ಐವರು ಮನೆ ಕಳ್ಳರು, ದರೋಡೆಕೋರರ ಬಂಧನ


Team Udayavani, Jun 7, 2017, 1:31 PM IST

arrest.jpg

ಬೆಂಗಳೂರು: ಮನೆ ಕಳವು, ದರೋಡೆ ಮತ್ತು ಸರಗಳವು ಮಾಡುತ್ತಿದ್ದ 9 ಆರೋಪಿಗಳನ್ನು ಬಂಧಿಸಿರುವ ದಕ್ಷಿಣ ವಿಭಾಗದ ಪೊಲೀಸರು 34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮನೆ ಕಳವು ಮಾಡುತ್ತಿದ್ದ ಭಾರತಿ ನಗರದ ನಯಾಜ್‌ ಖಾನ್‌ (33), ದೇವರಜೀವನಹಳ್ಳಿಯ ಅಪ್ಸರ್‌ (31)ಎಂಬುವವರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 17 ಲಕ್ಷ ಮೌಲ್ಯದ 550 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳು, ಬಾಗಿಲು ತೆರೆದಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದರು. ಬಳಿಕ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಸುಬ್ರಹ್ಮಣ್ಯಪುರದಲ್ಲಿ ನಡೆದ ಕಳವು ಪ್ರಕರಣವೊಂದರಲ್ಲಿ ಸಂಗ್ರಹಿಸಿದ ಬೆರಳಚ್ಚು ಮಾದರಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ ಶರಣಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಜಯನಗರದ ನಿವಾಸಿ ಮುನಿರಾಜು (28)ನನ್ನು  ಕೋಣನಕುಂಟೆ ಪೊಲೀಸರು ಬಂಧಿಸಿದ್ದು, 70ಗ್ರಾಂ ತೂಕದ 3 ಚಿನ್ನದ ಸರಗಳು, 1 ಉಂಗುರ, 1 ಕೆ.ಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಅನ್ನಪೂರ್ಣೇಶ್ವರಿ ಲೇಔಟ್‌ನ ಡಾ. ನಕುಲ… ಎಂಬುವರ ಮನೆಯ ಕಿಟಕಿ ಗ್ರಿಲ… ಮುರಿದು ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ ಕೆಐಇಟಿ ಪಾಲಿಟೆಕ್ನಿಕ್‌ನ ಉಪನ್ಯಾಸಕರಾದ ಲೋಕೇಶ್‌ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಸರಬಂಟೆ ಪಾಳ್ಯದ ಶಿವಾನಂದ  (35) ಎಂಬಾತನನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಈತನಿಂದ 7.5 ಲಕ್ಷ ಮೌಲ್ಯದ 450 ಗ್ರಾಂ ಚಿನ್ನಾಭರಣ, ಎಲ್‌ಸಿಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮೇ 12 ರಂದು ಲೋಕೇಶ್‌ ಎಂಬುವರು ಕುಟುಂಬ ಸಮೇತ ಕುಕ್ಕೆಸುಬ್ರಹ್ಮಣ್ಯಕ್ಕೆ ಹೋಗಿದ್ದರು. ಈ ವೇಳೆ ಅವರ ಮನೆಯ ಹಿಂಭಾಗದ ಗ್ರಿಲ್‌ ಮುರಿದು ಒಳ ನುಗ್ಗಿದ ಆರೋಪಿ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಗಳ್ಳನ ಬಂಧನ: ಕಳವು ಮಾಡಿದ ಬೈಕ್‌ನಲ್ಲಿ ಸುತ್ತಾಡುತ್ತ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಶ್ಯಾಮಣ್ಣ ಗಾರ್ಡನ್‌ನ ಅಬ್ರಾರ್‌ ಪಾಷಾ (28)ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

ಈತನಿಂದ 7.20 ಲಕ್ಷ ಮೌಲ್ಯದ 277 ಗ್ರಾಂ ತೂಕದ ಚಿನ್ನದ ಸರಗಳು, ಒಂದು ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕೆಂಪೇಗೌಡ ನಗರ, ಶಂಕರಪುರ, ಹನುಮಂತನಗರ, ಗಿರಿನಗರ, ಸಿ.ಕೆ.ಅಚ್ಚುಕಟ್ಟು ಪ್ರದೇಶದ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡುತ್ತ ಒಂಟಿ ಮಹಿಳೆಯರನ್ನು ಬೆದರಿಸಿ ಚಿನ್ನದ ಸರಗಳನ್ನು ದೋಚಿ ಪರಾರಿಯಾಗುತ್ತಿದ್ದ. ಆರೋಪಿಯ ಬಂಧನದಿಂದ ಇತರೆ 5 ಪ್ರಕರಣಗಳು ಬೆಳಕಿಗೆ ಬಂದಿವೆ.

ದರೋಡೆಕೋರರ ಬಂಧನ: ರಾತ್ರಿವೇಳೆ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ಮೂಕಾಂಬಿಕಾ ನಗರದ ಪ್ರವೀಣ್‌ ಕುಮಾರ್‌ (19), ಕರಿಯಾ (20), ಹರೀಶ್‌(24), ಮಂಜುನಾಥ (19) ಬಂಧಿತರು.

ಆರೋಪಿಗಳು ಶ್ರೀನಗರದ ಸಪ್ತಗಿರಿ ಶಾಲೆಯ ಬಳಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್‌ ಮಾಡಿಕೊಂಡು ಹಣ ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದರು. ಸೋಮವಾರ ರಾತ್ರಿ ಡಕಾಯಿತಿಗೆ ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಾ ಶರಣಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.