‘ಖಾತೆ ಸಮಸ್ಯೆ ಬಗೆಹರಿಸಲು ಸೂಚನೆ’


Team Udayavani, Jul 5, 2017, 3:25 AM IST

Ramanath-Rai-New-600.jpg

ಪುತ್ತೂರು: ಖಾತೆ ನೀಡಿಕೆ ಮತ್ತು ಕಟ್ಟಡ ಪರವಾನಿಗೆಗೆ ತಾಂತ್ರಿಕ ಸಲಹೆ ನೀಡುವಿಕೆ ನಿಯಮಗಳನ್ನು ಬಿಗಿಗೊಳಿಸಿರುವ ಕಾರಣ ನಗರ ಪ್ರದೇಶಗಳಲ್ಲಿ ಖಾತೆ ಸಿಗದೇ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದ್ದು, ಇದನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಮಂಗಳವಾರ ಪುತ್ತೂರಿಗೆ ಭೇಟಿ ನೀಡಿದ ಸಚಿವರನ್ನು ಕಾಂಗ್ರೆಸ್‌ ಮುಖಂಡರು ಮತ್ತು ನಾಗರಿಕ ಸಮಿತಿ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಗತ್ಯ ಉದ್ದೇಶಗಳಿಗೆ ಜನಸಾಮಾನ್ಯರು ಖಾತೆ ಕೇಳಲು ಹೋದರೆ ನಗರಸಭೆಯಲ್ಲಿ ಖಾತೆ ನೀಡುತ್ತಿಲ್ಲ. ನಗರಾಭಿವೃದ್ಧಿ ಇಲಾಖೆ ನೀಡಿದ ಆದೇಶವನ್ನು ತೋರಿಸುತ್ತಿದ್ದಾರೆ ಎಂದರು.

ಜನ ಸಾಮಾನ್ಯರಿಗೆ ಸಮಸ್ಯೆ
ಪುತ್ತೂರು ನಗರ ಯೋಜನಾ ಪ್ರಾಧಿಕಾರದವರು ಕಟ್ಟಡ ಪರವಾನಿಗೆಗೆ ತಾಂತ್ರಿಕ ಸಲಹೆ ನೀಡುತ್ತಿಲ್ಲ. ಕಾರಣ ಕೇಳಿದರೆ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರಿಂದ ಬಂದ ಆದೇಶವನ್ನು ಉಲ್ಲೇಖೀಸುತ್ತಿದ್ದಾರೆ. ಈ ಎರಡು ಆದೇಶಗಳಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಎರಡೂ ಆದೇಶಗಳಿಗೆ ಕಾರಣವಾದ ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು, ಸ್ಥಳದಲ್ಲಿದ್ದ ಸಹಾಯಕ ಕಮಿಷನರ್‌ ಡಾ| ರಘುನಂದನ ಮೂರ್ತಿ ಅವರಿಗೆ ಮನವಿ ಹಸ್ತಾಂತರಿಸಿದರು.

ಇತ್ಯರ್ಥವಾಗುವ ಭರವಸೆ 
ಜನರಿಗೆ ಸಮಸ್ಯೆಯಾಗದಂತೆ ಸಮಸ್ಯೆ ಬಗೆಹರಿಸಲು ಸೂಚಿಸಿ ಸಮಸ್ಯೆ ಇತ್ಯರ್ಥವಾಗುವ ಭರವಸೆ ನೀಡಿದ್ದಾರೆ ಎಂದು ನಿಯೋಗದಲ್ಲಿ ತೆರಳಿದ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ಮತ್ತು ನಾಗರಿಕ ಸಮಿತಿಯ ಮುಖಂಡ ಹಾಗೂ ಪುತ್ತೂರು ಅಲ್ಪಸಂಖ್ಯಾಕ ಕಾಂಗ್ರೆಸ್‌ ವಿಭಾಗದ ಅಧ್ಯಕ್ಷ ಇಸಾಕ್‌ ಸಾಲ್ಮರ ತಿಳಿಸಿದ್ದಾರೆ. ನಿಯೋಗದಲ್ಲಿ ಪುತ್ತೂರು ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ನಗರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಲ್ಮಾ, ಮುಖಂಡರಾದ ಜತ್ತಪ್ಪ ಗೌಡ, ನೂರುದ್ದೀನ್‌ ಸಾಲ್ಮರ, ಹಸೈನಾರ್‌ ಬನಾರಿ, ಲ್ಯಾನ್ಸಿ ಮಸ್ಕರೇನ್ಹಸ್‌, ಯಾಕೂಬ್‌ ಹಾಜಿ ದರ್ಬೆ ಮುಂತಾದವರಿದ್ದರು. ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ವಿವರಣೆ ನೀಡಿ ಈಗಾಗಲೇ ಪ್ರಾಧಿಕಾರದ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಎ.ಸಿ. ಅವರನ್ನು  ಖುದ್ದಾಗಿ ಕಂಡು ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಅಹವಾಲು ಸ್ವೀಕಾರ
ಸಚಿವರ ಭೇಟಿ ಸಂದರ್ಭ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ ಸಾರ್ವಜನಿಕರು ಗಡಿ ಪ್ರದೇಶ ಗಾಳಿಮುಖಕ್ಕೆ ಬಸ್‌ ಬರುತ್ತಿಲ್ಲ ಎಂದು ದೂರಿದರು. ನೀವು ಅಂದು ಬಸ್‌ ವ್ಯವಸ್ಥೆ ಮಾಡಿಸಿದ್ದೀರಿ. ಈಗ ಬರುತ್ತಿಲ್ಲ. ನಾಳಿನ ಜನಸಂಪರ್ಕ ಸಭೆಯಲ್ಲಿ ನಾವು ಇದನ್ನೇ ಕೇಳುತ್ತೇವೆ ಎಂದರು. ತತ್‌ಕ್ಷಣ ಶಾಸಕರು ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

14-sirsi

Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.