ಜಿಎಸ್‌ಟಿಯಿಂದ ಅಗತ್ಯ ವಸ್ತು ಬೆಲೆ ಏರಲ್ಲ


Team Udayavani, Jun 7, 2017, 1:31 PM IST

krishna-byregowda.jpg

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್‌ಟಿ) ಅನುಷ್ಠಾನಕ್ಕೆ ಬಂದರೆ ಅಗತ್ಯ ವಸ್ತುಗಳು ಮತ್ತು ಸರಕುಗಳ ಬೆಲೆ ಹೆಚ್ಚಲಿದೆ ಭಾವನೆ ಸರಿಯಲ್ಲ ಎಂದು ಕೇಂದ್ರದ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕೃಷಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. 

ನವದೆಹಲಿಯ ಪಿ.ಆರ್‌.ಎಸ್‌.ಲೆಜಿಸ್ಲೇಟಿವ್‌ ರೀಸರ್ಚ್‌ ಸಂಸ್ಥೆ  ಸಹಯೋಗದಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ವಿಧಾನಪರಿಷತ್‌ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಜಿಎಸ್‌ಟಿ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಸದಸ್ಯರ ಪ್ರಶ್ನೆ ಹಾಗೂ ಅನುಮಾಗಳಿಗೆ ಸಚಿವರು ಉತ್ತರಿಸಿದರು. 

“ಜಿಎಸ್‌ಟಿ ಬಂದರೆ  ಶೇ. 95ರಷ್ಟು ಅಗತ್ಯ ವಸ್ತುಗಳು ಮತ್ತು ಸರಕುಗಳ ಬೆಲೆ ಕಡಿಮೆ ಆಗುತ್ತದೆ ಅಥವಾ ಯಥಾಸ್ಥಿತಿಯಲ್ಲೇ ಇರಲಿದೆ. ಶೇ. 5ರಷ್ಟು ವಸ್ತು ಮತ್ತು ಸರಕುಗಳ ಬೆಲೆ ಮಾತ್ರ ಏರಿಕೆ ಆದರೂ, ಅದರ ಪ್ರಮಾಣ ತೀರಾ ಕಡಿಮೆ,’ ಎಂದು ತಿಳಿಸಿದರು. 

“ಸದ್ಯ ಜಾರಿಯಲ್ಲಿರುವ ತೆರಿಗೆ ಪದ್ಧತಿಯಲ್ಲಿ ಕೆಲವೊಂದು ತೆರಿಗೆಗಳನ್ನು ಮರೆಮಾಚಲಾಗುತ್ತಿತ್ತು, ಕೆಲವೊಂದು ಪರೋಕ್ಷ ತೆರಿಗೆಗಳು ಇರುತ್ತಿದ್ದವು. ಅವು ಪಾವತಿ ಮತ್ತು ರಸೀದಿಗಳಲ್ಲಿ ನಮೂದಾಗುತ್ತಿರಲಿಲ್ಲ. ಆ ಕಾರಣಕ್ಕಾಗಿ ತೆರಿಗೆ ಹೆಚ್ಚಿದ್ದರೂ, ಮೇಲ್ನೋಟಕ್ಕೆ ಕಡಿಮೆ ಕಾಣುತ್ತಿತ್ತು.

ಆದರೆ, ಜಿಎಸ್‌ಟಿಯಲ್ಲಿ ಪ್ರತಿಯೊಂದು ತೆರಿಗೆಗಳು ನಮೂದಾಗುವುದರಿಂದ ತೆರಿಗೆ ಪ್ರಮಾಣ ಹೆಚ್ಚಾಗಿ ಕಂಡರೂ, ವಾಸ್ತವದಲ್ಲಿ ಅನೇಕ ತೆರಿಗೆಗಳು ಹಿಂದಿಗಿಂತ ಕಡಿಮೆ ಆಗಲಿವೆ. ತೆರಿಗೆ ಪಾವತಿ ಪ್ರಮಾಣ ಹೆಚ್ಚಾದರೆ, ಬೆಲೆಗಳನ್ನು ಕಡಿಮೆ ಮಾಡುವ ಎಲ್ಲ ಅವಕಾಶ ಇರುತ್ತದೆ. ಈ ವಿಷಯವನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ,’ ಎಂದು ಅಭಿಪ್ರಾಯಪಟ್ಟರು. 

