ಆಷಾಢ ಶುಕ್ರವಾರ: ಚಾಮುಂಡೇಶ್ವರಿ ಭಕ್ತರಿಗೆ ವಿಶೇಷ ವ್ಯವಸ್ಥೆ
Team Udayavani, Jun 28, 2017, 12:14 PM IST
ಮೈಸೂರು: ಆಷಾಢ ಶುಕ್ರವಾರ ಮತ್ತು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವಕ್ಕೆ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಆಷಾಢ ಶುಕ್ರವಾರಗಳಾದ ಜೂ.30, ಜುಲೈ 7, 14, 21 ಹಾಗೂ ಜು.16ರಂದು ಅಮ್ಮನವರ ವರ್ಧಂತಿ ಮಹೋತ್ಸವದಂದು ಬೆಳಗ್ಗೆ 5.30 ರಿಂದ ರಾತ್ರಿ 9.30 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮೂರು ಪ್ರತ್ಯೇಕ ಸರತಿ ಸಾಲುಗಳಲ್ಲಿ ಭಕ್ತರಿಗೆ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾರಾಯಣಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪ್ರವೇಶ ಮಾಡುವ ಸಾಲಿನವರಿಗೆ ಉಚಿತ ದರ್ಶನ, ಮಹಾಬಲೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪ್ರವೇಶ ಮಾಡುವ ವಿಶೇಷ ಸರತಿ ಸಾಲಿನಲ್ಲಿ ಬರುವವರಿಗೆ 50 ರೂ., 300 ರೂ.ಗಳ ಅಭಿಷೇಕ ಸೇವೆಯವರಿಗೆ ಸಾಲು ದೇವಸ್ಥಾನದ ಉತ್ತರ ದಿಕ್ಕಿನ ಹೈಮಾಸ್ಟ್ ಕಂಬ ನಂದಿನಿ ಪಾರ್ಲರ್ ಮುಂಭಾಗದಿಂದ ಸರತಿ ಸಾಲು ಪ್ರಾರಂಭವಾಗಲಿದೆ.
ಸಾರಿಗೆ ವ್ಯವಸ್ಥೆ: ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ಆಷಾಢ ಶುಕ್ರವಾರಗಳ ಹಿಂದಿನ ದಿನ ರಾತ್ರಿ 9.30 ಗಂಟೆ ಯಿಂದಲೇ ನಿರ್ಬಂಧಿಸಲಾಗಿದೆ. ಖಾಸಗಿ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ ಬಳಿ ನಿಲಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಂದ ಉಚಿತವಾಗಿ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ದೇವಸ್ಥಾನಕ್ಕೆ ಹೋಗಿ, ಬರುವ ವ್ಯವಸ್ಥೆ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ಬಸ್ಸುಗಳ ಸಂಚಾರ ಪ್ರಾರಂಭವಾಗುತ್ತದೆ.
ರಾತ್ರಿ 9 ಗಂಟೆವರೆಗೂ ಸಂಚಾರ ಇರುತ್ತದೆ. ಖಾಸಗಿ ವಾಹನಗಳನ್ನು ದಸರಾ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ನಿಲುಗಡೆ ಮಾಡಿ, ಅಲ್ಲಿಂದ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ 17 ರೂ. ಶುಲ್ಕ ಪಾವತಿಸಿ, ಬೆಟ್ಟಕ್ಕೆ ಹೋಗಿ-ಬರುವ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 5.30 ಗಂಟೆಯಿಂದ ಬಸ್ಸುಗಳ ಸಂಚಾರ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 9ಗಂಟೆ ನಂತರ ಬಸ್ಸುಗಳ ಸಂಚಾರ ಇರುವುದಿಲ್ಲ.
