ಮತಗಳಂತೆ ಧರ್ಮಗಳ ಸೌಹಾರ್ದವೂ ಅಗತ್ಯ: ಪೇಜಾವರ ಶ್ರೀ
Team Udayavani, Jul 3, 2017, 3:40 AM IST
ಉಡುಪಿ: ದ್ವೈತ, ಅದ್ವೈತ, ವಿಶಿಷ್ಟಾದ್ವೈತದಲ್ಲಿ ಸಮನ್ವಯ ಮಾಡಿಕೊಂಡು ಹೋಗುವಂತೆ, ಪರ ಧರ್ಮಗಳ ಸೌಹಾರ್ದವೂ ಅಗತ್ಯವಾಗಿದೆ. ಶ್ರೀಕೃಷ್ಣ ಮಠದಲ್ಲಿ ಏರ್ಪಡಿಸಿದ್ದ ಈದ್ ಉಪಾಹಾರ ಕೂಟ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದು ಪರಧರ್ಮ ಅಸಹಿಷ್ಣುತೆಯ ಪರಮಾವಧಿ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮ ಧರ್ಮಗಳ ಸಾಮರಸ್ಯ ಬೆಳೆಯ ಬೇಕಾದ ಈ ಕಾಲಘಟ್ಟದಲ್ಲಿ ಉಪಾಹಾರ ಕೂಟ ನೀಡಿರುವುದನ್ನೇ ಮುಂದೆ ಮಾಡಿಕೊಂಡು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಹಿಂದೂ ಧರ್ಮಕ್ಕೆ ಏನಾಗಿದೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ? ಏನಾಗಿದೆ ಎಂದು ಮಠವನ್ನು ಶುದ್ಧಿ ಮಾಡಬೇಕು? ಪ್ರತಿಭಟನೆಯಿಂದ ನಾನೇನೂ ವಿಚಲಿತನಾಗಿಲ್ಲ. ನನ್ನ ದೈನಂದಿನ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯುತ್ತಿವೆ ಎಂದರು.
ನಾನು ಯಾವುದೇ ಅಪಚಾರ ಮಾಡಿಲ್ಲ, ಧರ್ಮಕ್ಕೂ ಅಪಚಾರವಾಗಿಲ್ಲ ಬದಲಾಗಿ ಬೆಳೆದಿದೆ. ಸುಮ್ಮನೆ ಗದ್ದಲ ಮಾಡುವವರಿಗೆ ಶಾಸ್ತ್ರಗಳ ಅರಿವಿಲ್ಲ. ಹಿಂದೂ ಧರ್ಮಕ್ಕೆ ಅನ್ಯಾಯವಾದಾಗ ಹೋರಾಟ ಹಾಗೂ ಇತರ ಧರ್ಮಗಳೊಂದಿಗೆ ಸ್ನೇಹ ಸೌಹಾರ್ದ ಬೆಳೆಸಿಕೊಂಡು ಬಂದಿದ್ದು ಮುಂದುವರಿಸಿಕೊಂಡು ಹೋಗಲಿದ್ದೇನೆ ಎಂದರು. ಶಿವನನ್ನು ಪೂಜಿಸುವ ಶೈವರು ಶಿವನಿಗಿಂತ ಬೇರೆ ದೊಡ್ಡ ದೇವರಿಲ್ಲ ಎನ್ನುತ್ತಾರೆ. ಹೀಗೆ ಅನೇಕ ಪಂಗಡಗಳಿವೆ. ಹಾಗಿದ್ದರೆ ಇವರನ್ನು ನಾವು ಬಹಿಷ್ಕಾರ ಮಾಡುವುದೇ? ಅವರವರ ಭಾವನೆಗಳಿಗೆ ತಕ್ಕಂತೆ ಮಾಡುತ್ತಾರೆ. ಈ ಬಗ್ಗೆ ಚಿಂತಿಸಿ ಪ್ರಯೋಜನವಿಲ್ಲ ಎಂದರು.
ಪ್ರಮೋದ್ ಮುತಾಲಿಕ್ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಹಿಂಸೆಯ ಪ್ರಚೋ ದನೆಗೆ ಅವಕಾಶವಿಲ್ಲ. ಒಳ್ಳೆಯ ಉದ್ದೇಶದೊಂದಿಗೆ ಉಪಾಹಾರ ಕೂಟವನ್ನು ಏರ್ಪಡಿಸಿದ್ದೆ ಎಂದು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಪಷ್ಟಪಡಿಸಿದರು. ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಮುಂದಿನ ಬಾರಿ ನಮ್ಮ ಪರ್ಯಾಯವಿಲ್ಲ. ಈ ಬಗ್ಗೆ ಈಗಲೇ ನಿರ್ಧಾರ ತೆಗೆದುಕೊಳ್ಳಲಾಗದು. ಮುಂದೆ ನೋಡೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.