ಕಲ್ಯಾಣ್‌ ಜುವೆಲರ್ಸ್‌: ಒಂದೇ ದಿನ ಐದು ಮಳಿಗೆ ಉದ್ಘಾಟನೆ


Team Udayavani, Jul 8, 2017, 3:20 AM IST

Kalyan-7-7.jpg

ಉಡುಪಿ: ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ಕಲ್ಯಾಣ್‌ ಜುವೆಲರ್ಸ್‌ನ ಐದು ಮಳಿಗೆಗಳು ಶುಕ್ರವಾರ ಕ್ರಮವಾಗಿ ಹಾಸನ, ಉಡುಪಿ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಆರಂಭಗೊಂಡವು. ಚಲನಚಿತ್ರ ನಟ, ಕಲ್ಯಾಣ್‌ ಜುವೆಲರ್ಸ್‌ ಬ್ರ್ಯಾಂಡ್‌ ಅಂಬಾಸಿಡರ್‌ ಶಿವರಾಜ್‌ಕುಮಾರ್‌ ಎಲ್ಲ ಮಳಿಗೆಗಳನ್ನು ಉದ್ಘಾಟಿಸಿದರು ಮತ್ತು ಪ್ರಥಮ ಗ್ರಾಹಕರಿಗೆ ಸ್ಮರಣಿಕೆ ನೀಡಿ ಶುಭಕೋರಿದರು. ಸಂಸ್ಥೆ ಅಧ್ಯಕ್ಷ, ವ್ಯವಸ್ಥಾಪಕ‌ ನಿರ್ದೇಶಕ ಟಿ.ಎಸ್‌. ಕಲ್ಯಾಣರಾಮನ್‌, ಕಾರ್ಯಕಾರಿ ನಿರ್ದೇಶಕರಾದ ರಾಜೇಶ್‌ ಕಲ್ಯಾಣ ರಾಮನ್‌, ರಮೇಶ್‌ ಕಲ್ಯಾಣರಾಮನ್‌ ಮೊದಲಾದವರು ಉಪಸ್ಥಿತರಿದ್ದರು. 

ಶ್ರೀಕೃಷ್ಣನ ಕ್ಷೇತ್ರದಲ್ಲಿ ಕಲ್ಯಾಣ್‌ ಜುವೆಲರ್ಸ್‌ ಮಳಿಗೆ ಆರಂಭಗೊಳ್ಳುತ್ತಿದ್ದು ಎಲ್ಲೆಡೆ ಕಲ್ಯಾಣವಾಗಲಿ. ಉತ್ತಮ ಗುಣಮಟ್ಟದ ಆಭರಣಗಳು ಸ್ಪರ್ಧಾತ್ಮಕ ದರದಲ್ಲಿ ದೊರಕಲಿ. ನೀವೆಲ್ಲರೂ ಪ್ರೋತ್ಸಾಹ ಕೊಡಬೇಕು ಎಂದು ಉಡುಪಿ ಹಿಂದಿನ ಡಯಾನ ಸರ್ಕಲ್‌ ಎದುರು ಆರಂಭಗೊಂಡ ಕಲ್ಯಾಣ್‌ ಜುವೆಲರ್ಸ್‌ ಮಳಿಗೆಯ ಹೊರಗೆ ನಿರ್ಮಿಸಿದ ವೇದಿಕೆಯಲ್ಲಿ ಶಿವರಾಜ್‌ಕುಮಾರ್‌ ಹೇಳಿದರು.

