ಸರಕಾರದ ಭರವಸೆ: ಪಶುವೈದ್ಯರ ಧರಣಿ ಅಂತ್ಯ
Team Udayavani, May 22, 2017, 4:45 PM IST
ಕಲಬುರಗಿ: ವೃಂದ ಹಾಗೂ ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಜಾರಿ ಮತ್ತು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ಪಶು ವೈದ್ಯರು ಹಾಗೂ ಪಶು ವೈದ್ಯಕೀಯ ಇಲಾಖೆ ನೌಕರರು ನಡೆಯುತ್ತಿದ್ದ ಅನಿರ್ಧಿಷ್ಟ ಸತ್ಯಾಗ್ರಹ ಸರಕಾರ ನೀಡಿದ ಭರವಸೆ ಹಿನ್ನೆಲೆಯಲ್ಲಿ ಶನಿವಾರ ಕೊನೆಗೊಂಡಿದೆ.
ಆದರೆ, ಸರಕಾರ ಮಾತು ಕೊಟ್ಟಿರುವಂತೆ ಜೂ.4ರೊಳಗಾಗಿ ಅಧಿಸೂಚನೆ ಹೊರಡಿಸದೇ ಇದ್ದರೆ 5ರಿಂದ ಬೆಂಗಳೂರಿನ μÅàಡ್ಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲ ಸಿಬ್ಬಂದಿ ಪುನಃ ಅನಿರ್ಧಿಷ್ಟ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳಿಂದ ನಡೆಯುತ್ತಿದ್ದ ಧರಣಿಗೆ ಮಣಿದು ಮಾತುಕತೆಗೆ ಆಹ್ವಾನಿಸಿದ್ದ ಸರಕಾರ ಕೂಡಲೇ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸುವ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಕತ್ರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಕೈಬಿಡಲಾಗಿದೆ.
ನಗರದ ಪಶು ಸಂಗೋಪನಾ ಇಲಾಖೆ ಕಚೇರಿ ಎದುರು ನಿತ್ಯ 200-250 ಜನ ಸಿಬ್ಬಂದಿ ಧರಣಿಯಲ್ಲಿ ಭಾಗವಹಿಸುತ್ತಿದ್ದರು. ಧರಣಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ರೈತ ಕೃಷಿ ಕಾರ್ಮಿಕ ಸಂಘಟನೆಯ ಭೀಮಾಶಂಕರ ಪಾಣೆಗಾಂವ, ವಿಶ್ವನಾಥ ಭೀಮಳ್ಳಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ
-ಪಶು ವೈದ್ಯರು ಹಾಗೂ ಪಶು ವೈದ್ಯಕೀಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ನಿಜಲಿಂಗಪ್ಪ ಕೊರಳ್ಳಿ, ಉಪಾಧ್ಯಕ್ಷೆ ಸುಜಾತಾ ಗೌತಮ್ ಕಾಂಬಳೆ, ಕಾರ್ಯಾಧ್ಯಕ್ಷ ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಮಹಾಗಾಂವ, ಶಂಕರ ದೊಡ್ಡಮನಿ, ಸಂಗಮನಾಥ, ಬಸಲಿಂಗಪ್ಪ ಜಮಾದಾರ, ಅಂಜುಬಾಯಿ ಜಾಲವಾದಿ, ಮಲ್ಲಿನಾಥ, ನೀಲಪ್ಪ ಚಿಂಚೂರೆ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.