ಸರಕಾರಿ ಶಾಲಾ ಅಭಿವೃದ್ಧಿಗೆ ಸಹಕಾರ : ಹರಿದಾಸ್ ಭಟ್
Team Udayavani, Jul 4, 2017, 3:45 AM IST
ಹಳೆಯಂಗಡಿ: ಸರಕಾರಿ ಶಾಲೆಗಳಲ್ಲಿಯೂ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ತೋಕೂರು ಯುವಕ ಸಂಘ ತನ್ನ ಸುವರ್ಣ ವರ್ಷದಲ್ಲಿ ಹಲವಾರು ಯೋಜನೆಗಳನ್ನು ಸರಕಾರಿ ಶಾಲೆಗಳಲ್ಲಿಯೇ ನಡೆಸುತ್ತಿದೆ. ಪೋಷಕರು ಸಹ ಸರಕಾರಿ ಖಾಸಗಿ ಶಾಲೆಗಳೆಂಬ ಭೇದ ° ತೋರದೆ ಶಿಕ್ಷಣದ ಮೌಲ್ಯಕ್ಕೆ ಆದ್ಯತೆ ನೀಡಬೇಕು ಎಂದು ತೋಕೂರು ಯುವಕ ಸಂಘದ ಅಧ್ಯಕ್ಷ ಹರಿದಾಸ್ ಭಟ್ ಹೇಳಿದರು.
ಅವರು ತೋಕೂರು ಯುವಕ ಸಂಘದಿಂದ ಸುವರ್ಣ ಮಹೋತ್ಸವದ ವರ್ಷದ ಅಂಗವಾಗಿ ಹಮ್ಮಿಕೊಂಡಿರುವ ಸಾಮಾಜಿಕ ಕಾರ್ಯಕ್ರಮದ ನೆಲೆಯಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ನ ಬೆಳ್ಳಾಯರು ಗ್ರಾಮದ ಕೆರೆಕಾಡಿನ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ವಿತರಿಸಿ ಮಾತನಾಡಿದರು.
ಪಡುಪಣಂಬೂರು ಗ್ರಾಮ ಪಂಚಾಯತ್ನ ಸದಸ್ಯ ಹೇಮನಾಥ್ ಅಮೀನ್ ಅಧ್ಯಕ್ಷತೆ ವಹಿಸಿ, ಶಿಕ್ಷಣ ಪಡೆಯುವ ಹಕ್ಕು ಮಕ್ಕಳಲ್ಲಿದ್ದು, ಪ್ರತಿಭಾನ್ವಿತರನ್ನು ಗುರುತಿಸಿ, ಗೌರವಿಸಬೇ ಕು ಸರಕಾರಿ ಶಾಲೆಯಲ್ಲಿನ ಮಕ್ಕಳು ತಮ್ಮ ಅಸಾಧಾರಣ ಪ್ರತಿಭೆ ಗಳನ್ನು ಪ್ರದರ್ಶಿಸಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಗ್ರಾಮದ ಸಂಘ ಸಂಸ್ಥೆಗಳು ಆಸರೆಯಾಗಿರಬೇಕು,
ಇದರಿಂದ ಸರಕಾರಿ ಶಾಲೆಯಲ್ಲಿ ಕಲಿತವರು ಮುಂದೆ ದೊಡ್ಡ ಹುದ್ದೆಗಳನ್ನು ಪಡೆದು ದೇಶ ಸರ್ವತೋಮುಖವಾಗಿ ಬೆಳೆಯುವಂತೆ ಆಗಬೇಕು ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ಭುವನೇಶ್ವರೀ, ತೋಕೂರು ಯುವಕ ಸಂಘದ ಸದಸ್ಯರಾದ ಗೋಪಾಲ ಮೂಲ್ಯ, ಮಧುಸೂಧನ್ ಸುವರ್ಣ ಉಪಸ್ಥಿತರಿದ್ದರು.
ಶಾಲಾ ಸಹ ಶಿಕ್ಷಕ ನವೀನ್ ಡಿ’ ಕೋಸ್ಟಾ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.