ಆರ್‌ಬಿಐ ಅಂಬೇಡ್ಕರ್‌ ಚಿಂತನೆಗಳ ಫಲ


Team Udayavani, May 22, 2017, 4:45 PM IST

gul3.jpg

ಕಲಬುರಗಿ: ಡಾ| ಬಾಬಾಸಾಹೇಬ ಅಂಬೇಡ್ಕರ್‌ ಅವರ ಚಿಂತನೆಗಳ ಫಲವಾಗಿಯೇ ದೇಶಕ್ಕೆ ಮಾದರಿಯಾಗಿರುವ ಆರ್‌ಬಿಐ ಸೇರಿದಂತೆ ಬ್ಯಾಂಕಿಂಗ್‌ ವಲಯ ಸಾಕಾರಗೊಂಡಿದೆ ಎಂದು ಖ್ಯಾತ ವಿಚಾರವಾದಿ ಡಾ| ಚಂದ್ರಶೇಖರ ಕಟ್ಟಿಮನಿ ಅಭಿಪ್ರಾಯಪಟ್ಟರು. 

ನಗರದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ರವಿವಾರ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಕಲ್ಯಾಣ ಸಂಘ ಹಮ್ಮಿಕೊಂಡಿದ್ದ ಕಲಬುರಗಿ ಮತ್ತು ಬೀದರ ವಲಯ ಸಮ್ಮೇಳನದಲ್ಲಿ  ಡಾ| ಅಂಬೇಡ್ಕರ್‌ ಚಳವಳಿಗಳ ಕುರಿತು ಅವರು ಮಾತನಾಡಿದರು. 

ಬ್ಯಾಂಕಿಂಗ್‌ ಕ್ಷೇತ್ರ ಈಗ ತುಂಬಾ ಎತ್ತರದಲ್ಲಿದೆ. ಅದರ ಉನ್ನತಿಗಾಗಿ ಡಾ| ಅಂಬೇಡ್ಕರ್‌ ಅವರು ಕಾರಣರು. ಸರಕಾರಿ ನೌಕರರಿಗೆ ಕನಿಷ್ಠ ವೇತನ, ತುಟ್ಟಿ ಭತ್ಯೆ, ಭವಿಷ್ಯನಿಧಿ ಮುಂತಾದ ಸೌಲಭ್ಯಗಳು ಹಾಗೂ ಮಹಿಳಾ ನೌಕರರಿಗೂ ಹೆರಿಗೆ ರಜೆ ಸೇರಿದಂತೆ ಮುಂತಾದ ಸೌಕರ್ಯ ಒದಗಿಸುವುದನ್ನು ಸಂವಿಧಾನದಲ್ಲಿ ಬರೆಯುವ ಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು. 

ಡಾ| ಅಂಬೇಡ್ಕರ್‌ ಕೊಟ್ಟ ಸವಲತ್ತುಗಳನ್ನು ಸರ್ಕಾರಿ ನೌಕರರು ಸದ್ಬಳಕೆ ಮಾಡಿಕೊಳ್ಳಬೇಕು. ಒಂದು ವೇಳೆ ಅಂಬೇಡ್ಕರ್‌ ಅವರು ಜನಿಸದೇ ಇದ್ದರೆ ಕಾರ್ಮಿಕರು ಬಂಡವಾಳಶಾಹಿಗಳ ಕೈಯಲ್ಲಿ ಗುಲಾಮರಾಗಿ ಮುಂದುವರಿಯಬೇಕಾಗಿತ್ತು ಎಂದು ಹೇಳಿದರು. 

ಡಾ| ಅಂಬೇಡ್ಕರ್‌ ಅವರು ಕೇವಲ ಒಂದು ಜಾತಿಗೆ ಸೀಮಿತವಲ್ಲ. ಅವರು ಎಲ್ಲರ ಸ್ವತ್ತು. ಅಂಬೇಡ್ಕರ್‌ ಅವರನ್ನು ಒಂದು ಚೌಕಟ್ಟಿನಲ್ಲಿ ಕಟ್ಟಿ ಹಾಕಬೇಡಿ ಎಂದು ಸಲಹೆ ನೀಡಿದರು. ಸಂಘದ ರಾಜ್ಯಾಧ್ಯಕ್ಷ ಡಿ. ದೇವರಾಜ ಅಧ್ಯಕ್ಷತೆ ವಹಿಸಿದ್ದರು.

ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದ್ರಾಬಾದ್‌ ಪ್ರಾದೇಶಿಕ ವ್ಯವಸ್ಥಾಪಕ ಶಂಕರ ಪ್ರಸಾದ, ಸಹಾಯಕ ವ್ಯವಸ್ಥಾಪಕ ಪ್ರಶಾಂತಕುಮಾರ, ಗೋವಿಂದರಾಜ, ಡಾ| ಸುರೇಶ ರಾಠೊಡ, ಡಾ| ಜಾಗೃತಿ ದೇಶಮಾನೆ, ಸಂಘದ ಸಂಘಟನಾ ಕಾರ್ಯದರ್ಶಿ ಬಿ. ಎಸ್‌. ಶೇರಖಾನೆ,  

-ಪ್ರವೀಣ ಎ. ಸಾಗರ, ರಮೇಶ ಸಿಂಧೆ, ಪದ್ಮಾಜಿ, ರವಿಗೌಡ, ಪ್ರಕಾಶರಾವ, ಶ್ರೀಧರ ಪಾಲ್ಗೊಂಡಿದ್ದರು. ಸಿ.ಎಚ್‌. ಹವಾಲ್ದಾರ ಸ್ವಾಗತಿಸಿದರು. ಸಂಘದ ಕೇಂದ್ರ ಸಮಿತಿ ಸದಸ್ಯ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಲ್‌. ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರುತಿ ನಿರೂಪಿಸಿದರು. 

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.