ಮೂಲ ಸೌಲಭ್ಯ ಕಲ್ಪಿಸಲು ಪಾವೂರು ಗ್ರಾಮಸ್ಥರ ಆಗ್ರಹ


Team Udayavani, Jul 5, 2017, 3:45 AM IST

agraha.jpg

ಪಾವೂರು: ಹಕ್ಕು ಪತ್ರಕ್ಕೆ ಬಂದಿರುವ ಅರ್ಜಿ ಪರಿಶೀಲನೆ , ಬಿಪಿಎಲ್‌ ಕಾರ್ಡುಗಳ ಅರ್ಜಿ ವಿಲೇವಾರಿ, ಬಸ್‌ ಸಂಚಾರ ಮೊಟಕು ಸಹಿತ ಪಾವೂರು ಗ್ರಾಮ ಪಂಚಾಯತ್‌ನ 2017-18ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯಲ್ಲಿ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು  ಆಡಳಿತದ ಗಮನ ಸೆಳೆದರು. ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಜನ ಪ್ರತಿನಿಧಿಗಳು ಭರವಸೆ ನೀಡಿದರು.

ಪಾವೂರು ಗ್ರಾಮದಲ್ಲಿ 94ಸಿಸಿಯಡಿ ಹಕ್ಕುಪತ್ರಕ್ಕೆ 300 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 40ನ್ನು ಮಾತ್ರ ಪರಿಶೀಲಿಸಲಾಗಿದೆ. ಉಳಿದವುಗಳನ್ನು ತತ್‌ಕ್ಷಣ ಪರಿಶೀಲಿಸಬೇಕು, ಬಿಪಿಎಲ್‌ ಕಾರ್ಡುಗಳಿಗೆ 173 ಅರ್ಜಿಗಳು ಬಂದಿದ್ದು, ತತ್‌ಕ್ಷಣ ವಿಲೇವಾರಿ ಮಾಡಬೇಕು ಎಂದು ತಾ. ಪಂ.ಅಧ್ಯಕ್ಷ ಮಹಮ್ಮದ್‌ ಮೋನು ಅಧಿಕಾರಿಗಳಿಗೆ ಸೂಚಿಸಿದರು.

ಹಕ್ಕುಪತ್ರಕ್ಕೆ ಎಸ್ಸಿಎಸ್ಟಿ ಮನೆಗೆ 2,500 ಹಾಗೂ ಇತರರಿಗೆ 5,000 ಶುಲ್ಕ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ತಾಲೂಕು ಜನಜಾಗೃತಿ ಸಮಿತಿ ಸದಸ್ಯ ಮಹಮ್ಮದ್‌ ಮಾತನಾಡಿ, ಪಾವೂರು ಗ್ರಾಮದಲ್ಲಿ ಲಾರಿಗಳು, ಲಕ್ಷಗಟ್ಟಲೆ ಮನೆ ಹೊಂದಿದವರು, ವಿದೇಶದಲ್ಲಿರುವವರಿಗೆ ಬಿಪಿಎಲ್‌ ಕಾರ್ಡುಗಳಿದ್ದು, ಒಂದೂವರೆ ಸೆಂಟ್ಸ್‌ ಜಮೀನಿನಲ್ಲಿ ಮನೆ ಹೊಂದಿರುವವರಿಗೆ ಎಪಿಎಲ್‌ ಕಾರ್ಡುಗಳಿವೆ. ಮನೆ ಬಿಟ್ಟು ಹೋದವರೂ ಬಿಪಿಎಲ್‌ ಫಲಾನುಭವಿಗಳಾಗಿದ್ದಾರೆ. ಕಡು ಬಡವರ 125 ಬಿಪಿಎಲ್‌ ಕಾರ್ಡುಗಳು ರದ್ದಾಗಿವೆ. ಈ ಹಿನ್ನೆಲೆಯಲ್ಲಿ 2010ರಿಂದ 2017ರ ವರೆಗಿನ ಬಿಪಿಎಲ್‌ ಕಾರ್ಡುಗಳ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಗಾಡಿಗದ್ದೆಗೆ ಇದ್ದ ಏಕೈಕ ಬಸ್ಸು ಇತ್ತೀಚೆಗೆ ಯಾರೋ ಕಲ್ಲು ಹೊಡೆದು ಹಾನಿ ಮಾಡಿದ ಬಳಿಕ ಮಾಯವಾಗಿದೆ. ಸರಕಾರಿ ಬಸ್‌ ಬರುವ ಬಗ್ಗೆ ಮಾತುಗಳು ಕೇಳಿ ಬಂದಿವೆಯಾದರೂ ಇದುವರೆಗೂ ಪತ್ತೆಯಿಲ್ಲ. ಇಂತಹ ಬಸ್‌ಗ ಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬೇಕು ಎಂದು ಗ್ರಾಮಸ್ಥ ಬಶೀರ್‌  ಆಗ್ರ ಹಿಸಿದರು.

