ಆಸ್ಪತ್ರೆಗಳ ವಸೂಲಿ ನಿಯಂತ್ರಣಕ್ಕೆ ಶೀಘ್ರ ಮಸೂದೆ


Team Udayavani, Jun 7, 2017, 1:31 PM IST

dinesh-gundurao.jpg

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಬರುವ ರೋಗಿಗಳಿಂದ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುವುದಕ್ಕೆ ನಿಯಂತ್ರಣ ಹೇರಲು ಶೀಘ್ರವೇ ಮಸೂದೆ ಜಾರಿಗೆ ತರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ಕುಮಾರ್‌ ಹೇಳಿದ್ದಾರೆ.

ನಗರದ ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಕಾಕ್ಲಿಯಸ್‌ ಇನ್‌ಪ್ಲ್ರಾಂಟ್‌ ಯೋಜನೆ’ಗೆ ಚಾಲನೆ ನೀಡಿ ಮತ್ತು 25 ಹಾಸಿಗೆಗಳ ಡಯಾಲೀಸ್‌ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

“ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ನಿಯಮಗಳನ್ನು ರೂಪಿಸಲು ರಚಿಸಲಾದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್‌ಸೇನ್‌ ಅವರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇದನ್ನು ಆಧರಿಸಿ ಕರಡು ವಿಧೇಯಕ ಸಿದ್ಧಪಡಿಸಲಾಗಿದೆ. ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅದಕ್ಕೆ ಅನುಮೋದನೆ ಪಡೆಯಲಾಗುವುದು,’ ಎಂದರು.

“ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಮಾನದಂಡವಿಲ್ಲದೆ ಮನಸ್ಸಿಗೆ ಬಂದಂತೆ ಶುಲ್ಕ ವಿಧಿಸಿ ಬಡ ರೋಗಿಗಳನ್ನು ಸುಲಿಗೆ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕಾಯ್ದೆ ರೂಪಿಸಲಾಗುತ್ತಿದ್ದು, ಅದು ಅಂತಿಮಗೊಳಿಸುವವರೆಗೆ ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ, ಇದು ಬಡವರ ಪರ ಮತ್ತು ಬಲಿಷ್ಠ ಕಾನೂನು ಆಗಲಿದೆ,’ ಎಂದು ಭರವಸೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಅವಶ್ಯಕತೆ ಇಲ್ಲದಿದ್ದರೂ ಅನಗತ್ಯ ಪರೀಕ್ಷೆ ಮಾಡುತ್ತಾರೆ. ಹಣವಿಲ್ಲದಿದ್ದರೆ ಹೆಣ ಕೂಡ ಕೊಡುವುದಿಲ್ಲ. ಇದೆಲ್ಲ ತಿಳಿದಿದ್ದರೂ ಜನರು ಪುನಃ ಅಲ್ಲಿಗೆ ಹೋಗುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ದೇವಾಲಯವಿದ್ದಂತೆ.

ದೊಡ್ಡ ಆಸ್ಪತ್ರೆಗಳನ್ನು ನಡೆಸುವಾಗ ಸಣ್ಣಪುಟ್ಟ ಲೋಪಗಳು ಇರುತ್ತವೆ. ಅದನ್ನು ಸರಿಪಡಿಸಿ ತಿದ್ದಿಕೊಳ್ಳಬಹುದು. ಅದರೆ, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಅಪಪ್ರಚಾರ ಮಾಡುವುದಕ್ಕೆಂದೇ ಗುಂಪೊಂದು ಇದೆ. ಸರ್ಕಾರಿ ಆಸ್ಪತ್ರೆಗೆ ಹೋದರೆ ಜೀವಂತ ಬರುವುದಿಲ್ಲ ಎಂದು ಜನರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಇಂತಹ ಘಟನೆಗಳು ಗಮನಕ್ಕೆ ಬಂದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು. 

ಕಾಕ್ಲಿಯಸ್‌ ಇನ್‌ಪ್ಲ್ರಾಂಟ್‌ ಯೋಜನೆ ರಾಜ್ಯವನ್ನು ಶ್ರವಣದೋಷ ಮುಕ್ತ ಮಾಡುವ ಗುರಿ ಹೊಂದಿದೆ. ಆರಂಭದಲ್ಲಿ ಈ ರೋಗಕ್ಕೆ ಹಣ ಖರ್ಚು ಮಾಡುವ ಬಗ್ಗೆ ಆತಂಕವಿತ್ತು. ಪ್ರತಿ ರೋಗಿಗಳಿಗೆ ಸುಮಾರು 5 ಲಕ್ಷ ರೂ.ಖರ್ಚಾಗಲಿದೆ. ಈ ಯೋಜನೆಯಲ್ಲಿ ಹಣ ದುರುಪಯೋಗಬಾರದು ಎಂಬ ಕಾರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಶ್ರವಣದೋಷ ಇರುವ ಮಕ್ಕಳನ್ನು ಗುರುತಿಸಲು ರಾಜ್ಯಾದ್ಯಂತ ವ್ಯಾಪಕ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು. 

ಸಚಿವ ದಿನೇಶ್‌ಗುಂಡೂರಾವ್‌, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ಸಂಸದೀಯ ಕಾರ್ಯದರ್ಶಿ ಉಮೇಶ್‌ ಜಿ.ಜಾಧವ್‌, ಕೆ.ಸಿ.ಜನರಲ್‌ ಆಸ್ಪತ್ರೆ ಆಧೀಕ್ಷಕ ಡಾ.ಎಚ್‌.ರವಿಕುಮಾರ್‌, ಬಿಬಿಎಂಪಿ ಸದಸ್ಯ ಆರ್‌.ಎಸ್‌.ಸತ್ಯನಾರಾಯಣ್‌, ಆರೋಗ್ಯ ಇಲಾಖೆ ಆಯುಕ್ತ ಸುಭೋದ್‌ ಯಾದವ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.