ಕಲಬುರಗಿ ಜಿಲ್ಲೆ ಕ್ಲೀನ್-ಗ್ರೀನ್ಗೆ ಪಣ ತೊಡಿ: ಡಿಸಿ ಘೋಷ್
Team Udayavani, Jun 26, 2017, 4:07 PM IST
ಕಾಳಗಿ: ಬಿಸಿಲು ನಾಡು ಕಲಬುರಗಿ ಜಿಲ್ಲೆಯನ್ನು ಕ್ಲೀನ್ ಕಲಬುರಗಿ ಗ್ರೀನ್ ಕಲಬುರಗಿ ಮಾಡಲು ನಾವೆಲ್ಲರು ಪಣ ತೊಡಬೇಕಾಗಿದೆ ಎಂದು ಜಿಲ್ಲಾಧಿ ಕಾರಿ ಉಜ್ವಲಕುಮಾರ ಘೋಷ್ ಹೇಳಿದರು. ಕೋರವಾರದ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಜದುಂಡೆ ತಯಾರಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲರು ಭಾರತದ ನಾಗರಿಕನಾಗುವುದರ ಜತೆಗೆ ವಿಶ್ವ ಮಾನವರಾಗಬೇಕು ಮತ್ತು ಪರಿಸರ ಸಂರಕ್ಷಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು. ನವೋದಯ ವಿದ್ಯಾಲಯದ ಮಕ್ಕಳು ಗ್ರೀನ್ ಕಲಬುರಗಿ ಮಾಡುವ ಉದ್ದೇಶದಿಂದ ಒಂದು ಲಕ್ಷ ನಲವತ್ತು ಸಾವಿರ ಬೀಜದುಂಡೆ ತಯಾರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯ ಚಿಂಚೋಳಿ ತಾಲೂಕು ಕೊಂಚವರಂ ಅರಣ್ಯ ಪ್ರದೇಶದಲ್ಲಿ ಹಾಗೂ ವಿವಿಧ ಶಾಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಕಿ ಸಂರಕ್ಷಣೆ ಮಾಡಿ ಬೆಳಸಬೇಕು ಎಂದು ಹೇಳಿದರು. ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ ಮಾತನಾಡಿ, ಕಾಡಿನ ಮಹತ್ವ ಹಾಗೂ ಪರಿಸರದ ಕಾಳಜಿ ಜತೆಗೆ ಕಲಬುರಗಿ ಜಿಲ್ಲೆಯಲ್ಲಿರುವ ಕಾಡಿನ ಬಗ್ಗೆ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಕಾಡುಗಳು ಉಳಿದರೆ ನಾವೆಲ್ಲರು ಉಳಿದಂತೆ. ಮುಂದಿನ ಪೀಳಿಗೆಗೆ ನಾವು ಕಾಡನ್ನು ಬೆಳೆಸಿ ಉಡುಗೊರೆಯಾಗಿ ನೀಡಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ತಯಾರಿಸಿದ ಒಂದು ಲಕ್ಷ ನಲವತ್ತು ಸಾವಿರ ಬೀಜದುಂಡೆಗಳನ್ನು ಜಿಲ್ಲಾಧಿಕಾರಿ ಘೋಷ್, ಅರಣ್ಯಾಧಿ ಕಾರಿ ಶಿವಶಂಕರ ಹಾಗೂ ಜಿಪಂ ಸಿಇಒ ಹೆಪ್ಸಿಬಾರಾಣಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾಲಯದ ಪ್ರಾಚಾರ್ಯ ವಳ್ಳಿಯಮ್ಮೆ ಉಪಸ್ಥಿತರಿದ್ದರು. ಶಾಲೆ ಪಾಲಕ ಶಿಕ್ಷಕ ಸಮಿತಿ ಸದಸ್ಯರು ಹಾಗೂ ಅನೇಕರು ಹಾಜರಿದ್ದರು. ಉಪ ಪ್ರಾಚಾರ್ಯ ಒಬಳೇಶ್ವರ ಸ್ವಾಗತಿಸಿದರು. ಶಿಕ್ಷಕಿ ಗೀತಾ ಹಾಗೂ ಪ್ರಿಯಾ ನಿರೂಪಿಸಿದರು. ಶಿಕ್ಷಕ ರಾಮಚಂದ್ರ ಚವ್ಹಾಣ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
Kalaburagi: 77 ಪರೀಕ್ಷೆ ಬರೆದ ಕನ್ನಡ ಶಿಕ್ಷಕನಿಂದ ವಿಶ್ವದಾಖಲೆ!
Chincholi: ಬಟ್ಟೆ ಒಗೆಯುವ ವೇಳೆ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ
Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.