ಹಾಸ್ಟೆಲ್‌ ವಿದ್ಯಾರ್ಥಿಗಳೇ ತಾಲೂಕಿಗೆ ಟಾಪರ್


Team Udayavani, May 13, 2017, 1:13 PM IST

dvg5.jpg

ಹರಪನಹಳ್ಳಿ: ಹಾಸ್ಟೆಲ್‌ಗ‌ಳೆಂದರೆ ಕೇವಲ ಊಟ ವಸತಿ ನೀಡುತ್ತಿವೆ. ಅಲ್ಲಿನ ಮಕ್ಕಳು ದುರಾಭ್ಯಾಸಕ್ಕೆ ತುತ್ತಾಗುತ್ತಾರೆಂದು ಹೇಳುವವರೇ ಜಾಸ್ತಿ. ಆದರೆ ಇದಕ್ಕೆ ಅಪವಾದ ಎನ್ನುವಂತೆ ಸರ್ಕಾರಿ ಹಾಸ್ಟೆಲ್‌ ನಲ್ಲಿದುಕೊಂಡು ಅಭ್ಯಾಸ ಮಾಡಿರುವ ವಿದ್ಯಾರ್ಥಿಗಳೇ ಇದೀಗ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.  

ಕಲಾ ವಿಭಾಗದಲ್ಲಿ ರಾಜ್ಯಕ್ಕೆ 7ನೇ ರ್‍ಯಾಂಕ್‌ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಶ್ರುತಿ ವಾಲೇಕಾರ್‌ -579(96.05), ಎಸ್‌ಎಸ್‌ಎಚ್‌ ಜೈನ್‌ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡದಿರುವ ಚೈತ್ರಾ-549(91), ಜೈನ್‌ ಕಾಲೇಜ್‌ನ ಎಸ್‌.ಜಯಶ್ರೀ-571 (95.16), ಎಸ್‌ಯುಜೆಎಂ ಕಾಲೇಜಿನ ಮಾಗಳ ಸಂಗೀತಾ-569(94.83), 

ಎಸ್‌.ಗೀತಾ-561(93.05) ಎಸ್‌. ಎಂ.ಗಂಗಮ್ಮ-558(93.1) ಎಸ್‌ .ಭಾಗ್ಯ-553(92.16), ಎಸ್‌. ಕಮಲಮ್ಮ-542 (90.33), ಜೆ.ಗಜೇಂದ್ರ-559(93.17), ರವೀಂದ್ರ ಬೆಂಡಿಗೇರಿ-541(90.17), ರೆಡ್ಡಿ ಜಗದೀಶ್‌-543(90.50) ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳೆಲ್ಲರೂ ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ)ಯ ಬಾಲಕರ ಮತ್ತು ಬಾಲಕಿರ ಹಾಸ್ಟೆಲ್‌ ಮಕ್ಕಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಹಗರಿಬೊಮ್ಮನಹಳ್ಳಿ ತಾಲೂಕಿನ ಕನ್ನಿಹಳ್ಳಿ ಗ್ರಾಮದ ಕೂಲಿಕಾರ ಕುಟುಂಬದ ವೆಂಕಟೇಶ್‌ ಹಾಗೂ ಹುಲಿಗೆಮ್ಮ ದಂಪತಿಯ ಪುತ್ರಿ ಶ್ರುತಿ ವಾಲೇಕಾರ್‌ ಪ್ರಥಮ ಪಿಯುಸಿ ಬಿಸಿಎಂ ಹಾಸ್ಟೆಲ್‌  ನಲ್ಲಿಯೇ ಅಭ್ಯಾಸ ಮಾಡಿ ದ್ವಿತೀಯ ವರ್ಷ ಅನಾರೋಗ್ಯದ ಹಿನ್ನೆಲೆಯಲ್ಲಿ ಮನೆಯಿಂದ ಕಾಲೇಜಿಗೆ ನಿತ್ಯ ಸಂಚರಿಸಿದ್ದಾರೆ. ನಮ್ಮದು ಬಡ ಕುಟುಂಬವಾಗಿದ್ದು, ತಾಯಿ ಕೂಲಿ ಮಾಡಿ ಓದಿಸುತ್ತಿದ್ದಳು.

ಪ್ರತಿನಿತ್ಯ 30 ಕಿ.ಮೀ ದೂರ ಕಾಲೇಜಿಗೆ ತೆರಳಿ ಕಷ್ಟಪಟ್ಟು ಓದಿದ್ದೇನೆ. ಉಪನ್ಯಾಸಕರ ಪ್ರೋತ್ಸಾಹದಿಂದ ರಾಜ್ಯಕ್ಕೆ 7ನೇ ರ್‍ಯಾಂಕ್‌ ಬಂದಿದ್ದು, ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಜಿಲ್ಲಾಧಿಧಿಕಾರಿಯಾಗಬೇಕೆಂಬ ಆಸೆಯಿದೆ ಎನ್ನುತ್ತಾರೆ ಶ್ರುತಿ ವಾಲೇಕಾರ್‌. ತಂದೆ-ತಾಯಿಯನ್ನು ಕಳೆದು ಕೊಂಡಿರುವ ರಾಗಿಮಲಸವಾಡ ಗ್ರಾಮದ ಡಿ.ಗಜೇಂದ್ರ 599 (93.17) ಅಂಕ ಪಡೆದು ಸಾಧನೆ ಮಾಡಿದ್ದಾನೆ.

