ಕಾವೇರಿ ಕಣಿವೆಯಲ್ಲಿ ಐದು ದಿನ ಭಾರೀ ಮಳೆ


Team Udayavani, Jun 28, 2017, 12:14 PM IST

mys4.jpg

ಮೈಸೂರು: ಕಾವೇರಿ ಕಣಿವೆಯ ಮೈಸೂರು, ಚಾಮರಾಜ ನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಜೂ.28 ರಿಂದ ಜು.2ರ ವರೆಗೆ ನಿತ್ಯ 60 ಮಿ.ಮೀ ಭಾರೀ ಮಳೆಯಾಗಲಿದೆ. ಗರಿಷ್ಠ 25 ರಿಂದ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ರಿಂದ 19 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಲಿದೆ.

ಮೈಸೂರು, ಚಾಮರಾಜ ನಗರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಜೂ.28, 29 ಹಾಗೂ ಜು.2 ರಂದು ತಲಾ 15 ಮಿ.ಮೀ, ಜೂ.30, 31 ರಂದು ತಲಾ 10 ಮಿ.ಮೀ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆ ಇದೆ.

ರೈತರಿಗೆ ಮುನ್ಸೂಚನೆ: ರಾಗಿ ಬಿತ್ತನೆ ಬೀಜಗಳನ್ನು ಸಾಫ್ 4 ಗ್ರಾಂ ಪ್ರತಿ ಒಂದು ಕೆ.ಜಿ ಬೀಜದ ಜೊತೆ ಬೀಜೋಪಚಾರ ಮಾಡುವುದು ಸೂಕ್ತ, ಸ್ಥಳೀಯ ಬಿತ್ತನೆ ಬೀಜವಾದಲ್ಲಿಉಪ್ಪು ನೀರಿನ ದ್ರಾವಣ 1; 4 ಪ್ರಮಾಣ ಬೀಜೋಪಾಚರ ಮಾಡುವುದು. ಜೂನ್‌ತಿಂಗಳಲ್ಲಿ ಇಂಡಫ್-8, ಎಂ ಆರ್‌-1 ಮತ್ತು ಎಂ ಆರ್‌-2 ರಾಗಿ ತಳಿ ಬಿತ್ತನೆ ಮಾಡಬಹುದು. ಅಲಸಂದೆ, ಅವರೆ,

-ಉದ್ದು, ಹೆಸರು ಬೆಳೆಗಳಲ್ಲಿ ವಾತಾವರಣದ ವ್ಯತ್ಯಾಸದಿಂದಾಗಿ ಗಿಡದಲ್ಲಿ ಹೇನು, ಹಳದಿ ರೋಗ ಕಂಡುಬರುತ್ತಿದ್ದು ಪ್ರತಿ ಒಂದು ಲೀಟರ್‌ ನೀರಿಗೆ ಕೀಟನಾಶಕಗಳಾದ ರೋಗರ್‌ 1.7 ಮಿ.ಲೀ ಮತು ಇಮಿಡಾಕೊ ಪ್ರಿಡ್‌ 0.5 ಮಿ.ಲೀ ಬೆರಸಿ ಸಿಂಪಡಿಸುವುದು. ಮಳೆ ಇದ್ದಲ್ಲಿ ಸಿಂಪಡಿಸುವ ದ್ರಾವಣದೊಂದಿಗೆ ಸೋಫೀಡ್‌ ಅಂಟು ದ್ರಾವಣವನ್ನು ಬೆರಸಿ ಸಿಂಪಡಿಸುವುದು ಸೂಕ್ತ.

ಬದನೆಬೆಳೆಯಲ್ಲಿ ಸೊರಗು ರೋಗ ಕಂಡು ಬಂದಲ್ಲಿ ಇದರ ಹತೋಟಿಗೆ 3 ಗ್ರಾಂ ಕಾರ್ಬ್ಆಕ್ಸಿಕೊರೈಡ್‌ ಮತ್ತು 500 ಗ್ರಾಂ ಸ್ಟ್ರೆಪೋಟೊಮೈಸಿನ್‌ ಸಲ್ಪೆಟ್‌ ಒಂದು ಲೀಟರ್‌ ನೀರಿಗೆ ಬೆರೆಸಿ ಸಿಂಪಡಿಸಿ, ಅಥವಾ 20 ಗ್ರಾಂ ಬ್ಲೀಚಿಂಗ್‌ ಪೌಡರನ್ನು ಒಂದು ಲೀಟರ್‌ ನೀರಿನಲ್ಲಿ ಕರಗಿಸಿ ರೋಗ ಕಂಡು ಬಂದ ಜಾಗವನ್ನು ಚೆನ್ನಾಗಿ ನೆನಸಬೇಕು.

ಶುಂಠಿ ಮತ್ತು ಅರಿಶಿಣ ಬೆಳೆಗಳಲ್ಲಿ ಗೆಡ್ಡೆ ಕೊಳೆರೋಗ ಕಂಡುಬಂದಿದ್ದು ಇದರ ಹತೋಟಿಗೆ ಜೈವಿಕ ಜೀವಾಣುವಾದ ಟ್ರೆ„ಕೊಡರ್ಮಾ ವಿರಿಡೆ ಮತ್ತು ಅರ್ಜಿನೆ 10 ಗ್ರಾಂ ನಂತೆ 30 ನಿಮಿಷ ಉಪಚರಿಸಿ ಬಿತ್ತುವುದು ಸೂಕ್ತ. ಬೆಳಗಿನ ಜಾವ ಹಾಗೂ ರಾತ್ರಿ ವೇಳೆ ವಾತಾವರಣದ ಉಷ್ಣಾಂಶದಲ್ಲಿ ಸ್ವಲ್ಪ ಇಳಿತವಿರುವುದರಿಂದ ಜಾನುವಾರು,

-ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆ ಕಾಪಾಡಿಕೊಳ್ಳಬೇಕು ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ.ಗೋವಿಂದರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.