ಕಡಲ್ಕೊರೆತ: ಗಂಜಿಕೇಂದ್ರ ಸ್ಥಾಪನೆಗೆ ಆದೇಶ


Team Udayavani, Jun 29, 2017, 3:15 AM IST

Ullala-Erosion-28-6.jpg

ಉಳ್ಳಾಲ: ಉಳ್ಳಾಲ ಮತ್ತು ಸೋಮೇಶ್ವರ ಉಚ್ಚಿಲದಲ್ಲಿ ಕಡಲ್ಕೊರೆತ ಮುಂದುವರಿದಿದೆ. ಈ ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಸುಮಾರು 40 ಮನೆಗಳನ್ನು ಗುರುತಿಸಿದ್ದು ಅವರಿಗೆ ತಾತ್ಕಾಲಿಕವಾಗಿ ಗಂಜಿ ಕೇಂದ್ರ ಸ್ಥಾಪನೆಗೆ ಉಳ್ಳಾಲ ನಗರಸಭೆಗೆ ಜಿಲ್ಲಾಡಳಿತ ಆದೇಶಿಸಿದೆ. ಕಳೆದ ನಾಲ್ಕು ದಿನಗಳಿಂದ ಉಳ್ಳಾಲ ಸೇರಿದಂತೆ ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರ ಬಿರುಸುಗೊಂಡಿದೆ. ಸಮುದ್ರದ ಅಲೆಗಳು ಮನೆಗಳಿಗಪ್ಪಳಿಸುತ್ತಿದ್ದು, ಮೊಗವೀರಪಟ್ಣ, ಕಿಲಿರಿಯಾ ನಗರ ಮುಕ್ಕಚ್ಚೇರಿ, ಸುಭಾಷ್‌ನಗರ, ಕೈಕೋದಲ್ಲಿ ಮನೆಗಳ ಒಳಗೆ ಸಮುದ್ರದ ನೀರು ತುಂಬಿ ವಾಸಿಸಲು ಕಷ್ಟಕರವಾಗಿದೆ. ಈ ಪ್ರದೇಶದಲ್ಲಿ ಅಪಾಯದಲ್ಲಿರುವ ಮನೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಗುರುವಾರ ಸಹಾಯಕ ಕಮಿಷನರ್‌ ರೇಣುಕಾ ಪ್ರಸಾದ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಂದರ್ಭದಲ್ಲಿ ಕೈಕೋ ಬಳಿ ಸಹಾಯಕ ಕಮಿಷನರ್‌ ಅವರನ್ನು ಸ್ಥಳೀಯ ನಿವಾಸಿಗಳು ತರಾಟೆಗೆ ತೆಗೆದುಕೊಂಡರು.

ಗಂಜಿ ಕೇಂದ್ರ ಸ್ಥಾಪಿಸಲು ಆದೇಶ
ಉಳ್ಳಾಲದಲ್ಲಿ ಗಂಜಿ ಕೇಂದ್ರ ಸ್ಥಾಪನೆಗೆ ಸಹಾಯಕ ಕಮಿಷನರ್‌ ಸ್ಥಳಿಯಾಡಳಿತ ಸಂಸ್ಥೆಗೆ ಆದೇಶ ನೀಡಿದ್ದು, ಸ್ಥಳೀಯ ಅಂಗನವಾಡಿ ಕೇಂದ್ರ, ಖಾಲಿ ಇರುವ ಫ್ಲ್ಯಾಟ್‌ಗಳು ಮತ್ತು ಹಾಸ್ಟೆಲ್‌ಗ‌ಳಿಗೆ ಅಪಾಯದಲ್ಲಿರುವ ಕುಟುಂಬಗಳನ್ನು ಸ್ಥಳಾಂತರ ಮಾಡುವ ನಿಟ್ಟಿನಲ್ಲಿ  ಕಾರ್ಯ ನಡೆಯುತ್ತಿದೆ ಎಂದು ಪೌರಾಯುಕ್ತೆ ವಾಣಿ ವಿ. ಆಳ್ವ ತಿಳಿಸಿದರು.

