ತಾಪಂ ಸಭೆಯಲ್ಲಿ ಸಿಡಿಪಿಒ ವಿರುದ್ಧ ಆರೋಪ


Team Udayavani, May 20, 2017, 4:40 PM IST

gul3.jpg

ಸೇಡಂ: ಅಂಗನವಾಡಿಗಳಲ್ಲಿ ಮಕ್ಕಳ ಅನುಪಸ್ಥಿತಿ ಮತ್ತು ಕೆಲ ಲೋಪದೋಷಗಳ ವಿರುದ್ಧ ತಾಪಂ ಸಭಾಂಗಣದಲ್ಲಿ ಸಭಾ ಅಧ್ಯಕ್ಷರೇ ಹೌಹಾರಿದ ಪ್ರಸಂಗ ನಡೆಯಿತು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಖುದ್ದು ತಾಪಂ ಅಧ್ಯಕ್ಷೆ ಸುರೇಖಾ ರಾಜಶೇಖರ ಪುರಾಣಿಕ ಅಸಮಾಧಾನ ವ್ಯಕ್ತಪಡಿಸಿದರು. 

ಅನೇಕ ಅಂಗನವಾಡಿಗಳಲ್ಲಿ ಮಕ್ಕಳೇ ಇರೋದಿಲ್ಲ. ಆದರೆ ಖರ್ಚು ವೆಚ್ಚ ಮಾತ್ರ ದಾಖಲೆಗಳಲ್ಲಿ ತೋರಿಸ್ತೀರಿ. ಆಹಾರ ಧಾನ್ಯಗಳು ಕಾಳಸಂತೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು. ಆಗ ಕಕ್ಕಾಬಿಕ್ಕಿಯಾದ ಅಧಿಕಾರಿ ಅಶೋಕ ರಾಜನ್‌, ಕೆಲ ಕೇಂದ್ರಗಳಲ್ಲಿ ಮಾತ್ರ ಪರಿಸ್ಥಿತಿ ಬಿಗಡಾಯಿಸಿದೆ ಎಂದು ಉತ್ತರಿಸಿದರು. 

ಈ ಕುರಿತು ವರದಿ ಮಾಡಿ, ಕ್ರಮಕ್ಕೆ ಸೂಚಿಸಿದಲ್ಲಿ ಕೆಲ ರಾಜಕಾರಣಿಗಳೇ ಅಂಗನವಾಡಿ ಕಾರ್ಯಕರ್ತೆಯರ ಪರ ನಿಲ್ಲುತ್ತಾರೆ ಎಂದು ಆರೋಪಿಸಿದರು. ಈ ವೇಳೆ ಸಭೆಯಲ್ಲಿದ್ದ ಬಹುತೇಕ ಸದಸ್ಯರು ಕರ್ತವ್ಯ ದ್ರೋಹ ಎಸಗುವ ಅಂಗನವಾಡಿ ಕಾರ್ಯಕರ್ತೆಯರನ್ನು ಮುಲಾಜಿಲ್ಲದೆ ತೆಗೆದು ಹಾಕುವಂತೆ ಒತ್ತಾಯಿಸಿದರು. 

ಸುಮಾರು ವರ್ಷಗಳಿಂದ ಇಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಮೇಲ್ವಿಚಾರಕಿಯರನ್ನು ಬೇರೆಡೆ ವರ್ಗಾಯಿಸಲು ಶಿಪಾರಸ್ಸು ಮಾಡುವಂತೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು. ತಾಪಂ ಯೋಜನಾಧಿಕಾರಿ ಹಣಮಂತ ಮಾತನಾಡಿ ಪ್ರಸ್ತಕ ವರ್ಷಕ್ಕೆ ಸರ್ಕಾರದಿಂದ 21 ಕೋಟಿ ಅನುದಾನ ಬಂದಿದೆ. 

