ಕೌಶಲ ಕರ್ನಾಟಕ: ದ.ಕ.ಜಿಲ್ಲೆಯಲ್ಲಿ  ಚಾಲನೆ


Team Udayavani, May 16, 2017, 5:06 PM IST

rai.jpg

ಮಂಗಳೂರು: ರಾಜ್ಯದ 5 ಲಕ್ಷ ನಿರುದ್ಯೋಗಿಗಳಿಗೆ  ಕೌಶಲಾಭಿವೃದ್ದಿ ಕಾರ್ಯಕ್ರಮದ ಮೂಲಕ ತರ ಬೇತಿ ನೀಡಲು ರಾಜ್ಯ ಸರಕಾರ ಉದ್ದೇಶಿಸಿದ್ದು, ತರಬೇತಿ ಪಡೆದ ಶೇ.70ರಷ್ಟು ಯುವಕರಿಗೆ ಸರಕಾರದ ವತಿಯಿಂದ ಉದ್ಯೋಗವಕಾಶ ದೊರಕಿಸಿಕೊಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಮುಖ್ಯಮಂತ್ರಿಯವರ ಕೌಶಲ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಮಂಗಳೂರು ಪುರಭವನದಲ್ಲಿ ಸೋಮವಾರ ಹಮ್ಮಿಕೊಂಡ ದ.ಕ. ಜಿಲ್ಲೆಯಲ್ಲಿ  ನಿರುದ್ಯೋಗಿ ಯುವ ಜನರ ಬೇಡಿಕೆ-ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

16ರಿಂದ 38ರ ವಯಸ್ಸಿನ  ಶಾಲೆ ಅರ್ಧದಲ್ಲಿ ತೊರೆದವರಿಗೆ, ಶಾಲೆಗೆ ಹೋಗಿ ಕೆಲಸ ಸಿಗದ ಯುವಜನರಿಗೆ ಕೌಶಲ ಯೋಜನೆಯಡಿಯಲ್ಲಿ ವಿವಿಧ ಕೌಶಲ ತರಬೇತಿಗಳನ್ನು ನೀಡಲಾಗು ತ್ತದೆ. ತರಬೇತಿ ಪಡೆದವರಿಗೆ ಸರಕಾರದ ವತಿಯಿಂದ ಸರ್ಟಿಫಿಕೇಟ್‌ ನೀಡಲಾಗುವುದು ಎಂದರು.

ದ.ಕ. ಜಿಲ್ಲೆಯಲ್ಲಿ ಕೆಲವರು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಾರೆ. ಬಹಳಷ್ಟು ಮಂದಿಗೆ ಅರ್ಹ ಉದ್ಯೋಗ ಸಿಗುವುದಿಲ್ಲ. ಅದಕ್ಕಾಗಿ ಕೌಶಲ ಅಭಿವೃದ್ಧಿ ತರಬೇತಿ ನೀಡಲಾ ಗುತ್ತದೆ. ಯುವ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಶಾಸಕ ಜೆ.ಆರ್‌. ಲೋಬೋ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ತಾ.ಪಂ.ಅಧ್ಯಕ್ಷ ಮುಹಮ್ಮದ್‌ ಮೋನು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮಹಮ್ಮದ್‌ ಹನೀಫ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌, ಜಿಲ್ಲಾಧಿಕಾರಿ ಡಾ| ಕೆ.ಜಿ.ಜಗದೀಶ್‌, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ |ಎಂ.ಆರ್‌.ರವಿ, ಉಪಕಾರ್ಯ ದರ್ಶಿ ಉಮೇಶ್‌, ಮಂಗಳೂರು ಪಾಲಿಕೆ ಆಯುಕ್ತ ಮಹಮ್ಮದ್‌ ನಝೀರ್‌, ಉಪ ಆಯುಕ್ತ ಗೋಕುಲ್‌ ದಾಸ್‌ ನಾಯಕ್‌ ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಕುಮಾರ್‌ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಎಲ್ಲ  ತಾಲೂಕು ಕಚೇರಿಗಳಲ್ಲಿ ನೋಂದಣಿಗೆ ಅವಕಾಶ
ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಮಾತನಾಡಿ, 16 ವಯಸ್ಸಿ  ಗಿಂತ ಮೇಲ್ಪಟ್ಟವರು ತಮಗೆ ಯಾವುದಾದರೂ ಉದ್ಯೋಗದ ತರಬೇತಿ ಅಗತ್ಯವಿದ್ದಲ್ಲಿ ಅಂತಹ ತರಬೇತಿಯನ್ನು ರಾಜ್ಯ ಸರಕಾರವು ಉಚಿತವಾಗಿ ನೀಡಲಿದೆ. ವಿಶೇಷತೆ ಎಂದರೆ ಈ ಯೋಜನೆಗೆ ಹೆಸರು ನೋಂದಾಯಿಸಲು ಯಾವುದೇ ಶಿಕ್ಷಣದ ಅರ್ಹತೆ ಬೇಕಾಗಿಲ್ಲ. ಯೋಜನೆಯಲ್ಲಿ  ಹೆಸರು ನೋಂದಣಿಗಾಗಿ ರಾಜ್ಯ ಸರಕಾರ ವೆಬ್‌ಸೈಟ್‌ kaushalkar.comನಲ್ಲಿ ಅಭ್ಯರ್ಥಿಯ ಎಲ್ಲ ವಿವರಗಳ ನೋಂದಣಿ ಮಾಡ ಬೇಕು. ಯೋಜನೆಯ ವಿಶೇಷ ಅಭಿಯಾನದ ಅಂಗವಾಗಿ ಮೇ 15ರಿಂದ 27ರ ವರೆಗೆ ರಾಜ್ಯದ ಎಲ್ಲ ತಾಲೂಕು ಕಚೇರಿಗಳಲ್ಲಿ ಕೌಶಲ ಆಸಕ್ತರು ಹೆಸರು ನೋಂದಾ ಯಿಸಲು ಕೌಂಟರ್‌ಗಳನ್ನು ಸ್ಥಾಪಿಸ ಲಾಗಿರುತ್ತದೆ. ಮಂಗಳೂರು ಕಾರ್‌ಸ್ಟ್ರೀಟ್‌ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಣಿಗೆ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.