ಜಿಪಂ ವಿಶೇಷ ಸಾಮಾನ್ಯ ಸಭೆ ಮತ್ತೆ ಮುಂದಕ್ಕೆ


Team Udayavani, Jun 3, 2017, 1:31 PM IST

dvg3.jpg

ದಾವಣಗೆರೆ: 2017-18 ನೇ ಸಾಲಿನಲ್ಲಿ ಬಿಡುಗಡೆಯಾಗಲಿರುವ ಅನುದಾನದ ಕ್ರಿಯಾಯೋಜನೆ ಹಾಗೂ ತೀವ್ರ ಬರಗಾಲ ನಿಮಿತ್ತ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಅಗತ್ಯ ಕ್ರಮಗಳ ಕುರಿತಂತೆ ಶುಕ್ರವಾರ ಕರೆಯಲಾಗಿದ್ದ ಜಿಲ್ಲಾ ಪಂಚಾಯತ್‌ ವಿಶೇಷ ಸಾಮಾನ್ಯ ಸಭೆ ಕೋರಂ ಕೊರತೆಯಿಂದ ಮುಂದೂಲ್ಪಟ್ಟಿತು. 

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್‌ ಅಧ್ಯಕ್ಷತೆಯಲ್ಲಿ 2017-18 ನೇ ಸಾಲಿನಲ್ಲಿ ಬಿಡುಗಡೆಯಾಗಲಿರುವ ಅನುದಾನದ ಕ್ರಿಯಾಯೋಜನೆ ಹಾಗೂ ತೀವ್ರ ಬರಗಾಲ ನಿಮಿತ್ತ ಜನ-ಜಾನು ವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಅಗತ್ಯ ಕ್ರಮಗಳ ಕುರಿತಂತೆ ಕರೆಯಲಾಗಿದ್ದ ಮಹತ್ವದ ವಿಶೇಷ ಸಾಮಾನ್ಯ ಸಭೆಗೆ ಕಡಿಮೆ ಸದಸ್ಯರು ಹಾಜರಾಗಿದ್ದರು. 

ಬೆಳಗ್ಗೆ 11ಕ್ಕೆ ನಿಗದಿಯಾಗಿದ್ದ ಸಭೆಯಲ್ಲಿ 11.30 ಆದರೂ ಕುಂದೂರು ಕ್ಷೇತ್ರದ ಬಿಜೆಪಿ ಸದಸ್ಯೆ ದೀಪಾ ಜಗದೀಶ್‌ ಒಳಗೊಂಡಂತೆ ಇಬ್ಬರು ಸದಸ್ಯರ ಹೊರತುಪಡಿಸಿ ಇತರೆ ಸದಸ್ಯರ ಸುಳಿವೇ ಇರಲಿಲ್ಲ. ಅತಿ ಮುಖ್ಯವಾಗಿ ಯಾವುದೇ ಸ್ಥಾಯಿ ಸಮಿತಿ ಅಧ್ಯಕ್ಷರು ಕೊನೆಯವರೆಗೆ ಸಭೆಗೆ ಬರಲೇ ಇಲ್ಲ. ಸಭೆಗೆ ಬಂದಂತಹ ಅಧಿಕಾರಿಗಳು ಚರ್ಚೆಯಲ್ಲಿ ತೊಡಗಿದ್ದರು.

11.30ರ ನಂತರ ಅಧ್ಯಕ್ಷೆ ಉಮಾ ರಮೇಶ್‌, ಉಪಾಧ್ಯಕ್ಷ ಡಿ. ಸಿದ್ದಪ್ಪ, ಸದಸ್ಯರಾದ ಎಂ.ಆರ್‌. ಮಹೇಶ್‌, ಸವಿತಾ ಕಲ್ಲಪ್ಪ, ಕೆ.ಆರ್‌. ಜಯಶೀಲ ಇತರರು ಆಗಮಿಸಿದರು. ಒಟ್ಟಾರೆ 36 ಸದಸ್ಯತ್ವ ಬಲದಲ್ಲಿ ಎರಡನೇ ಮೂರು ಭಾಗದಷ್ಟು ಅಂದರೆ 26 ಸದಸ್ಯರಿದ್ದರೆ ಸಾಮಾನ್ಯ ಸಭೆ ನಡೆಸಬಹುದಿತ್ತು. ಆದರೆ, ಮಧ್ಯಾಹ್ನ 12 ಗಂಟೆಯಾದರೂ ಸದಸ್ಯರ ಸಂಖ್ಯೆ 14 ದಾಟಲೇ ಇಲ್ಲ.