ಮುಂದಿನ ದಿನಗಳಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗುವುದು. ಯಾವ ಯಾವ ಕೆಲಸ ಕೈಗೊಳ್ಳಬೇಕು ಎನ್ನುಉದರ ಬಗ್ಗೆ ಸದಸ್ಯರು ತಿಳಿಸಬೇಕು ಎಂದು ಹೇಳಿದರು. ತಾಲೂಕಿನ ಕೊತ್ತಾಪಲ್ಲಿ, ಕಾನಗಡ್ಡಾ, ಇಟಕಾಲ, ದುಗನೂರ, ಬಿಲಾಕಲ್‌, ಹಣಮನಹಳ್ಳಿ ಗ್ರಾಮಗಳನ್ನು 2017-18ನೇ ಸಾಲಿನ ಗೊಂಚಲು ಗ್ರಾಮಗಳನ್ನಾಗಿ ಆಯ್ಕೆಗೊಳಿಸಲಾಯಿತು. 

ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಎ. ವೈ. ಹಂಪಣ್ಣ ಮಾತನಾಡಿ, ಮುಂಗಾರು ಬೆಳೆಗೆ ವಾಡಿಕೆಯಷ್ಟು ಮಳೆಯಾಗುತ್ತದೆ ಎನ್ನುವುದು ಹವಾಮಾನ ಇಲಾಖೆ ನಿರೀಕ್ಷೆಯಾಗಿದೆ. ಅದರಂತೆ ಈಗಾಗಲೇ ಬಿತ್ತನೆಗೆ ಬೇಕಾಗುವ ಬೀಜಗಳನ್ನು ಶೇಖರಿಸಲಾಗಿದೆ. ಯಾವುದೆ ರೀತಿಯಿಂದ ಬೀಜಗಳ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ ಶೆಟಗಾರ, ಸದಸ್ಯರಾದ ವೆಂಕಟರಾಮರೆಡ್ಡಿ ಕಡತಾಲ, ಚನ್ನಬಸಪ್ಪ ಹಾಗರಗಿ(ಜಗ್ಗು), ನಾಗರೆಡ್ಡಿ ದೇಶಮುಖ, ಸತ್ಯನಾರಾಯಣರೆಡ್ಡಿ ದೇಶಮುಖ, ಅನವೇಶರೆಡ್ಡಿ ಹೂವಿನಭಾವಿ, ಡಾ| ವೆಂಕಟರಾವ ಮಿಸ್ಕಿನ್‌, ಪ್ರೀತಿ ಸಾಯಿಬಣ್ಣ, ಸಿದ್ದಮ್ಮ ಶಾಮಪ್ಪ,

ರಾಮುನಾಯಕ, ಸುನೀತಾ ಪರಶುರಾಮರೆಡ್ಡಿ, ಇಂದ್ರಾದೇವಿ ಬಸವರಾಜಪ್ಪಗೌಡ, ಪದ್ಮಮ್ಮ ರವೀಂದ್ರ, ಮಲ್ಲಿಕಾರ್ಜುನರೆಡ್ಡಿ ಕೋಲಕುಂದಾ, ದೇವಮ್ಮ ರಾಮಲಿಂಗಪ್ಪ, ಅಧಿಕಾರಿಗಳಾದ ಸಂತೋಷ ಶೇಷಲು, ಮಾರುತಿ ನಾಯಕ, ಗುರುರಾಜ ಜೋಶಿ, ಶಶಿಕಾಂತ ನಂದೂರ, ಎಸ್‌.ಎಮ್‌. ನಾರಾಯಣಕರ್‌, 

ಮುಕುಂದರೆಡ್ಡಿ ಪಾಟೀಲ, ಸಂತೋಷಕುಮಾರ, ತಿಮ್ಮಾರೆಡ್ಡಿ, ಶಿವಶಂಕರ ಟಿ.ಡಿ, ಅಶೋಕ ಪಾಟೀಲ, ಭೀಮಾಶಂಕರ ಕಟ್ಟಿಮನಿ, ರಾಜು ಕುಲಕರ್ಣಿ, ಶಿವಪುತ್ರಪ್ಪ ಮಮ್ಮಶೆಟ್ಟಿ, ಮಂಜುನಾಥ ಭೂಶೆಟ್ಟಿ, ಎಸ್‌.ಎನ್‌. ರವೀಂದ್ರ, ಬಸವರಾಜ ಅವಂಟಿ ಇದ್ದರು. ರವಿ ಕುದುರೆನ್‌ ಸ್ವಾಗತಿಸಿದರು.  

ಟಾಪ್ ನ್ಯೂಸ್

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.