ವಿಶ್ವೇಶ್ವರಿಗೆ ಸಿಜಿಕೆ ಪುರಸ್ಕಾರ


Team Udayavani, Jun 30, 2017, 4:19 PM IST

hub1.jpg

ಧಾರವಾಡ: ಧರ್ಮ ಜ್ಯೋತಿ, ಸಮಾನ ಮನಸ್ಕರ ವಿಚಾರ ವೇದಿಕೆ ಮತ್ತು ಸಂಸ ಥಿಯೇಟರ್‌ ಸಹಯೋಗದಲ್ಲಿ ರಂಗಾಯಣದ ಸಾಂಸ್ಕೃತಿಕ ಸಮುತ್ಛಯದಲ್ಲಿ ಹಮ್ಮಿಕೊಂಡಿದ್ದ ಸಿಜಿಕೆ ಬೀದಿರಂಗ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ವಿಶ್ವೇಶ್ವರಿ ಬಸಲಿಂಗಯ್ಯ ಹಿರೇಮಠ ಅವರಿಗೆ ಸಿಜಿಕೆ ರಂಗ ಪುರಸ್ಕಾರ-2017 ನೀಡಲಾಯಿತು. 

ಪುರಸ್ಕಾರ ಸ್ವೀಕರಿಸಿದ ವಿಶ್ವೇಶ್ವರಿ ಹಿರೇಮಠ ಮಾತನಾಡಿ, ಆಧುನಿಕ ರಂಗಭೂಮಿಯ ಸಂದರ್ಭದ ಎಂಬತ್ತರ ದಶಕದಲ್ಲಿ ಹೆಣ್ಣು ಮಕ್ಕಳು ರಂಗಭೂಮಿಯಲ್ಲಿ ಸಕ್ರಿಯವಾಗಿಲ್ಲದ ಕಾಲಘಟ್ಟದಲ್ಲಿ ರಂಗಭೂಮಿ ಪ್ರವೇಶಿಸಿ ಇಂದು ಈ ಮಟ್ಟಕ್ಕೆ ತಲುಪಲು ಗುರು-ಹಿರಿಯರು-ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಕಲಾವಿದರಿಗೆ ಯಾವುದೇ ಜಾತಿ-ಮತ-ಧರ್ಮಗಳ ಹಂಗಿಲ್ಲ.

ಸಮಾಜವನ್ನು ನಿರಂತರ ಜಾಗೃತಿಯಲ್ಲಿಡಲು ರಂಗಭೂಮಿ ಉತ್ತಮ ಮಾಧ್ಯಮವಾಗಿದೆ ಎಂದರು. ರಂಗನಟ ವಿಲಾಸ ಶೇರಖಾನ ಮಾತನಾಡಿ, ಆರಂಭಿಕ ಕಾಲದಲ್ಲಿ ನಾಟಕ ಪ್ರದರ್ಶನಗಳಿಗೆ ನಿರಂತರ ಬರುತ್ತಿದ್ದ ಆಸಕ್ತರನ್ನು ಗುರುತಿಸಿ ಆಗಿನ ನಿರ್ದೇಶಕರು ತಮ್ಮ ನಾಟಕಗಳಲ್ಲಿ ಪಾತ್ರ ನೀಡಿ, ಕಲಾವಿದರನ್ನು ತಯಾರು ಮಾಡುತ್ತಿದ್ದರು.

ಅದರಂತೆ, ಕಲಾವಿದರು ಸಹ ಒಪ್ಪಿಸಿದ ಕೆಲಸವನ್ನು ಬದ್ಧತೆಯಿಂದ ನಿರ್ವಹಿಸುತ್ತಿದ್ದರು. ಆದರೀಗ ಬದಲಾದ ಕಾಲಮಾನದಲ್ಲಿ ಪಾತ್ರ ಮಾಡಲು ಕರೆದರೆ ಪೇಮೆಂಟ್‌ ಎಷ್ಟು ಕೋಡ್ತೀರಿ? ಎಂದು ಕೇಳುವಂತಾಗಿದೆ. ಇಂತಹ ಪರಿಸ್ಥಿತಿ ತಿಳಿಯಾಗಿ ಎಲ್ಲರೂ ಒಗ್ಗೂಡಿ, ಉತ್ತಮ ಪ್ರದರ್ಶನಗಳತ್ತ ಗಮನ ಹರಿಸಬೇಕಾಗಿದೆ ಎಂದರು. ಲಕ್ಷ್ಮಣ ಬಕ್ಕಾಯಿ, ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಇದ್ದರು.

ಗಾಯಕಿ ಜಯಶ್ರೀ ಜಾತಿಕರ್ತ ಪ್ರಾರ್ಥಿಸಿದರು. ಯೋಗೇಶ ಪಾಟೀಲ ನಿರೂಪಿಸಿದರು. ಜೋಸೆಪ್‌ ಮಲ್ಲಾಡಿ ವಂದಿಸಿದರು. ಪೌರಾಣಿಕ ಕಾಲಮಾನದಿಂದ ಆಧುನಿಕ ಕಾಲದವರೆಗಿನ ಮಹಿಳಾ ಲೋಕದ ತಲ್ಲಣಗಳ ವಿಷಯಾಧಾರಿತ ಶಶಿಕಾಂತ ಯಡಹಳ್ಳಿ ವಿರಚಿತ ಗಣಕರಂಗ ಪ್ರಸ್ತುತಪಡಿಸಿದ ಸೀತಾಂತರಾಳ ನಾಟಕವು ವೈ.ಡಿ.ಬದಾಮಿ ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು. 

ಟಾಪ್ ನ್ಯೂಸ್

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.