ಜಿಎಸ್‌ಟಿ ಜಾರಿಗೆ ಬಂದರೆ ರಾಜ್ಯಗಳ ಆದಾಯ ಖೋತಾ ಆಗಲಿದೆ ಎಂಬ ವಾದ ಇದೆಯಾದರೂ ಭವಿಷ್ಯದಲ್ಲಿ ರಾಜ್ಯಗಳ ಆದಾಯ ಉತ್ತಮವಾಗಲಿದೆ. 2015-16ರ ವಾರ್ಷಿಕ ಆದಾಯ ವೃದ್ಧಿ ದರ ಮಾನದಂಡವಾಗಿಟ್ಟುಕೊಂಡು ಜಿಎಸ್‌ಟಿಯಲ್ಲಿ ವಾರ್ಷಿಕ ಆದಾಯ ವೃದ್ಧಿ ದರ ಶೇ.14 ಎಂದು ನಿಗದಿಪಡಿಸಲಾಗಿದೆ.

ಕರ್ನಾಟಕದ ವಾರ್ಷಿಕ ಆದಾಯ ವೃದ್ಧಿ ದರ ಶೇ. 15ರಷ್ಟಿದೆ. ಅದೇ ರೀತಿ ಅನೇಕ ರಾಜ್ಯಗಳಲ್ಲಿ ವಾರ್ಷಿಕ ಆದಾಯ ವೃದ್ಧಿ ದರ ಶೇ.8ರಷ್ಟಿದೆ. ರಾಜ್ಯಗಳ ಈ ವಾರ್ಷಿಕ ಆದಾಯ ವೃದ್ಧಿ ದರದಲ್ಲಿ ಸಮತೋಲನ ತರಲು ಜಿಎಸ್‌ಟಿ ಕಾಯ್ದೆಯಲ್ಲೇ ಅವಕಾಶವಿದೆ. 2017-18ರಿಂದ ಮುಂದಿನ ಐದು ವರ್ಷದವರೆಗೆ ಶೇ.14ರಷ್ಟರ ವಾರ್ಷಿಕ ಆದಾಯ ವೃದ್ಧಿ ದರದ ಖಾತರಿಯನ್ನು ಜಿಎಸ್‌ಟಿ ಕಾಯ್ದೆ ನೀಡುತ್ತದೆ ಎಂದು ಮಾಹಿತಿ ನೀಡಿದರು. 

ಇದಕ್ಕೂ ಮೊದಲು  ಪಿ.ಆರ್‌.ಎಸ್‌ ಲೆಜಿಸ್ಲೇಟಿವ್‌ ರೀಸರ್ಚ್‌ ಸಂಸ್ಥೆಯ ಅಭಿಜತ್‌ ಹಾಗೂ ವತ್ಸಲ್‌ ಖುಲ್ಲಾರ್‌ ಜಿಎಸ್‌ಟಿ ಕಾಯ್ದೆ ಬಗ್ಗೆ ಪ್ರಾತ್ಯಾಕ್ಷಿಕೆ ನೀಡಿದರು. ವಿಧಾನಪರಿಷತ್ತಿನ 48ಕ್ಕೂ ಹೆಚ್ಚು ಸದಸ್ಯರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ, ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ, ಆಡಳಿತ ಪಕ್ಷದ ಮುಖ್ಯ ಸಚೇತಕ ಐವಾನ್‌ ಡಿಸೋಜಾ, ಪ್ರತಿಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್‌ ಕಾರ್ಣಿಕ್‌, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ರಿತ್ವಿಕ್‌ ರಂಜನ್‌ ಪಾಂಡೆ ಉಪಸ್ಥಿತರಿದ್ದರು. 

ಕನ್ನಡ ಚಿತ್ರಗಳ ಮನರಂಜನಾ ತೆರಿಗೆ ಬಗ್ಗೆ ರಾಜ್ಯವೇ ತೀರ್ಮಾನಿಸಬೇಕು 
ಕರ್ನಾಟಕದಲ್ಲಿ ಶೇ. 30 ಮನರಂಜನಾ ತೆರಿಗೆ ಇದೆ. ಜಿಎಸ್‌ಟಿ ಜಾರಿಗೆ ಬಂದರೆ ಇದು ಶೇ.28 ಆಗಲಿದೆ. ಇದು ಎಲ್ಲ ಸಿನಿಮಾಗಳಿಗೆ ಆನ್ವಯ ಆಗಲಿದೆ. ಆದರೆ, ಕನ್ನಡ ಸಿನಿಮಾಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ. ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಆಯಾ ರಾಜ್ಯಗಳು ತೆರಿಗೆ ವಿನಾಯ್ತಿ ನೀಡಿರುವ ವಿಚಾರ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಚರ್ಚೆಗೆ ಬಂತು. ಈ ವಿಚಾರದಲ್ಲಿ ಒಂದು ತೀರ್ಮಾನ ತೆಗೆದುಕೊಳ್ಳಲು ಅಥವಾ ತೆರಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಬಂದಿದೆ. ಹಾಗಾಗಿ, ರಾಜ್ಯ ಸರ್ಕಾರವೇ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. 

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.