ರಾಜ್ಯದಲ್ಲಿ 12 ಮಳಿಗೆ
2010ರಲ್ಲಿ ಬೆಂಗಳೂರು ಮಳಿಗೆ ಮೂಲಕ ರಾಜ್ಯದಲ್ಲಿ ವ್ಯವಹಾರ ಆರಂಭಿಸಿದ ಕಂಪೆನಿ ಬಳಿಕ ಮೈಸೂರು, ಹುಬ್ಬಳ್ಳಿ, ಮಂಗಳೂರು, ಬೆಳಗಾವಿಯಲ್ಲಿ ಮಳಿಗೆಗಳನ್ನು ತೆರೆಯಿತು. ಹೊಸ ಮಳಿಗೆಗಳ ಮೂಲಕ ರಾಜ್ಯದಲ್ಲಿ ಒಟ್ಟು 12 ಮಳಿಗೆಗಳನ್ನು ಹೊಂದಿದಂತಾಗಿದೆ. ‘ಆಭರಣ ಉದ್ಯಮದ ವ್ಯವಹಾರಕ್ಕೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳಿವೆ. ಹೀಗಾಗಿ ಐದು ಹೊಸ ಮಳಿಗೆಗಳನ್ನು ತೆರೆದು ಗ್ರಾಹಕ ಕೇಂದ್ರಿತ ಗ್ರಾಹಕ ಕೇಂದ್ರಿತ ಮಾರು ಕಟ್ಟೆಯನ್ನು ಪ್ರಗತಿ ಮಾಡುತ್ತಿದ್ದೇವೆ. ಈ ಮೂಲಕ ಗ್ರಾಹಕರಿಗೆ ವಿಶ್ವದರ್ಜೆಯ ಆಭರಣಗಳನ್ನು ಪೂರೈಸುತ್ತಿದ್ದು, ಗ್ರಾಹಕರಿಗೆ ತಮಗನಿಸಿದ ಕನಸಿನ ಆಭರಣಗಳನ್ನು ಖರೀದಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಮಳಿಗೆಯಲ್ಲಿ ಚಿನ್ನ, ವಜ್ರ, ಸ್ಟೋನ್‌ ಸ್ಟಡೆಡ್‌ ಆಭರಣಗಳ ವಿನ್ಯಾಸಗಳು ಸೇರಿದಂತೆ ಆಕರ್ಷಕ ಆಭರಣಗಳು ಸಿಗಲಿವೆ’ ಎಂದು ಟಿ.ಎಸ್‌. ಕಲ್ಯಾಣರಾಮನ್‌ ತಿಳಿಸಿದರು.

ಕುಂದಾಪುರದ ಮೀನಮ್ಮ| ಸೂಪರ್‌ ಸೂಪರ್‌ ಟೇಸ್ಟಮ್ಮ….
ಹಿತೈಷಿಗಳು ಹಾಡೊಂದನ್ನು ಹಾಡಲು ಒತ್ತಾಯಿಸಿದಾಗ ತಾನು ಅಭಿನಯಿಸಿದ ‘ಗಲಾಟೆ ಅಳಿಯಂದಿರು’ ಚಲನಚಿತ್ರದ ‘ಕುಂದಾಪುರದ ಮೀನಮ್ಮ| ಸೂಪರ್‌ ಸೂಪರ್‌ ಟೇಸ್ಟಮ್ಮ| ಮೋರಿಶಿಯಸ್‌ ಗೊಂಬೆ ಇವಳ ಕಣ್‌ ಮೀನಮ್ಮ|| ಹಾಡನ್ನು ಶಿವರಾಜಕುಮಾರ್‌ ಹಾಡಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಕರಾವಳಿ ಕರ್ನಾಟಕ ಮೀನುಗಾರಿಕೆಗೆ ಪ್ರಸಿದ್ಧ. ಇಲ್ಲಿನ ಮೀನು ಚೆನ್ನಾಗಿರುತ್ತದೆ. ನಾನು ಬರ್ತಾ ಇರ್ತೀನಿ ಎಂದು ಶಿವರಾಜ್‌ಕುಮಾರ್‌ ಪ್ರೇಕ್ಷಕರತ್ತ ಕೈಬೀಸಿ ಹೇಳಿದರು.

ಇದು ನನ್ನ ಆರೋಗ್ಯದ ಗುಟ್ಟಮ್ಮ…
ನಿಮ್ಮ ಆರೋಗ್ಯದ ಗುಟ್ಟು ಏನು ಎಂದಾಗ “ಏನಿಲ್ಲ. ವ್ಯಾಯಾಮವನ್ನು ನಿತ್ಯ ಮಾಡುತ್ತೇನೆ. ಪಾಸಿಟಿವ್‌ ತಿಂಕಿಂಗ್‌ ಶಕ್ತಿಯನ್ನು ಕೊಡುತ್ತದೆ’ ಎಂದು ಶಿವರಾಜ್‌ ಕುಮಾರ್‌ ಹೇಳಿದರು. 

ಹೆಲಿಕಾಪ್ಟರ್‌ನಲ್ಲಿ ಸಂಚಾರ
ರಾಜ್ಯದ ಐದು ಕಡೆ ಒಂದೇ ದಿನ ಶೋರೂಮ್‌ಗಳನ್ನು ಉದ್ಘಾಟಿಸಲು ಶಿವರಾಜಕುಮಾರ್‌ ಹೆಲಿಕಾಪ್ಟರ್‌ನಲ್ಲಿ ಸಂಚರಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.