ಪೇಪರ್ನಲ್ಲಿ ಆಹಾರ ಪದಾರ್ಥ ನೀಡಲು ನಿಷೇಧ
Team Udayavani, May 19, 2017, 5:00 PM IST
ಕಲಬುರಗಿ: ವೃತ್ತ ಪತ್ರಿಕೆ ಹಾಳೆಯಲ್ಲಿ ಆಹಾರ ಕಟ್ಟಿ ಕೊಡುವುದು ಮತ್ತು ಅದರಲ್ಲಿಯೇ ಆಹಾರ ಹಾಕಿಕೊಂಡು ಉಣ್ಣುವುದು ಸೇರಿದಂತೆ ಇತರೆ ಬಳಕೆಗೆ ಪೇಪರ್ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ ಪ್ರಾಧಿಕಾರದ ಅಂಕಿತ ಅಧಿಕಾರಿ ಆರ್.ಎಸ್. ಬಿರಾದಾರ ಹೇಳಿದ್ದಾರೆ.
ನಗರದ ಹಲವು ಹೋಟೆಲ್ ಮತ್ತು ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಜನ ಸಾಮಾನ್ಯರಿಗೆ ನ್ಯೂಸ್ ಪೇಪರ್ನಲ್ಲಿ ಆಹಾರ ಪೊಟ್ಟಣದಲ್ಲಿ ಕಟ್ಟಿ ಕೊಡುವುದು ಸೇರಿದಂತೆ ಇತರೆ ಬಳಕೆಗೆ ಪೇಪರ್ ನಿಷೇಧ ಮಾಡಲಾಗಿದೆ. ಕೂಡಲೇ ನಿಲ್ಲಿಸಬೇಕು ಎಂದು ಜಾಗೃತಿ ಮೂಡಿಸಿದರು.
ನ್ಯೂಸ್ ಪೇಪರಿನ ಮಸಿ ಮತ್ತು ಪೇಪರಿಗೆ ಅಂಟಿಕೊಂಡಿರುವ ವಿಷಕಾರಿ ಮಸಿ ಆಹಾರ ಪದಾರ್ಥ ತಿಂದರೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವುದು ಎಂದು ಹೇಳಿದರು. ಸುಣ್ಣದ ಪ್ಯಾಕ್ ಮತ್ತು ಸುಣ್ಣದ ಟ್ಯೂಬ್ ಮಾರಾಟ ಮಾಡುವುದು ಹಾಗೂ ಮಶಿ ಅಳಿಸುವ ದ್ರವ ಮತ್ತು ಥಿನ್ನರ್, ಉಗುರು ಪಾಲೀಸ್ ರಾಜ್ಯಾದ್ಯಂತ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿ ಇದೆಲ್ಲವನ್ನು ಮಾರಾಟ ಮಾಡುವ ಮತ್ತು ಹೋಟೆಲ್, ಇತರೆ ಅಂಗಡಿಗಳು, ಬಂಡಿಗಳಲ್ಲಿ ವ್ಯಾಪಾರ ಮಾಡುವವರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವರಿಕೆ ಮಾಡಿದರು. ಸುಣ್ಣದ ಪ್ಯಾಕೇಟ್ ಒಡೆದಾಗ ಕಣ್ಣಿನಲ್ಲಿ ಬೀಳುವ ಸಂಭವವಿದ್ದು, ಮಕ್ಕಳು ಮತ್ತು ಸುಣ್ಣವನ್ನು ಉಪಯೋಗಿಸುತ್ತಿರುವ ಜನಸಮಾನ್ಯರಿಗೆ ಸುಣ್ಣದ ಟ್ಯೂಬ್ ಮತ್ತು ಸುಣ್ಣದ ಪ್ಯಾಕೇಟ್ ಮಾರಾಟ ಮಾಡದಂತೆಯೂ ನಿಷೇಧಿಸಿದೆ.
ಮಷಿ ಅಳಿಸುವ ದ್ರವ ಮತ್ತು ಉಗುರು ಪಾಲೀಸ್ ರಿಮೂವರ್ ಮುಂತಾದವುಗಳನ್ನು ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರು ಬಳಸುವುದರಿಂದ ಮಕ್ಕಳ, ಮಹಿಳೆಯರ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಇಷ್ಟು ಮಾಹಿತಿ ಮತ್ತು ನಿಷೇಧದ ಬಳಿಕವೂ ಯಾರಾದರೂ ಪೇಪರ್ ಬಳಕೆ ಮತ್ತು ಸುಣ್ಣದ ಟ್ಯೂಬ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಬಳಕೆ ಮಾಡುತ್ತಿದ್ದರೆ ಸಾರ್ವಜನಿಕರು ಈ ಕುರಿತು ಅಂಕಿತ ಅಧಿಕಾರಿಗಳು ಆಹಾರ ಸುರûಾತಾ ಮತ್ತು ಗುಣಮಟ್ಟ ಪ್ರಾಧಿಧಿಕಾರ, ಹಳೆ ಎಸ್.ಪಿ. ಕಚೇರಿ ಹಿಂಭಾಗ ಕಲಬುರಗಿ ಕಚೇರಿಗೆ ದೂರು ಸಲ್ಲಿಸಬಹುದು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.