ಇದಕ್ಕೆ ಉತ್ತರಿಸಿದ ಪಂ. ಅಧ್ಯಕ್ಷ ಮಹಮ್ಮದ್‌ ಫಿರೋಜ್‌, ಬಸ್ಸಿನ ಪರವಾನಿಗೆ ಪಡೆದ ಬಳಿಕ ರಸ್ತೆ ಸರಿಯಿಲ್ಲ ಎನ್ನುವ ನೆಪ ತೋರಿಸುವುದು ಅಸಮಂಜಸ. ಸಭೆಯಲ್ಲಿ ಭಾಗವಹಿಸದ ಇಲಾಖೆಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗುವುದು. ಗ್ರಾಮದ ಅಭಿವೃದ್ಧಿ ನಿಟ್ಟಿನಲ್ಲಿ ತಾಲೂಕು ಪಂಚಾಯತ್‌, ಶಾಸಕರು ಹಾಗೂ ಪಂಚಾಯತ್‌ ಅನುದಾನ ಬಳಸಿ ಹಂತ ಹಂತವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಕೃಷಿ ಇಲಾಖೆಯ ರೇಖಾ ಮಾತನಾಡಿ, 10 ಸೆಂಟ್ಸ್‌ನಿಂದ 2 ಎಕ್ರೆ ಜಮೀನು ಇರುವ ಆಸಕ್ತರಿಗೆ ಇಲಾಖೆಯಿಂದ ಉಚಿತವಾಗಿ ಕಾಳುಮೆಣಸು ಗಿಡಗಳನ್ನು ವಿತರಿಸಲಾಗುವುದು. ಇವುಗಳಿಗೆ ಪಂಚಾಯತ್‌ನಲ್ಲಿ ಅರ್ಜಿ ಸಲ್ಲಿಸಿದಲ್ಲಿ 15 ದಿನಗಳಿಗೊಮ್ಮೆ ತಾನೇ ಪಂಚಾಯತ್‌ಗೆ ಬಂದು ಅರ್ಜಿ ಕೊಂಡೊಯ್ಯುತ್ತೇನೆ ಎಂದರು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಮಹಮ್ಮದ್‌ ಫಿರೋಜ್‌ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಗೀತಾ ಶಾನುಭೋಗ್‌ ನೋಡಲ್‌ ಅಧಿಕಾರಿಯಾಗಿದ್ದರು. ಕೊಣಾಜೆ  ಠಾಣೆಯ ಎಸ್‌.ಐ.ಸುಕುಮಾರ್‌, ಮೆಸ್ಕಾಂನ ಕಿರಿಯ ಅಭಿಯಂತರ ವಿನೋದ್‌ ಕುಮಾರ್‌, ಪಶು ವೈದ್ಯೆ ರೇಖಾ, ಗ್ರಾಮಕರಣಿಕ ಉಗ್ರಪ್ಪ, ಜಿ.ಪಂ. ಗ್ರಾಮೀಣಾಭಿವೃದ್ಧಿ ಎಂಜಿನಿಯರ್‌ ನಿತಿನ್‌, ಸಮಾಜ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖಾ ಸಿಬಂದಿ, ಮೊದಲಾದವರು ಭಾಗವಹಿಸಿದ್ದರು. ಪ್ರಭಾರ ಪಿಡಿಒ ನವೀನ್‌ ಹೆಗ್ಡೆ ಹಾಗೂ ನೂತನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅವರನ್ನು ಪಂಚಾಯತ್‌ಗೆ ಬರಮಾಡಿಕೊಳ್ಳಲಾಯಿತು. ಪಿಡಿಒ ರಜನಿ ಸ್ವಾಗತಿಸಿದರು. ಸಿಬಂದಿ ಚಿತ್ರಾ ಶೆಟ್ಟಿ ಹಿಂದಿನ ಗ್ರಾಮಸಭೆಯ ನಡಾವಳಿ ವಾಚಿಸಿದರು.

ಮಾತೃತ್ವ ಯೋಜನೆ ಮಾಹಿತಿ ಇಲ್ಲ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಭಾರತಿ ಪಟಗಾರ ಮಾತನಾಡಿ, ಈಗಾಗಲೇ ಅಂಗನವಾಡಿಗಳಲ್ಲಿ ಬುಧವಾರ ಮತ್ತು ಶನಿವಾರ ಮೊಟ್ಟೆಭಾಗ್ಯ ಆರಂಭಿಸಲಾಗಿದೆ, ಕ್ಷೀರಭಾಗ್ಯದಡಿ ವಾರಕ್ಕೆ ಐದು ದಿನ ಹಾಲು ನೀಡಲಾಗುವುದು. ಮಾತೃತ್ವ ಯೋಜನೆಯಡಿ ಆರು ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದು ಸರಕಾರ ತಿಳಿಸಿದ್ದರೂ ಇಲಾಖೆಗೆ ಮಾಹಿತಿ ಬಂದಿಲ್ಲ. ಎಲ್ಲ ಯೋಜನೆಯ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗುವುದರಿಂದ ಆಧಾರ್‌ ಜೋಡಣೆ ಅನಿವಾರ್ಯ ಎಂದರು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.