![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
ಉದ್ಯೋಗ ಖಾತ್ರಿಗೆ ಪ್ರತ್ಯೇಕ ಸಿಬ್ಬಂದಿ ನೇಮಿಸಿ
Team Udayavani, May 19, 2017, 5:00 PM IST
![gul2.jpg](https://www.udayavani.com/wp-content/uploads/2017/05/19/gul2.jpg)
ಚಿಂಚೋಳಿ: ಉದ್ಯೋಗ ಖಾತರಿ ಯೋಜನೆಗಾಗಿಯೇ ಒಬ್ಬ ಸಿಬ್ಬಂದಿ ನೇಮಿಸಿದರೆ ಎನ್ಎಂಆರ್ ಸಮಸ್ಯೆ ಪರಿಹಾರವಾಗುತ್ತದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ಹೇಳಿದರು. ತಾಲೂಕಿನ ಶಾದೀಪುರದಲ್ಲಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ, ಜಿಪಂ, ತಾಪಂ, ಪ್ರಜ್ಞಾ ಕಾನೂನು ಸಲಹಾ ಸಮಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಚಿಂಚೋಳಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಸಂಘಟನೆಯಿಂದ ಮಹಾತ್ಮಗಾಂಧಿಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಸುಮಾರು 7000ಕ್ಕಿಂತ ಹೆಚ್ಚು ಫಾರ್ಮ ನಂ. 6 ಮತ್ತು 1ನ್ನು ಭರ್ತಿ ಮಾಡಿ ಗ್ರಾಪಂಗಳಿಗೆ ನೀಡಿ ಜಾಬ್ ಕಾರ್ಡ್ ಕೊಡಿಸಲಾಗಿದೆ.
ಗ್ರಾಪಂಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ಎನ್ಎಂಆರ್ ತಯಾರಿಸಲು ವಿಳಂಬವಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಗಾಗಿಯೇ ಸಿಬ್ಬಂದಿ ನೇಮಿಸಿದರೆ ಸಮಸ್ಯೆ ಪರಿಹಾರವಾಗುತ್ತದೆ. ಎನ್ಎಂಆರ್ ತೆಗೆದ ನಂತರ ಆಯಾ ಗ್ರಾಪಂಗಳಲ್ಲಿ ಕೆಲಸ ಪ್ರಾರಂಭಿಸುವುದಕ್ಕಿಂತ ಮೊದಲು ಎನ್ಎಂಆರ್ನಲ್ಲಿರುವ ಕೂಲಿಕಾರರ ಹೆಸರು ತಿಳಿಸಿ ಅವರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು.
ಕಾಯಕ ಬಂಧುಗಳಿಗೆ ತರಬೇತಿ ನೀಡಬೇಕು. ಪ್ರತಿ ಹಳ್ಳಿಗೆ ಒಬ್ಬ ಕ್ಷೇತ್ರ ಸಹಾಯಕರನ್ನು ನೇಮಿಸಬೇಕು ಎಂದು ಹೇಳಿದರು. ಚಿತ್ರನಟ ಚೇತನ ಮಾತನಾಡಿ, ಈಗ ಜಲಾನಯನ ವ್ಯವಸ್ಥೆಗಳನ್ನು ಪುನರುಜ್ಜೀವನಗೊಳಿಸುವ ಅವಶ್ಯಕತೆಯಿದೆ. ಮಳೆ ನೀರು ಶೇಖರಿಸಿಡಲು ಚೆಕ್ ಡ್ಯಾಂ, ಕೆರೆ, ಟ್ರೇಂಚೆಸ್, ಅರಣ್ಯೀಕರಣ ಕಾಮಗಾರಿ ಕೈಗೊಳ್ಳಬೇಕು.
ಯುವಕರು ಎಲ್ಲ ರಂಗಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಬೇಕು. ಹಿರಿಯರು ಇದಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಹೆಪ್ಸಿರಾಣಿ ಕೋರ್ಲಪಾಟಿ, ತಾಲೂಕಿನ ಕುಂಚಾವರಂ ಗಡಿ ಪ್ರದೇಶದಲ್ಲಿ ನರೇಗಾ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.
ಕಾರ್ಮಿಕರಿಗೆ ಕೂಲಿ ಸಿಗುತ್ತಿದೆ. ಚಿಂಚೋಳಿ ತಾಲೂಕಿನ 36 ಗ್ರಾಪಂಗಳಲ್ಲಿ ಏಪ್ರಿಲ್ 1ರಿಂದ ಒಟ್ಟು 28ಸಾವಿರ ಮಾನವ ದಿನಗಳು ಸೃಷ್ಟಿಸಲಾಗಿದೆ. ಜನರು ಸರಕಾರದ ಯೋಜನೆ ಗ್ರಹಿಸಿ ಉಪಯೋಗಿಸಿಕೊಳ್ಳಬೇಕು. ಉದ್ಯೋಗ ನಿಮ್ಮ ಹಕ್ಕು ಆಗಿದೆ. ಯಾರಿಗೂ ಜಾಬ್ ಕಾರ್ಡ್ ಕೊಡಬಾರದು. ಯಾವುದೇ ಭ್ರಷ್ಟಾಚಾರ ಆಗದಂತೆ ಫಲಾನುಭವಿಗಳ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆ ಮಾಡಲಾಗಿದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಮಾತನಾಡಿದರು. ತಾಪಂ ಅಧಿಧಿಕಾರಿ ಅನೀಲಕುಮಾರ ರಾಠೊಡ, ತಹಶೀಲ್ದಾರ ದಯಾನಂದ ಪಾಟೀಲ, ಅನಂತ ನಾಯಕ, ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಪೂಜಾರಿ, ಪಿಡಿಒ ತುಕ್ಕಪ್ಪ, ನಂದಾದೇವಿ, ಸೌಭಾಗ್ಯಮ್ಮ ಮಠಪತಿ ಇದ್ದರು. ಪಿಡಿಒ ರಾಮಕೃಷ್ಣ ಸ್ವಾಗತಿಸಿದರು. ಡಾ| ಮೀನಾಕ್ಷಿ ಬಾಳಿ ನಿರೂಪಿಸಿದರು. ಭೀಮಾಶಂಕರ ವಂದಿಸಿದರು.
ಟಾಪ್ ನ್ಯೂಸ್
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sharana-Patil](https://www.udayavani.com/wp-content/uploads/2024/12/Sharana-Patil-150x90.jpg)
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
![All set for the Indian Cultural Festival](https://www.udayavani.com/wp-content/uploads/2024/12/samas-150x86.jpg)
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
![Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ](https://www.udayavani.com/wp-content/uploads/2024/12/cafe-150x86.jpg)
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
![Collection of donations in the name of Sri Siddalinga of Siddaganga Math: Old students upset](https://www.udayavani.com/wp-content/uploads/2024/12/kal-1-150x84.jpg)
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
![Togari completely destroyed by neti disease](https://www.udayavani.com/wp-content/uploads/2024/12/toigar-150x84.jpg)
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-150x84.jpg)
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.