ಕರ್ಣನ್‌ ನೇಪಾಲ,ಬಾಂಗ್ಲಾಗೆ ಎಸ್ಕೇಪ್‌ ? ರಾಷ್ಟ್ರಪತಿ ರಿಲೀಫ್ ಗೆ ಯತ್ನ


Team Udayavani, May 11, 2017, 3:55 PM IST

Justic Karnan-700.jpg

ಹೊಸದಿಲ್ಲಿ : ನ್ಯಾಯಾಲಯ ನಿಂದನೆಗಾಗಿ ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಲ್ಕತ್ತ ಹೈಕೋರ್ಟ್‌ ನ್ಯಾಯಾಧೀಶ ಜಸ್ಟಿಸ್‌ ಸಿ ಎಸ್‌ ಕರ್ಣನ್‌, ನೇಪಾಲ ಅಥವಾ ಬಾಂಗ್ಲಾದೇಶಕ್ಕೆ ಎಸ್ಕೇಪ್‌ ಆಗಿರಬಹುದು. ಅವರು ರಿಲೀಫ್ ಗಾಗಿ ರಾಷ್ಟ್ರಪತಿಯನ್ನು ಸಂಪರ್ಕಿಸುವ ಸಿದ್ಧತೆ ನಡೆಸುತ್ತಿರಬಹುದು ಎಂದು ಅವರ ಕಾನೂನು ಸಲಹೆಗಾರ ಇಂದು ಗುರುವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ. 

ಇದು ದೇಶದ ಉನ್ನತ ನ್ಯಾಯಾಂಗದಲ್ಲಿ ಏರ್ಪಟ್ಟಿರುವ ಸಂಘರ್ಷಕ್ಕೆ ದೊರಕಿರುವ ಹೊಸ ತಿರುವು ಎಂದು ತಿಳಿಯಲಾಗಿದೆ. 

ಜಸ್ಟಿಸ್‌ ಕರ್ಣನ್‌ ಅವರನ್ನು ಬಂಧಿಸಿ ಜೈಲಿಗಟ್ಟಲು ಪೊಲೀಸರು  ದೇಶದ ವಿವಿಧ ನಗರಗಳಲ್ಲಿ ಭಾರೀ ಹುಡುಕಾಟ ನಡೆಸಿದರಾದರೂ ಕರ್ಣನ್‌ ಅವರನ್ನು ಪತ್ತೆ ಹಚ್ಚಲು ಅವರಿಗೆ ಸಾಧ್ಯವಾಗಲಿಲ್ಲ. 

“ಕುಲಭೂಷಣ್‌ ಜಾದವ್‌ ಕೇಸ್‌ನಲ್ಲಿ  ಮಾಡಿರುವ ಹಾಗೆ ರಾಷ್ಟ್ರಪತಿಗಳು ಈ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಉಲ್ಲೇಖೀಸಬೇಕೆಂದು ನಾವು ಬಯಸುತ್ತೇವೆ; ನಾವು ಮುಂದಿನ ಹಂತದ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ; ಆದುದರಿಂದ ಆತ (ಕರ್ಣನ್‌) ಅಲ್ಲಿಯ ವರೆಗೆ ಅಡಗಿಕೊಂಡಿರುವ ಅಗತ್ಯವಿದೆ’ ಎಂದು ಮದ್ರಾಸ್‌ ಹೈಕೋರ್ಟಿನ ವಕೀಲರಾಗಿರುವ ಪೀಟರ್‌ ರಮೇಶ್‌ ಕುಮಾರ್‌ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

ಈ ನಡುವೆ ಕರ್ಣನ್‌ ಅವರ ಕಾನೂನು ಸಲಹಾ ತಂಡವು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿ ಕರ್ಣನ್‌ ಅವರಿಗಾಗಿರುವ ಶಿಕ್ಷೆ ಮತ್ತು ಬಂಧನದ ಆದೇಶವನ್ನು ಹಿಂಪಡೆಯುವಂತೆ ಕೇಳಿಕೊಂಡಿದೆ. ಜಸ್ಟಿಸ್‌ ಕರ್ಣನ್‌ ಅವರು “ನಾನೋರ್ವ ದಲಿತನಾಗಿರುವ ಕಾರಣಕ್ಕೆ ನನ್ನನ್ನು ಪ್ರತ್ಯೇಕಿಸಿ ಅನುಚಿತವಾಗಿ ನಡೆಸಿಕೊಳ್ಳಲಾಗುತ್ತಿದೆ; ನಿರಂತರ ಮಾನಸಿಕ ಹಿಂಸೆ, ಕಿರುಕುಳ ನೀಡಲಾಗುತ್ತಿದೆ’ ಎಂದು ಉನ್ನತ ನ್ಯಾಯಾಂಗದ ವಿರುದ್ಧ  ಪದೇ ಪದೇ ಆರೋಪ ಮಾಡುತ್ತಾ ಬಂದಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.