕರಿಸುತ್ತಿರುವುದು ಸರಿಯಲ್ಲ. ಕಾಲಕಾಲಕ್ಕೆ ಸುಧಾರಿತ
ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಎಂಜಿನಿಯರ್‌ಗಳು ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದರು. ರಾಜ್ಯದಲ್ಲಿ
ನೀರಿನ ನಿರ್ವಹಣೆ ಚೆನ್ನಾಗಿಲ್ಲ. ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದರೆ ಇನ್ನಷ್ಟು ಬೆಳೆ ಬೆಳೆಯಲು ಅವಕಾಶವಿದೆ. ಇತ್ತೀಚೆಗೆ ದುಬೈಗೆ ತೆರಳಿದ್ದಾಗ ಅಲ್ಲಿಯೂ ಸಾಕಷ್ಟು ಹಸಿರು ಪ್ರದೇಶವನ್ನು ಕಂಡೆ. ಇಸ್ರೇಲ್‌, ದುಬೈನಲ್ಲಿನ ನೀರಿನ ನಿರ್ವಹಣೆ ವಿಧಾನದ ಬಗ್ಗೆ ಗಮನ ಹರಿಸಬೇಕಿದೆ ಎಂದು ತಿಳಿಸಿದರು.

ಜಲಸಂಪನ್ಮೂಲ ಸಚಿವ ಡಾ.ಎಂ.ಬಿ. ಪಾಟೀಲ್‌, ಸರ್‌ ಎಂ.ವಿಶ್ವೇಶ್ವರಯ್ಯ ದೇಶ ಕಂಡ ಶ್ರೇಷ್ಠ ಎಂಜಿನಿಯರ್‌. ಎಸ್‌.ಜಿ.ಬಾಳೆಕುಂದ್ರಿ ಅವರನ್ನು ಎರಡನೇ ವಿಶ್ವೇಶ್ವರಯ್ಯ ಎಂದು ಕರೆಯಬಹುದು. ಜಲಸಂಪನ್ಮೂಲ ಕ್ಷೇತ್ರದಲ್ಲಿ 20 ವರ್ಷಗಳಲ್ಲಿ ಆಗದ ಕೆಲಸ ಕಳೆದ ನಾಲ್ಕು ವರ್ಷಗಳಲ್ಲಿ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರವು ಐದು ವರ್ಷದಲ್ಲಿ ಕೇವಲ 18,000 ಕೋಟಿ ರೂ. ಅನುದಾನ ನೀಡಿದ್ದರೆ, ಆದರೆ ನಮ್ಮ ಸರ್ಕಾರದಲ್ಲಿ ಈವರೆಗೆ 45,000 ಕೋಟಿ ರೂ. ಖರ್ಚು ಮಾಡಿದ್ದು, ಐದು ವರ್ಷದಲ್ಲಿ ಒಟ್ಟು 61,000 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಹೇಳಿದರು. 

ಎಂಜಿನಿಯರ್‌ ಲೆಕ್ಕ ತಪ್ಪಾಗಿತ್ತು!
ಈ ಹಿಂದೆ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿದ್ದಾಗ ಕೂಡಲಸಂಗಮದವರೆಗೆ ಪಾದಯಾತ್ರೆ ನಡೆಸುವಾಗ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಎಂಜಿನಿಯರ್‌ರೊಬ್ಬರು ಸುಮಾರು 50,000 ಕೋಟಿ ರೂ. ಬೇಕಾಗಲಿದೆ ಎಂದು ಹೇಳಿದ್ದರು. ಅದರಂತೆ ಐದು ವರ್ಷದಲ್ಲಿ 50,000 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಯಿತು. ಆದರೆ ಇಂದು ಒಂದು ಲಕ್ಷ ಕೋಟಿ ರೂ. ನೀಡಿದರೂ ನೀರಾವರಿ ಯೋಜನೆಗಳು ಯಾವಾಗ ಪೂರ್ಣಗೊಳ್ಳಲಿವೆ ಎಂದು ನಿಖರವಾಗಿ ಹೇಳಲಾಗದು! ಹೀಗೆಂದು ಹೇಳಿದವರು ಸ್ವತಃ ಸಿಎಂ ಸಿದ್ದರಾಮಯ್ಯ. ಎಂಜಿನಿಯರ್‌ಗಳು ಕಾಲಮಿತಿಯೊಳಗೆ ಕಾಮಗಾರಿ ಮುಗಿಸದಿರುವ ಬಗ್ಗೆ ಪ್ರಸ್ತಾಪಿಸಿದ ಅವರು, “ಇಂದು 50,000 ಕೋಟಿ ರೂ. ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಿರಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 50,000 ಕೋಟಿ ರೂ. ಬೇಕಾಗಬಹುದು. ಹಾಗಾಗಿ ಎಂಜಿನಿಯರ್‌ಗಳು ಕಾಲಮಿತಿಯೊಳಗೆ ಯೋಜನೆಗಳನ್ನು ಮುಗಿಸದಿದ್ದರೆ
ವೆಚ್ಚ ಹೆಚ್ಚಳವಾಗಿ ಸರ್ಕಾರಕ್ಕೂ ಹೊರೆ ಬೀಳಲಿದೆ’ ಎಂದು ಹೇಳಿದರು.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.