ಕಾಂಗ್ರೆಸ್ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯನಲ್ಲವೇ? ಸಿಎಂ ಹೇಳಿದ್ದೇನು?
Team Udayavani, May 12, 2017, 4:44 PM IST
ಬೆಂಗಳೂರು : ರಾಜ್ಯ ಕಾಂಗ್ರೆಸ್ನ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿಕೆ ನೀಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸರ್ಕಾರ 5 ನೇ ವರ್ಷಕ್ಕೆ ಕಾಲಿಟ್ಟ ಸಂಭ್ರಮದಲ್ಲಿ ನುಡಿದಂತೆ ನಡೆದಿದ್ದೇವೆ ಭರವಸೆಗಳನ್ನು ಈಡೇರಿಸಿದ್ದೇವೆ ಎನ್ನುವ ಪುಸ್ತಕವನ್ನು ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿದರು.ಅಚ್ಚರಿಯೆಂದರೆ ಈ ವೇಳೆ ಯವೊಬ್ಬ ಸಚಿವರೂ ಉಪಸ್ಥಿತರಿರಲಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ‘ನನಗೆ ಆತ್ಮವಿಶ್ವಾಸವಿದೆ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಮುಂದಿನ ಚುನಾವಣೆಯನ್ನು ನನ್ನ ನೇತೃತ್ವದಲ್ಲಿ ಎದುರಿಸಲಾಗುತ್ತದೆ. ಆದರೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದರು.
ಈ ಹಿಂದೆ ನೀವೇ ಮುಂದಿನ ಸಿಎಂ ಅಭ್ಯರ್ಥಿ ನಾನೇ ಎಂದಿದ್ದೀರಲ್ಲಾ ಎಂದು ಪ್ರಶ್ನಿಸಿದಾಗ ‘ಇಲ್ಲಾ ಅದು ನಾನು ಭಾಷಣ ಮಾಡುವಾಗ ಯರೋ ಒಬ್ಬ ಎದ್ದು ನಿಂತು ನಿವೇ ಮುಂದೆಯೂ ಸಿಎಂ ಆಗ್ಬೇಕು ಎಂದ .ಅದಕ್ಕೆ ಆಯ್ತಪ್ಪಾ ಮುಂದೆಯೂ ನಾನೇ ಆಯ್ತೀನಿ ಬಿಡು ಅಂದಿದ್ದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥವಿಸಿಕೊಳ್ಳಲಾಗಿದೆ’ ಎಂದರು.
ಯಡಿಯೂರಪ್ಪ ವಿರುದ್ಧ ಕಿಡಿ
ಸರ್ಕಾರದ ಬಗ್ಗೆ ಯಡಿಯೂರಪ್ಪ ಹಾಕಿರುವ ಚಾರ್ಜ್ ಶೀಟ್ ಬಗ್ಗೆ ಕೇಳಿದಾಗ ಕೆಂಡಾಮಂಡಲವಾದ ಸಿದ್ದರಾಮಯ್ಯ ‘ಅದೊಂದು ಸುಳ್ಳಿನ ಕಂತೆ, ಜೈಲಿಗೆ ಹೋಗಿಬಂದು ಪೋಲಿಸರಿಂದ ಹತ್ತಾರು ಚಾರ್ಜ್ ಶೀಟ್ ಹಾಕಿಸಿಕೊಂಡಿರುವ, ಸುಪ್ರೀಂಕೋರ್ಟ್, ಹೈಕೋರ್ಟ್ ಮತ್ತು ಲೋಕಾಯುಕ್ತದಲ್ಲೂ ಮೊಕದ್ದಮೆಗಳನ್ನು ಎದುರಿಸುತ್ತಿರುವ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ’ ಎಂದರು.
ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಎಂಬ ವರದಿ ಬಗ್ಗೆ ಕೇಳಿದಾಗ ಕಿಡಿಕಾರಿದ ಅವರು ‘ಈ ವರದಿಯನ್ನು ನರೇಂದ್ರಮೋದಿ ಕೃಪಾಪೋಷಿತ ನಾಟಕ ಮಂಡಳಿಯಾದ ನೀತಿ ಆಯೋಗದ ಸದಸ್ಯರೊಬ್ಬರು ಬಿಡುಗಡೆ ಮಾಡಿದ್ದು, ಆರೂವರೆ ಕೋಟಿ ಜನರ ಪೈಕಿ ಕೇವಲ 2000 ಜನರ ಅಭಿಪ್ರಾಯ ಪಡೆದು ನಡೆಸಿದ ಸಮೀಕ್ಷೆ ನಂಬಲು ಸಾಧ್ಯವಿಲ್ಲ’ ಎಂದರು.
ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು,ಇದೇ ವಿಚಾರದಲ್ಲಿ ಪಕ್ಷದಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣಗೋಪಾಲ್ ಅವರ ಬಳಿ ರಾಜ್ಯದ ಹಲವು ನಾಯಕರು ಅಸಮಧಾನ ಹೊರ ಹಾಕಿದ್ದರು. ಆ ಬಳಿಕ ಎಐಸಿಸಿ ಪಕ್ಷದಲ್ಲಿ ಹಲವು ಬದಲಾವಣೆ ಮಾಡಲು ಮುಂದಾಗಿದೆ. ಕೆಪಿಸಿಸಿಗೆ ನೂತನ ಅಧ್ಯಕ್ಷ ನ ಆಯ್ಕೆಯ ವಿಚಾರವೂ ಕಗ್ಗಂಟಾಗಿ ಪರಿಣಮಿಸಿದೆ. ಇದೀಗ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕಾಂಗ್ರೆಸ್ನ ನಾಯಕತ್ವದ ಬದಲಾವಣೆಯ ಸಾಧ್ಯತೆಯನ್ನು ಸೂಚಿಸುವಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.