ಮಲೇರಿಯಾ ವಿರೋಧಿ ಮಾಸಾಚರಣೆ: ಮಾಹಿತಿ
Team Udayavani, Jul 3, 2017, 3:45 AM IST
ಕಾರ್ಕಳ: ಮಂಜುನಾಥ ಪೈ ಸರಕಾರಿ ಕಾಲೇಜಿನ ಎನ್ನೆಸ್ಸೆಸ್ ಹಾಗೂ ರೆಡ್ ಕ್ರಾಸ್ ಘಟಕಗಳು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವುಗಳ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಇತ್ತೀಚೆಗೆ ನಡೆಸಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿಯ ಅಧ್ಯಕ್ಷ ಉದಯ ಎಸ್. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಾಗರೂಕರಾಗಿ, ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರೇಮಾನಂದ ಅವರು, ಸೊಳ್ಳೆಗಳಿಂದ ಬರುವ ಮಲೇರಿಯಾ , ಆನೆಕಾಲು ರೋಗ, ಮೆದುಳು ಜ್ವರ, ಡೆಂಗ್ಯೂ ಹಾಗೂ ಚಿಕನ್ ಗುನ್ಯ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ| ಶ್ರೀವರ್ಮ ಅಜ್ರಿ ಎಂ. ಮಾತನಾಡಿ, ವಿದ್ಯಾರ್ಥಿಗಳು ಇಂತಹ ಮಾಹಿತಿಗಳನ್ನು ಜನರಿಗೆ ತಿಳಿಸಿ ಮಲೇರಿಯಾವನ್ನು ನಿರ್ಮೂಲನೆ ಮಾಡುವ ಕ್ರಮ ಕೈಗೊಳ್ಳಬೇಕು ಎಂದರು.
ಯೋಜನಾಧಿಕಾರಿ ನವೀನ್, ರೆಡ್ ಕ್ರಾಸ್ ಘಟಕದ ಸಂಚಾಲಕ ವೆಂಕಟೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ವೈದ್ಯೆàತರ ಮೇಲ್ವಿಚಾರಕ ಸುರೇಶ್ ಶೆಟ್ಟಿ, ಸ್ವಾಗತಿಸಿ, ಪ್ರಾಧ್ಯಾಪಕ ಯೋಗೇಶ್ ಡಿ.ಎಚ್. ಕಾರ್ಯಕ್ರಮ ನಿರೂಪಿಸಿ, ಹಿರಿಯ ಆರೋಗ್ಯ ಸಹಾ ಯಕ ಶಿವರಾಂ ರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.