ಮೊಗವೀರಪಟ್ಣದಲ್ಲಿ ಹೆಚ್ಚಿದ ಕಡಲ ಅಬ್ಬರ
ಶಾಶ್ವತ ಕಾಮಗಾರಿಯಿಂದ ಕೈಕೋ ಕಿಲಿರಿಯಾ ನಗರದಲ್ಲಿ ಕಡಲ್ಕೊರೆತ ಹೆಚ್ಚಿದ್ದು, ಇತ್ತ ಮೊಗವೀರಪಟ್ಣದಲ್ಲಿ ಕಳೆದ ಮೂರು ದಿನಗಳಿಂದ ಸಮುದ್ರದ ಬಿರುಸು ಹೆಚ್ಚಿದೆ. ಮುಖ್ಯವಾಗಿ ಕೋಟೆಪುರ ಮತ್ತು ಮೊಗವೀರಪಟ್ಣ ಬೀಚ್‌ ಬಳಿ ಸಮುದ್ರದ ಮಧ್ಯೆ ರೀಫ್‌ ಕಾಮಗಾರಿ ನಡೆದಿದ್ದು ಈ ಎರಡು ರೀಫ್‌ಗಳ ಮಧ್ಯೆ ಸುಮಾರು 400 ಮೀಟರ್‌ ಅಂತರವಿದ್ದು, ಈ ಪ್ರದೇಶದಲ್ಲಿ ದೊಡ್ಡ ದೊಡ್ಡ ಅಲೆಗಳು ಬರುತ್ತಿದ್ದು, ಸುಮಾರು 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ.

ಕಡಲ್ಕೊರೆತ ಪ್ರದೇಶಕ್ಕೆ ಸಹಾಯಕ ಕಮಿಷನರ್‌ ಅವರೊಂದಿಗೆ ತಹ ಶೀಲ್ದಾರ್‌ ಸಿ. ಮಹಾದೇವ, ಕಂದಾಯ ಅಧಿಕಾರಿ ಜೋಸ್ಲಿನ್‌ ಸ್ಟೀಫನ್‌, ಪ್ರಮೋದ್‌ ಕುಮಾರ್‌, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್‌ ಕುಂಞಿಮೋನು, ಪೌರಾಯುಕ್ತೆ ವಾಣಿ ವಿ. ಆಳ್ವ ಸಹಾಯಕ ಕಾರ್ಯಪಾಲಕ ಅಭಿಯಂತರ ರಾದ ಉಮೇಶ್‌ ಕಾಮತ್‌, ಕಿರಿಯ ಅಭಿಯಂತರಾದ ದಿವಾಕರ್‌, ಕೌನ್ಸಿಲರ್‌ಗಳಾದ ಮಹಮ್ಮದ್‌ ಮುಕ್ಕಚ್ಚೇರಿ, ಸೂರ್ಯಕಲಾ,ಮೀನಾಕ್ಷಿ ದಾಮೋದರ್‌ ಉಪಸ್ಥಿತರಿದ್ದರು.

ಶಾಶ್ವತ ಕಾಮಗಾರಿಯಿಂದ ಮೊಗವೀರಪಟ್ಣಕ್ಕೆ ಯಾವುದೇ ಲಾಭವಾಗಿಲ್ಲ. ಮೊಗವೀರಪಟ್ಣ ಮತ್ತು ಕೋಟೆಪುರ ಬಳಿ ನಿರ್ಮಿಸಿರುವ ರೀಫ್‌ ಕಾಮಗಾರಿಯ ಮಧ್ಯೆ ಖಾಲಿ ಇರುವ ಪ್ರದೇಶದಲ್ಲಿ ಇನ್ನೊಂದು ರೀಫ್‌ ಕಾಮಗಾರಿ ನಡೆಸಿದರೆ ಸಮಸ್ಯೆ ಪರಿಹಾರ ಸಾಧ್ಯ.
– ಭರತ್‌ ಕುಮಾರ್‌ ಉಳ್ಳಾಲ, ಅಧ್ಯಕ್ಷರು ಉಳ್ಳಾಲ ಮೊಗವೀರ ಸಂಘ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.