ದೊಡ್ಡಪ್ಪನ ಮಕ್ಕಳ ಸಹಾಯದಿಂದ ಪ್ರೌಢ ಶಿಕ್ಷಣ ಪೂರೈಸಿ ನಂತರ ಅವರಿವರ ಸಹಾಯದಿಂದ ಹರಪನಹಳ್ಳಿಯ ಎಸ್‌ಯುಜೆಎಂ ಕಾಲೇಜಿನಲ್ಲಿ ಪಿಯುಸಿ ಪ್ರವೇಶ ಪಡೆದು ಬಿಸಿಎಂ ಹಾಸ್ಟೆಲ್‌ ಸೇರಿಕೊಂಡ. ಸ್ನೇಹಿತರು, ಗ್ರಾಂಥಾಲಯದಿಂದ ಪುಸ್ತಕ ಪಡೆದು ಕಠಿಣ ಅಭ್ಯಾಸ ಮಾಡಿ ಹೆಚ್ಚು ಅಂಕ ಗಳಿಸಿದ್ದಾನೆ. ಆದರೆ ಸಂತೋಷವನ್ನು ಸಂಭ್ರಮಿಸಲು ಪೋಷಕರೇ ಇಲ್ಲ.

ಪ್ರಾಥಮಿಕ ಹಂತದಲ್ಲಿ ಶಿಕ್ಷಕಿ ಕೋಟ್ರಮ್ಮ, ಪ್ರೌಢ ಶಾಲೆಯ ಶಿಕ್ಷಕ ನಾಗರಾಜ್‌, ಪಿಯುಸಿಯಲ್ಲಿ ಸೀತರಾಮ ಹೆಗಡೆ, ವಾರ್ಡ್‌ನ್‌ ಬಿ.ಎಚ್‌.ಚಂದ್ರಪ್ಪ ಗಜೇಂದ್ರನಿಗೆ ತಂದೆ-ತಾಯಿ ಇಲ್ಲವೆಂಬ ಕೊರಗು ದೂರ ಮಾಡಿದ್ದಾರೆ. ಕಷ್ಟಪಟ್ಟು ಓದಿ ಜಿಲ್ಲಾಧಿಧಿಕಾರಿಯಾಗಬೇಕು ಎಂಬ ಕನಸು ಗಜೇಂದ್ರನಿಗಿದೆ. ಬಿಸಿಎಂ ಬಾಲಕರ ಹಾಸ್ಟೆಲ್‌ನಲ್ಲಿ ಪರೀಕ್ಷೆ ಬರೆದ 34 ವಿದ್ಯಾರ್ಥಿಗಳಲ್ಲಿ 33 ಜನರು ಪಾಸಾಗಿದ್ದಾರೆ.

16-ಡಿಸ್ಟಂಕ್ಷನ್‌, 16-ಪ್ರಥಮ ಶ್ರೇಣಿ, 1 ದ್ವೀತಿಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಸ್ಟೆಲ್‌ನಲ್ಲಿ ಮಕ್ಕಳು ಸ್ಪರ್ಧಾತ್ಮಕ ವಿಷಯಗಳಿಗೆ ಅಣಿ ಮಾಡಲು ಗ್ರಂಥಾಲಯ ಸ್ಥಾಪಿಸಿ ಅಪಾರ ಪುಸ್ತಕ ಭಂಡಾರದ ಸಂಗ್ರಹವಿದೆ. ಹಾಸ್ಟೆಲ್‌ನ “ದಾರಿ ದೀಪ’ ಎಂಬ ವೇದಿಕೆ ಮೂಲಕ 2 ತಿಂಗಳಿಗೊಮ್ಮೆ ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕೆಂಬ ಮಾರ್ಗದರ್ಶನ ನೀಡಲಾಗುತ್ತಿದೆ. ಇಲ್ಲಿನ ವಾರ್ಡ್‌ ಚಂದ್ರಪ್ಪ ಅವರು ಪ್ರತಿ ಮಕ್ಕಳ ಬಗ್ಗೆ ಕಾಳಜಿವಹಿಸಿ ಹೆಚ್ಚಿನ ಅಂಕ ಪಡೆಯುವಂತೆ ಪ್ರೇರಣೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13-dandeli

ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.