ಹಗರಣ ಮುಚ್ಚಿಹಾಕಲು ಸದನ ಸಮಿತಿ ರಚಿಸಿ ನಾಟಕ


Team Udayavani, Jun 10, 2017, 1:59 PM IST

mys3.jpg

ಮೈಸೂರು: ವಿದ್ಯುತ್‌ ಖರೀದಿಯಲ್ಲಿ ನಡೆದಿರುವ 25 ರಿಂದ 30 ಸಾವಿರ ಕೋಟಿ ರೂ. ಮೊತ್ತದ ದೊಡ್ಡ ಹಗರಣವನ್ನು ಮುಚ್ಚಿಹಾಕಲು ರಾಜ್ಯಸರ್ಕಾರ ಸದನ ಸಮಿತಿ ರಚಿಸಿ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ನಾನೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು.

ಕಾಲಹರಣ: ಸತತ ಬರಗಾಲದಿಂದ ಬೆಳೆನಷ್ಟಕ್ಕೆ ಒಳಗಾದ ರೈತರಿಗೆ ಒಂದು ರೂಪಾಯಿ ಪರಿಹಾರ ನೀಡದಿರುವ ಸರ್ಕಾರದ ಕ್ರಮವನ್ನು ಟೀಕಿಸಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಅನಗತ್ಯ ವಿಷಯಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು.

ಬರ ಪರಿಹಾರ ಕುರಿತು ಚರ್ಚೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ಪರ್ಜನ್ಯ ಹೋಮದ ಕುರಿತು ಚರ್ಚೆ ಮಾಡುವ ಮೂಲಕ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲಾಯಿತು. ಇನ್ನು ಸದನಕ್ಕೆ ಮಂತ್ರಿಗಳು, ಆಡಳಿತ ಪಕ್ಷದ ಶಾಸಕರೇ ಬರುತ್ತಿಲ್ಲ. ಹೀಗಾಗಿ ಖಾಲಿ ಕುರ್ಚಿಗಳ ಜತೆ ಮಾತನಾಡಲು ನಾವು ಅಧಿವೇಶನಕ್ಕೆ ಹೋಗಬೇಕೇ ಎಂದು ಅವರು ಪ್ರಶ್ನಿಸಿದರು.

ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ರಾಜ್ಯದ ರೈತರ ಜತೆ ಚೆಲ್ಲಾಟವಾಡುತ್ತಿವೆ. ಕೇಂದ್ರ ಸರ್ಕಾರ ಮನ್ನಾ ಮಾಡಿದರೆ ನಾನೂ ಮನ್ನಾ ಮಾಡುತ್ತೇನೆ ಎಂದು ಸಿದ್ದರಾಮಯ್ಯ ರೈತರ ಮೂಗಿಗೆ ತುಪ್ಪ ಸವರುತ್ತಿದ್ದಾರೆ ಎಂದು ಟೀಕಿಸಿದರು.

ಸಾಲ ಮಾಡಿದ್ದೇ ಸಾಧನೆ: ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದಕ್ಕಿಂತ ಹೆಚ್ಚು ಸಾಲ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಜರಿದ ಅವರು, ಇತ್ತೀಚೆಗೆ ಸರ್ಕಾರದ ನಾಲ್ಕು ವರ್ಷಗಳ ಸಾಧನಾ ಸಮಾವೇಶ ಮಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ನೀಡಿದ್ದ ಭರವಸೆಗಳ ಪೈಕಿ 150ಕ್ಕೂ ಹೆಚ್ಚು ಭ ರವಸೆ ಈಡೇರಿಸಿದ್ದೇನೆ, ಹಿಂದಿನ ಯಾವ ಮುಖ್ಯಮಂತ್ರಿಯೂ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದಿದ್ದೀರಿ, ನೀವು ಎಲ್ಲ ಭರವಸೆಗಳನ್ನೂ ಈಡೇರಿಸಿದ ಮೇಲೆ ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಿಮ್ಮ ಭರವಸೆಗಳ ಈಡೇರಿಕೆ ಕೇವಲ ಪುಸ್ತಕಕ್ಕೆ ಸೀಮಿತವಾಗಿದೆ. ನೀವು ನೀಡಿದ್ದ ಭರವಸೆ ಈಡೇರಿಸಿದ್ದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ ಎಂದರು. ಕೃಷಿ ಉತ್ಪನ್ನಗಳಿಗೆ ರೈತರು ನಿಗದಿ ಮಾಡಿದ ಬೆಲೆ ದೊರೆಯುವಂತೆ ಮಾಡುವೆ ಎಂಬ ನಿಮ್ಮ ಭರವಸೆ ಏನಾಯಿತು ಎಂದು ಟೀಕಿಸಿದರು.

ರಾಜ್ಯದ ಜನರ ಮೇಲೆ ಸಾಲ ಹೊರಿಸುವ ಭರವಸೆಯನ್ನೇನಾದರೂ ನೀಡಿದ್ದರೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ ಎಂದು ಕುಹಕವಾಡಿದರು. ಸ್ಟೀಲ್‌ ಬ್ರಿàಡ್ಜ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದು ವಿವಾದಕ್ಕೆ ಕಾರಣವಾಗುತ್ತಿದೆ. ಇಂತಹ ಉದ್ಧಟತನದ ನಿರ್ಧಾರ ಕೈಗೊಳ್ಳುವ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದರು.

ಮರುಜೀವ: ತಮ್ಮ ವೇಗಕ್ಕೆ ಕಡಿವಾಣ ಹಾಕುವ ಸಲುವಾಗಿಯೇ 11 ವರ್ಷಗಳ ಹಿಂದೆ ಜನಾರ್ದನ ರೆಡ್ಡಿ ಮಾಡಿದ್ದ ಗಣಿ ಲಂಚ ಆರೋಪ ಪ್ರಕರಣಕ್ಕೆ ಸರ್ಕಾರ ಮರು ಜೀವ ನೀಡಿದೆ. ಜಂತಕಲ್‌ ಮೈನಿಂಗ್‌ ಪ್ರಕರಣದ ಎಸ್‌ಐಟಿ ತನಿಖೆಗೆ ಆದೇಶಿಸುವ ಮೂಲಕ ತಮ್ಮ ವರ್ಚಸ್ಸು ಹಾಳು ಮಾಡಲು ಸುಪ್ರೀಂಕೋರ್ಟ್‌ ವಜಾ ಮಾಡಿರುವ ಪ್ರಕರಣಕ್ಕೆ ಮರು ಜೀವ ನೀಡಲಾಗಿದೆ ಎಂದು ಹರಿಹಾಯ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧಪಕ್ಷಗಳು ತೆಗೆದುಕೊಳ್ಳುವ ತೀರ್ಮಾನ ಆಧರಿಸಿ ಜೆಡಿಎಸ್‌ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಇದಕ್ಕೂ ಮುನ್ನ ಎಚ್‌.ಡಿ.ಕುಮಾರಸ್ವಾಮಿ ಹುಣ್ಣಿಮೆ ನಿಮಿತ್ತ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಜಿ.ಟಿ.ದೇವೇಗೌಡ, ಮೇಯರ್‌ ಎಂ.ಜೆ.ರವಿಕುಮಾರ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.