ತಮ್ಮ ಹಾಗೂ  ತರೆ ಪಕ್ಷದ ಸದಸ್ಯರ ನಿರೀಕ್ಷೆಯಲ್ಲೇ ಆಸೀನರಾಗಿದ್ದ ಅಧ್ಯಕ್ಷೆ ಉಮಾ ರಮೇಶ್‌ ಸಭಾಂಗಣದಿಂದ ಹೊರ ಹೋದರು. ಕೆಲ ಹೊತ್ತಿನ ನಂತರ ಸಭಾಂಗಣಕ್ಕೆ ಆಗಮಿಸಿದ ಅವರು, ಅನಿವಾರ್ಯ ಕಾರಣದಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದರು. ಅಲ್ಲಿಗೆ ಎರಡನೇ ಬಾರಿಗೆ ವಿಶೇಷ ಸಾಮಾನ್ಯ ಸಭೆ ಮುಂದೂಲ್ಪಟ್ಟಂತಾಯಿತು. 

ಕಳೆದ ಮೇ.10 ರಂದು ಸಹ 2017-18 ನೇ ಸಾಲಿನಲ್ಲಿ ಬಿಡುಗಡೆಯಾಗಲಿರುವ ಅನುದಾನದ ಕ್ರಿಯಾಯೋಜನೆ ಹಾಗೂ ತೀವ್ರ ಬರಗಾಲ ನಿಮಿತ್ತ ಜನ-ಜಾನು ವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಅಗತ್ಯ ಕ್ರಮಗಳ ಕುರಿತಂತೆಯೇ ವಿಶೇಷ ಸಾಮಾನ್ಯ ಸಭೆ ನಿಗದಿಯಾಗಿತ್ತು. ಸಭೆಗೆ ಅಧಿಕಾರಿ ವರ್ಗದವರು ಬಂದಿದ್ದರು. ಆದರೆ, ಜಿಲ್ಲಾ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಕೆಲವಾರು ಸದಸ್ಯರು ಬೆಂಗಳೂರು, ಮೈಸೂರಿನಲ್ಲಿ ಕಾರ್ಯಾಗಾರಕ್ಕೆ ತೆರಳಿದ್ದರಿಂದ ಮುಂದೂಲ್ಪಟ್ಟಿತ್ತು. 

ಬೇರೆ ಅರ್ಥವೇ ಇಲ್ಲ: ಸಭೆ ಮುಂದೂಡಲ್ಪಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್‌, ನಿಗದಿತ ಪ್ರಮಾಣದಲ್ಲಿ ಸದಸ್ಯರು ಬರದೇ ಇದ್ದ ಕಾರಣದಿಂದಾಗಿಯೇ ಇಂದಿನ ಸಭೆಯನ್ನು ಮುಂದೂಡಲಾಗಿದೆ. ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ದಾವಣಗೆರೆಗೆ ಆಗಮಿಸಿದ್ದು, ಅವರ ಕಾರ್ಯಕ್ರಮಕ್ಕೆ ಬಿಜೆಪಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿದ್ದಾರೆ.

ಗುರುವಾರವೇ ಜಿಲ್ಲಾ ಅಧ್ಯಕ್ಷರು, ಈಶ್ವರಪ್ಪನವರ ಕಾರ್ಯಕ್ರಮದ ಬಗ್ಗೆ ತಿಳಿಸಿ, ಸಭೆ ಮುಂದೂಡುವಂತೆಯೂ ಮನವಿ ಮಾಡಿದ್ದರು. ಮೊದಲೇ ಸಭೆ ನಿಗದಿಯಾಗಿದ್ದರಿಂದ ಸಭೆ ನಡೆಸೋಣ ಅಂದುಕೊಂಡಿದ್ದೆವು. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಬರದೇ ಮುಂದೂಡಬೇಕಾಯಿತು. ಸಭೆ ಮುಂದೂಡಿದ್ದಕ್ಕೆ ಬೇರೆ ಅರ್ಥ ಇಲ್ಲ ಎಂದರು. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಒತ್ತಡ ಹಾಕಲು ಬಿಜೆಪಿ ಸದಸ್ಯರೇ ಸಭೆಗೆ ಬಂದಿಲ್ಲವೇ ಎಂದು ಪ್ರಶ್ನಿಸಿದಾಗ, ನನ್ನ ಅವಧಿ ಮುಗಿದೇ ಇಲ್ಲ.

ಹಾಗಾಗಿ ರಾಜೀನಾಮೆ ಕೊಡಿ ಎಂದು ಒತ್ತಾಯ ಮಾಡುವ ಮಾತೇ ಇಲ್ಲ. ಒಂದೂವರೆ ವರ್ಷ ಅವಧಿಯಲ್ಲಿ ಇನ್ನೂ 6 ತಿಂಗಳ ಅವಧಿ ಇದೆ. ಇಂದಿನ ಸಭೆಗೆ ಸದಸ್ಯರು ಬರದೇ ಇರುವುದಕ್ಕೂ ನಾನು ರಾಜೀನಾಮೆ ಕೊಡಬೇಕು ಎನ್ನವುದಕ್ಕೂ ಸಂಬಂಧವೇ ಇಲ್ಲ ಎಂದು ಉತ್ತರಿಸಿದರು. ಜಿಲ್ಲಾ ಪಂಚಾಯತಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿದ್ದೇವೆ ಎಂದಷ್ಟೇ ಉತ್ತರಿಸಿದರು.  

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.