ಪ್ರಸಾದ: ಆಷಾಢ ಶುಕ್ರವಾರ ಮತ್ತು ಅಮ್ಮನವರ ವರ್ಧಂತಿ ದಿನಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸುವಂತಹ ಸೇವಾರ್ಥದಾರರು ಬೆಟ್ಟಕ್ಕೆ ಪ್ರವೇಶಿಸಲು ಜಿಲ್ಲಾಧಿಕಾರಿಗಳ ಕಚೇರಿ ಮುಜರಾಯಿ ಶಾಖೆಯಲ್ಲಿ ಅನುಮತಿ ಪಾಸುಗಳನ್ನು ಪಡೆದು ಬೆಟ್ಟದಲ್ಲಿರುವ ಆಹಾರ ಪರಿವೀಕ್ಷಕರಿಂದ ಪರಿಶೀಲಿಸಿಕೊಂಡು ಹಂಚಬೇಕು. ಇದಕ್ಕಾಗಿ ಚಾಮುಂಡಿಬೆಟ್ಟದ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಹಾಕಿರುವ ಆಹಾರ ಮಳಿಗೆಯಲ್ಲಿಯೇ ಕಡ್ಡಾಯವಾಗಿ ಪ್ರಸಾದ ವಿತರಿಸಬೇಕು.
ಅನುಮತಿ ಇಲ್ಲದೆ ಪ್ರಸಾದ ವಿನಿಯೋಗ ಮಾಡುವವರ ವಿರುದ್ಧ ಕ್ರಮ ವಹಿಸಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬ್ಯಾಗು, ನೀರಿನ ಬಾಟಲ್ಗಳ ಬಳಕೆ ನಿಷೇಧಿಸಿರುವುದರಿಂದ ಸಾರ್ವಜನಿಕ ಭಕ್ತಾದಿಗಳು ಪ್ಲಾಸ್ಟಿಕ್ ಬಳಸದಂತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿನಂತಿಸಿದ್ದಾರೆ.
ಬೆಟ್ಟಕ್ಕೆ ಹೋಗಲು ಪಾಸ್ ಕಡ್ಡಾಯ
ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ವಿವಿಐಪಿ, ವಿಐಪಿ ವಾಹನಗಳು, ಕರ್ತವ್ಯದ ಮೇರೆಗೆ ತೆರಳುವ ವಾಹನಗಳಿಗೆ ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಾಹನ ಪಾಸ್ ನೀಡಲಾಗುವುದು. ಈ ವಾಹನಗಳಿಗೆ ಬೆಟ್ಟದ ಮೇಲೆ ಹೋಗಲು ಅವಕಾಶವಿದ್ದು, ಪಾರ್ಕಿಂಗ್ಗೆ ನಿಗಧಿಪಡಿಸಿರುವ 2, 3ನೇ ಪಾರ್ಕಿಂಗ್ ಜಾಗಗಳಲ್ಲಿ ವಾಹನ ನಿಲುಗಡೆ ಮಾಡುವುದು.
ಮಹಿಷಾಸುರ ಪ್ರತಿಮೆದಿಂದ ದೇವಸ್ಥಾನದ ವರೆಗೆ ಯಾವುದೇ ವಾಹನಗಳಿಗೆ ಪ್ರವೇಶವಿರುವುದಿಲ್ಲ. ಆಷಾಢ ಶುಕ್ರವಾರದ ಹಿಂದಿನ ದಿನ ರಾತ್ರಿ 10 ಗಂಟೆಯಿಂದಲೇ ವಾಹನಗಳಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಉತ್ತನಹಳ್ಳಿ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಚಾಮುಂಡಿ ಬೆಟ್ಟದಲ್ಲಿರುವ ನಿವಾಸಿಗಳು ವಾಹನ ಸಂಚಾರಕ್ಕೆ ಅನುಮತಿ ಪಡೆಯಲು ಡಿ.ಎಲ್, ವಾಹನದ ದಾಖಲಾತಿ, ಮತದಾರರ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಚಾಮುಂಡಿಬೆಟ್ಟದ ಗ್ರಾಪಂಗೆ ಸಲ್ಲಿಸಿ ಅನುಮತಿ ಪಾಸ್ ಪಡೆದುಕೊಳ್ಳುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎ. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
Mysuru Dasara: ಎದೆ ಝಲ್ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.