ಹೈಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿ ಮಾಡುವೆ: ರವಿ ಬೆಳಗೆರೆ
Team Udayavani, Jul 2, 2017, 3:45 AM IST
ಹುಬ್ಬಳ್ಳಿ: “ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಹಿರಿಯರಾಗಿದ್ದು, ಅವರನ್ನು ಗೌರವಿಸುತ್ತೇನೆ. ಆದರೆ, ಅವರು ನನಗೆ ಮೂರು ನೋಟಿಸ್ ಕಳುಹಿಸಿದರೂ ಭೇಟಿಯಾಗಿಲ್ಲವೆಂಬ ಕಾರಣಕ್ಕೆ ಸಿಟ್ಟಾಗಿ ನನ್ನ ಮೇಲೆ ಶಿಕ್ಷೆ ವಿಧಿಸಿದ್ದು ತಪ್ಪು. ನಾನು ಜೈಲಿಗೆ ಹೋಗಲು ಸಿದ್ಧನಿದ್ದು, ಅದಕ್ಕೇನೂ ಅಭ್ಯಂತರವಿಲ್ಲ. ಆದರೆ, ಮುಂದಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹಿರಿಯ ಪತ್ರಕರ್ತ ರವಿ ಬೆಳಗೆರೆ ಹೇಳಿದರು.
ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಇಲ್ಲಿನ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, “ಕೋಳಿವಾಡ ಅವರನ್ನು ಎಂದೂ ಅವಮಾನಿಸಿಲ್ಲ. ಆದರೂ, ಅವರಿಗೆ ನನ್ನ ಮೇಲೇಕೆ ಸಿಟ್ಟು ಬಂತೋ ಗೊತ್ತಿಲ್ಲ. ಅವರು ತಪ್ಪು ಗ್ರಹಿಕೆಯಿಂದಾಗಿ ಶಿಕ್ಷೆ ವಿಧಿಸಿದ್ದಾರೆ. ಅವರ ಮನವರಿಕೆ ಮಾಡುವ ಕಾರ್ಯ ಆಗಿಲ್ಲ. ಅವರ ಆಜ್ಞೆಯನ್ನು ನಾನು ಧಿಕ್ಕರಿಸಿಲ್ಲ. ಹೈಕೋರ್ಟ್ ಸೂಚನೆಯಂತೆ ಸ್ಪೀಕರ್ ಅವರನ್ನು ಸೋಮವಾರ ಭೇಟಿ ಮಾಡುವೆ’ ಎಂದರು.
“ಎಲ್ಲ ಪತ್ರಕರ್ತರೂ ಒಗ್ಗೂಡಿದರೆ ಸಾಕಷ್ಟು ಬದಲಾವಣೆ ತರಬಹುದು. ಪತ್ರಕರ್ತರನ್ನು ಕೆಣಕಲು ಬರಬೇಡಿ. ಅಂಗೈ ಅಡ್ಡವಿಟ್ಟು ಸೂರ್ಯೋದಯ ತಡೆಯುವ ಪ್ರಯತ್ನ ಮಾಡಬೇಡಿ. ನನ್ನನ್ನು ಬಂಧಿಸುವುದಾದರೆ ಪ್ರತಿಯೊಬ್ಬ ಪತ್ರಕರ್ತರನ್ನೂ ಬಂಧಿಸಬೇಕಾಗುತ್ತದೆ. ಪತ್ರಿಕೋದ್ಯಮದ ಮೇಲೆ ಇಂತಹ ಪ್ರಹಾರ ಬೇಕಾಗಿಲ್ಲ. ನನ್ನನ್ನು ಎನ್ಕೌಂಟರ್ ಮಾಡಿ ಮುಗಿಸಿದರೆ ಇನ್ನೊಬ್ಬರು ಹುಟ್ಟಲ್ಲವೆಂದು ಅಂದುಕೊಳ್ಳಬೇಡಿ. ನಮ್ಮಂತವರನ್ನು ಮಟ್ಟಹಾಕಲು ಬಂದರೆ ನನ್ನಂಥ ಹತ್ತು ಜನ ಹುಟ್ಟಿ ಬರುತ್ತಾರೆ. ಆದ್ದರಿಂದ ಕೋಳಿವಾಡ ಅವರು ನನ್ನ ಕಾರ್ಯವೈಖರಿ ಅರ್ಥ ಮಾಡಿಕೊಳ್ಳಬೇಕು. ತಮ್ಮ ಆದೇಶ ಹಿಂಪಡೆದುಕೊಳ್ಳಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.