ಗಿನ್ನಿಸ್‌ ದಾಖಲೆ ನಮ್ಮ ಕೈತಪ್ಪಿಲ್ಲ: ಡಿಸಿ ರಂದೀಪ್‌


Team Udayavani, Jun 30, 2017, 12:46 PM IST

mys5.jpg

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆಸಲಾದ ಬೃಹತ್‌ ಯೋಗ ಪ್ರದರ್ಶನದ ಗಿನ್ನಿಸ್‌ ದಾಖಲೆ ನಮ್ಮ ಕೈತಪ್ಪಿಲ್ಲ, ಪೂರಕ ದಾಖಲೆಗಳನ್ನು ಸಲ್ಲಿಸಲಿದ್ದು, ಗಿನ್ನಿಸ್‌ ದಾಖಲೆ ದೊರೆಯುವ ವಿಶ್ವಾಸವಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಗದಲ್ಲಿ ಎರಡು ಗಿನ್ನಿಸ್‌ ದಾಖಲೆಗೆ ಪ್ರಯತ್ನಿಸಲಾಗಿತ್ತು. ಎರಡೂ ಪ್ರದರ್ಶನಕ್ಕೆ ಮೈಸೂರಿಗರ ಪ್ರತಿಕ್ರಿಯೆ ಉತ್ತಮವಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜೂ.19ರಂದು ಅರಮನೆ ಆವರಣದಲ್ಲಿ ನಡೆದ ಅತಿದೊಡ್ಡ ಯೋಗ ಸರಪಳಿ ಪ್ರದರ್ಶನ ಸಂಬಂಧದ ಛಾಯಾಚಿತ್ರ, ವಿಡಿಯೋ ತುಣುಕು, ಪತ್ರಿಕಾ ಮಾಧ್ಯಮಗಳ ವರದಿ, ಡ್ರೋಣ್‌ ಕ್ಯಾಮರಾದಲ್ಲಿ ಸೆರೆಹಿಡಿಯಲಾದ ದೃಶ್ಯಾವಳಿಗಳನ್ನು ಗುರುವಾರ ಗಿನ್ನಿಸ್‌ ಬುಕ್‌ ಆಫ್ ರೆಕಾರ್ಡ್ಸ್‌ ಸಂಸ್ಥೆಗೆ ಸಲ್ಲಿಸಲಾಗಿದೆ. ಸದ್ಯ ಟಿಕೆಟ್‌ ನೀಡಿಕೆ ಆಧಾರದ ಮೇಲೆ ಆಹ್ಮದಾಬಾದ್‌ಗೆ ಗಿನ್ನಿಸ್‌ ದಾಖಲೆ ನೀಡಲಾಗಿದೆ ಎಂದರು.

ಗಮನಕ್ಕೆ ತರಲಾಗುವುದು: ರೇಸ್‌ಕೋರ್ಸ್‌ ಆವರಣದಲ್ಲಿ 72 ಸಾವಿರ ಜನರು ಸಾಮೂಹಿಕವಾಗಿ ಯೋಗ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಂತಿಮವಾಗಿ ನಮ್ಮ ಗುರಿ ಹಿಂದಿನ ದಾಖಲೆ 37 ಸಾವಿರವನ್ನು ಮುರಿಯುವುದಾಗಿತ್ತು. ಆದರೆ, ಮೈಸೂರಿಗರು ನಿರೀಕ್ಷೆಗೆ ಮೀರಿ ಸಹಕಾರ ನೀಡಿದ್ದರಿಂದ 54101 ಜನರು ಯೋಗ ಪ್ರದರ್ಶನದಲ್ಲಿ ಭಾಗಿಯಾದರು. ರಜೆ ದಿನವಾಗಿದ್ದರೆ ಇನ್ನೂ ಹೆಚ್ಚಿನ ಜನ ಭಾಗವಹಿಸುವ ಸಾಧ್ಯತೆ ಇತ್ತು.

ಈ 54101 ಜನರಿಗೆ ಟಿಕೆಟ್‌ ನೀಡಿರುವ ಮಾಹಿತಿಯಷ್ಟೇ ಗಿನ್ನಿಸ್‌ ಸಂಸ್ಥೆಗೆ ಹೋಗಿದೆ. ಆದರೆ, ಸುಮಾರು 1 ಸಾವಿರ ಮಂದಿ ಪ್ರದರ್ಶಕರು ಮುಂಚಿತವಾಗಿಯೇ ಮೈದಾನದೊಳಗಿದ್ದರು, ಅವರಿಗೆ ಯಾವ ಟಿಕೆಟ್‌ ನೀಡಿರಲಿಲ್ಲ. ಈ ಅಂಶವನ್ನೂ ಸಂಸ್ಥೆ ಗಮನಕ್ಕೆ ತರಲಾಗುವುದು. 50 ರಿಂದ 60 ಲಕ್ಷ ರೂ. ವೆಚ್ಚದಲ್ಲಿ ಇಡೀ ಪ್ರದರ್ಶನ ಪೂರ್ಣಗೊಳಿಸಿದ್ದು, 3 ತಿಂಗಳವರೆಗೆ ಗಿನ್ನಿಸ್‌ ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಲು ಅವಕಾಶವಿದೆ.

ನಮ್ಮ ಮನವಿಗೆ ಸಂಸ್ಥೆ ಒಪ್ಪಿದರೆ ವಿಶೇಷ ವೀಕ್ಷಕರನ್ನು ಕಳುಹಿಸುವ ಸಾಧ್ಯತೆ ಇದೆ ಎಂದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್‌.ನಟರಾಜ್‌, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು, ಜಿಎಸ್‌ಎಸ್‌ ಸಂಸ್ಥೆಯ ಶ್ರೀಹರಿ, ಪ್ರಶಾಂತ್‌, ನಾರಾಯಣ ಗೌಡ ಇದ್ದರು.

ದಾಖಲಾತಿಗಳನ್ನು ಸಲ್ಲಿಸಲಾಗುವುದು
ಜೂ. 21ರಂದು ರೇಸ್‌ಕೋರ್ಸ್‌ ಆವರಣದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದ ಆಡಿಯೋ, ವಿಡಿಯೋ, ಪತ್ರಿಕಾ ಮಾಧ್ಯಮಗಳ ವರದಿಗಳು, ಡ್ರೋಣ್‌ ಕ್ಯಾಮರಾಗಳ ಛಾಯಾಚಿತ್ರ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಜುಲೈ ಮೊದಲ ವಾರದಲ್ಲಿ ಗಿನ್ನಿಸ್‌ ಬುಕ್‌ ಆಫ್ ರೆಕಾರ್ಡ್ಸ್‌ ಸಂಸ್ಥೆಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.