ಪತ್ನಿಯ ತಲೆ ಕಡಿದು ಪೊಲೀಸ್ ಠಾಣೆಗೆ ಒಯ್ದು ಶರಣಾದ ಪತಿರಾಯ
Team Udayavani, Jun 12, 2017, 4:02 PM IST
ಲಖೀಂಪುರ ಖೇರಿ : ಅತ್ಯಂತ ಭಯಾನಕ ಹಾಗೂ ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ತನ್ನ ಐವತ್ತರ ಹರೆಯದ ಪತ್ನಿಯ ಶಿರಚ್ಛೇದನ ಮಾಡಿ ಆಕೆಯ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ಸಮೀಪದ ಪೊಲೀಸ್ ಠಾಣೆಗೆ ಒಯ್ದು ಅಲ್ಲಿ ಶರಣಾಗಿದ್ದಾನೆ.
ಜಿಲ್ಲೆಯ ಬೆಹಜಾಮ್ ಎಂಬ ಗ್ರಾಮದ ನಿವಾಸಿ ರಾಮ ಸೇವಕ್ 52 ಮತ್ತು ಆತನ ಪತ್ನಿ ಉಷಾ ದೇವಿ ಇಂದು ಬೆಳಗ್ಗೆ ತಮ್ಮ ಹೊಲಕ್ಕೆ ಹೋಗಿದ್ದರು. ಅಲ್ಲಿ ಯಾವುದೋ ಕಾರಣಕ್ಕೆ ಪರಸ್ಪರಿಗೆ ಜೋರಾಗಿ ಜಗಳವಾಗಿದೆ.
ಸಿಟ್ಟಿನ ಪರಾಕಾಷ್ಠೆಯಲ್ಲಿ ರಾಮ ಸೇವಕ್ ಮಚ್ಚಿನಿಂದ ಪತ್ನಿಯ ಶಿರಚ್ಛೇದನ ಮಾಡಿದ್ದಾನೆ ಮತ್ತು ದೇಹದಿಂದ ಬೇರ್ಪಟ್ಟ ಆಕೆಯ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ಸಮೀಪದ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ನೀಮ್ಗಾಂವ್ ಪೊಲೀಸ್ ಠಾಣಾಧಿಕಾರಿ ಡಿ ಕೆ ಸಿಂಗ್ ತಿಳಿಸಿದ್ದಾರೆ.
ಪತ್ನಿಯ ತಲೆ ಕಡಿದು ಕೊಂದ ರಾಮ್ ಸೇವಕ್ನ ವಿರುದ್ಧ ಕೊಲೆ ಕೇಸನ್ನು ದಾಖಲಿಸಲಾಗಿದೆ; ಆತನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಗ್ರಾಮಸ್ಥರು ಹೇಳುವ ಪ್ರಕಾರ ರಾಮ್ ಸೇವಕ್ ಮಾನಸಿಕವಾಗಿ ಅಸ್ಥಿರ ವ್ಯಕ್ತಿಯಾಗಿದ್ದು ಈ ಹಿಂದೆ ಆತ ತನ್ನ ಸಹೋದರನನ್ನು ಕೊಲ್ಲಲು ಅಟ್ಟಿಸಿಕೊಂಡು ಹೋಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.