![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
ಗಾಂಧಿನಗರಕ್ಕೆ ಕಾಲಿಟ್ಟ ಅಶ್ವಿನಿರಾಮ್ಪ್ರಸಾದ್ ಪುತ್ರ
Team Udayavani, Jul 10, 2017, 10:50 AM IST
![Gharga.jpg](https://www.udayavani.com/wp-content/uploads/2017/07/10/Gharga.jpg)
“ಜ್ಯೋಗಿ’ ಖ್ಯಾತಿಯ ನಿರ್ಮಾಪಕ ಅಶ್ವಿನಿ ರಾಮ್ಪ್ರಸಾದ್ ಇದೀಗ ತಮ್ಮ ಪುತ್ರ ಅರುಣ್ ರಾಮ್ಪ್ರಸಾದ್ ಅವರನ್ನು ಸಿನಿಮಾರಂಗಕ್ಕೆ ಪರಿಚಯಿಸಲು ವೇದಿಕೆಯೊಂದನ್ನು ಸಜ್ಜುಗೊಳಿಸುತ್ತಿದ್ದಾರೆ. “ಘಾರ್ಗಾ’ ಎಂಬ ವಿಭಿನ್ನ ಶೀರ್ಷಿಕೆವುಳ್ಳ ಚಿತ್ರದ ಮೂಲಕ ಅರುಣ್ರಾಮ್ಪ್ರಸಾದ್ ಗಾಂಧಿನಗರಕ್ಕೆ ಹೊಸ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಗೆ “ದಿ ಲ್ಯಾಂಡ್ ಆಫ್ ಶಾಡೋಸ್’ ಎಂಬ ಅಡಿಬರಹವಿದೆ.
ಸದ್ಯಕ್ಕೆ ಅಶ್ವಿನಿರಾಮ್ಪ್ರಸಾದ್ ಅವರು ಈಗ “ಘಾರ್ಗಾ’ ಎಂಬ ಫಸ್ಟ್ಲುಕ್ ಪೋಸ್ಟರ್ ರಿಲೀಸ್ ಮಾಡಿದ್ದಾರಷ್ಟೆ. ಚಿತ್ರದ ನಾಯಕ ಅರುಣ್ರಾಮ್ಪ್ರಸಾದ್ ಬಿಟ್ಟರೆ, ಬೇರೆ ಯಾರೆಲ್ಲಾ ಈ ