ಮಗನ ಹೇಳಿಕೆ ತಿರುಚಲಾಗಿದೆ: ಎಚ್.ಡಿ.ರೇವಣ್ಣ
Team Udayavani, Jul 10, 2017, 3:45 AM IST
ಹಾಸನ: ರಾಜ್ಯದಲ್ಲಿ ಜೆಡಿಎಸ್ ಹತ್ತಿಕ್ಕುವ ಷಡ್ಯಂತ್ರ್ಯ ನಡೆದಿದ್ದು, ಪ್ರಜ್ವಲ್ ಹೇಳಿಕೆಯನ್ನು ತಿರುಚಿ ಪಕ್ಷದ
ಮುಖಂಡರಿಗೆ ಮುಜುಗರ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ರೇವಣ್ಣ, “ಹುಣಸೂರಿಗೆ ಹೋಗಬೇಡ ಎಂದು ನಾನು ಪ್ರಜ್ವಲ್ಗೆ ಹೇಳಿದ್ದೆ. ಆದರೆ
ಎಸ್ಸಿ, ಎಸ್ಟಿ, ಸಮಾವೇಶವಿದೆ ಎಂದು ಕೆಲವರು ಪ್ರಜ್ವಲ್ರನ್ನು ಕರೆದುಕೊಂಡು ಹೋಗಿದ್ದರು.
ಆ ಸಭೆಯಲ್ಲಿ ಪ್ರಜ್ವಲ್ ಮಾತನಾಡಿದ ದೃಶ್ಯಾವಳಿಗಳನ್ನು ಕತ್ತರಿಸಿ ಪಕ್ಷಕ್ಕೆ ಮುಜುಗರವಾಗುವ ಭಾಗಗಳನ್ನು ಮಾತ್ರ
ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ನನ್ನ ಮಗ ಏನು ಹೇಳಿದ್ದಾನೆಂಬುದು ನನಗೆ ತಿಳಿದಿದೆ.
ಅಂದು ಮಧ್ಯಾಹ್ನ ನಡೆದ ಕಾರ್ಯಕ್ರಮದ ವರದಿ ರಾತ್ರಿ ವೇಳೆಗೆ ಪ್ರಸಾರವಾಗುತ್ತದೆ ಎಂದರೆ ಅದರ ಹಿಂದಿನ ಕುತಂತ್ರವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡುತ್ತೇನೆ’ ಎಂದು ಪ್ರಜ್ವಲ್ ನಡವಳಿಕೆಯನ್ನು ರೇವಣ್ಣ ಸಮರ್ಥಿಸಿಕೊಂಡರು.
ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಪ್ರಜ್ವಲ್ ಸ್ಪರ್ಧಿಸುವುದಿಲ್ಲ. ಈ ವಿಚಾರವನ್ನು ತಿಂಗಳ ಹಿಂದೆಯೇ ಸ್ಪಷ್ಟಪಡಿಸಲಾಗಿದೆ. ನಮ್ಮ ಕುಟುಂಬದಲ್ಲಿ ನಾನು ಮತ್ತು ಕುಮಾರಸ್ವಾಮಿ ಮಾತ್ರ ಚುನಾವಣೆಗೆ ಸ್ಪರ್ಧಿಸುವುದೆಂದು ತೀರ್ಮಾನವಾಗಿದೆ. ಈ ವಿಚಾರದಲ್ಲಿ ಬದಲಾವಣೆಯಿಲ್ಲ.
ಚನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾಕುಮಾರಸ್ವಾಮಿ ಸ್ಪರ್ಧಿಸಬೇಕೆಂಬ ಕಾರ್ಯಕರ್ತರ ಒತ್ತಡವಿದೆ. ಆದರೂ
ಅನಿತಾಕುಮಾರಸ್ವಾಮಿ ಸ್ಪರ್ಧಿಸುತ್ತೇನೆಂದು ಎಲ್ಲಿಯೂ ಹೇಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.