ಅನಂತ ಪದ್ಮನಾಭನ 8 ವಜ್ರ ಕಳವು
Team Udayavani, Jul 4, 2017, 3:45 AM IST
ತಿರುವನಂತಪುರಂ: ಜಗತ್ತಿನ ಅತ್ಯಂತ ಶ್ರೀ ಮಂತ, ಬಹುಕೋಟಿ ಮೌಲ್ಯದ ವಜ್ರ- ಚಿನ್ನಾಭರಣಗಳನ್ನು ಹೊಂದಿದ ಕೇರಳದ ಪ್ರಸಿದ್ಧ ಅನಂತ ಪದ್ಮನಾಭ ದೇಗುಲದಿಂದ 8 ಅತಿ ಬೆಲೆ ಬಾಳುವ ವಜ್ರಗಳು ಕಳವಾಗಿವೆ.
ದೇಗುಲದ ಗುಪ್ತ ನೆಲಮಾಳಿಗೆಗಳಿಂದ ಸುಮಾರು 189 ಕೋಟಿ ರೂ. ಮೌಲ್ಯದ ಚಿನ್ನಾ ಭರಣಗಳು ನಾಪತ್ತೆಯಾಗಿರುವ ಬಗ್ಗೆ ವಿಶೇಷ ಲೆಕ್ಕಪತ್ರ ಶೋಧನಾಧಿಕಾರಿ ವಿನೋದ್ ರಾಯ್ ಅವರು ವರದಿಯಲ್ಲಿ ಉಲ್ಲೇಖೀಸಿದ 10 ತಿಂಗಳ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ.
ಇತ್ತೀಚೆಗೆ ರಾಯ್ ಅವರ ಸಮಿತಿ ಪರಾಮರ್ಶೆ ನಡೆಸಿದ ವೇಳೆ ಈ ವಜ್ರ ಹಾಗೂ ಚಿನ್ನಾಭರಣಗಳು ನಿಗೂಢವಾಗಿ ನಾಪತ್ತೆಯಾಗಿ ರು ವುದು ಗೊತ್ತಾಗಿದೆ. ಜತೆಗೆ, ಚಿನ್ನಾಭರಣ ಕಳವು ಬಗ್ಗೆ ಅಮಿಕಸ್ ಕ್ಯೂರಿ ಗೋಪಾಲ್ ಸುಬ್ರಮಣಿಯನ್ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಕಳವಾದ ವಜ್ರಾಭರಣ ಗಳು ನಿತ್ಯ ಪೂಜೆಯ ವೇಳೆ ಪದ್ಮನಾಭನ ಮೂರ್ತಿಯಲ್ಲಿ ಇರುವಂತಹವುಗಳು ಎಂದು ಹೇಳಲಾಗಿದೆ. ಇದೀಗ ಪ್ರಕರಣ ಬಗ್ಗೆ ಕೇರಳ ಕ್ರೈಂಬ್ರ್ಯಾಂಚ್ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ನಿವೃತ್ತರಾಗಿದ್ದ ದೇಗುಲದ ಕಾರ್ಯಕಾರಿ ಅಧಿಕಾರಿ ಕೆ.ಎನ್. ಸತೀಶ್ ದೇಗುಲದ ಗರ್ಭಗುಡಿ ಸನಿಹ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ವಜ್ರಗಳು ನಾಪತ್ತೆ ಯಾಗಿವೆ ಎಂದು ಮೇನಲ್ಲಿ ನೀಡಲಾಗಿದ್ದ ತಮ್ಮ ವರದಿಯಲ್ಲಿ ಹೇಳಿದ್ದರು. ವಜ್ರದ ಅಧಿಕೃತ ಬೆಲೆ 21 ಲಕ್ಷಗಳೆಂದು ಹೇಳಲಾಗಿದ್ದು, ಅವುಗಳು ಪ್ರಾಚೀನವಾದುವುಗಳಾಗಿದ್ದರಿಂದ ಬೆಲೆಕಟ್ಟಲಾಗದ್ದು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.