ಹಳಕಟ್ಟಿ ತ್ಯಾಗ-ಪರಿಶ್ರಮ ಅಪಾರ
Team Udayavani, Jul 8, 2017, 2:46 PM IST
ಭಾಲ್ಕಿ: ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ ತ್ಯಾಗ ಮತ್ತು ಪರಿಶ್ರಮದಿಂದಾಗಿ ಇಂದು ನಮಗೆ ಸಮಗ್ರ ವಚನ ಸಾಹಿತ್ಯ ಪುಸ್ತಕ ರೂಪದಲ್ಲಿ ದೊರೆತಿದೆ ಎಂದು ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಡಾ| ಫ.ಗು. ಹಳಕಟ್ಟಿ ಜಯಂತಿ ಮಹೋತ್ಸವ ನಿಮಿತ್ತ ನಡೆದ “ನವಿಲೂರು ನಿಲ್ದಾಣ’ ನಾಟಕ
ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಾ| ಫ.ಗು.ಹಳಕಟ್ಟಿಯವರ ಜೀವನದ ಬಹುಭಾಗ ಬಸವಾದಿ ಶರಣರ ವಚನ
ಸಾಹಿತ್ಯದ ಸಂಗ್ರಹದಲ್ಲಿಯೇ ಕಳೆದಿದೆ. ಇದಕ್ಕಿಂತ ಪೂರ್ವದಲ್ಲಿ ವಚನ ಸಾಹಿತ್ಯ ತಾಡೋಲೆಗಳಲ್ಲಿ ಬಿಡಿ ಬಿಡಿಯಾಗಿತ್ತು. ಹಳಕಟ್ಟಿಯವರ ಪರಿಶ್ರಮದಿಂದ ಇಂದು ವಚನ ಸಾಹಿತ್ಯವನ್ನು ನಾವು ಪುಸ್ತಕ ರೂಪದಲ್ಲಿ ಓದುವಂತಾಗಿದೆ. ಅವರ ಶ್ರಮ ನಮ್ಮೆಲ್ಲರಿಗೆ ಆದರ್ಶವಾಗಿದೆ ಎಂದು ಹೇಳಿದರು.
ಶ್ರೀ ರೇವಣಸಿದ್ದ ಸ್ವಾಮಿಗಳು ಸಮ್ಮುಖ ವಹಿಸಿದ್ದರು. ಅ.ಭಾ.ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಚಂದ್ರಕಾಂತ ಬಿರಾದಾರ,
ಬಸವಕೇಂದ್ರ ಭಾಲ್ಕಿ ಅಧ್ಯಕ್ಷ ಕಿರಣ ಖಂಡ್ರೆ ಉಪಸ್ಥಿತರಿದ್ದರು. ಇದೇವೇಳೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪುರ
ಗ್ರಾಮದ ನಾಟ್ಯ ಯೋಗ ಕಲಾ ತಂಡದವರಿಂದ ಪ್ರದರ್ಶನಗೊಂಡ “ನವಿಲೂರು ನಿಲ್ದಾಣ’ ನಾಟಕ ಗಮನ ಸೆಳೆಯಿತು. ಗಾಂವಕರ್ ನಿರೂಪಿಸಿದರು. ವೀರಣ್ಣ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Anubhava Mantapa ಡಿಸೆಂಬರ್ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ
CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.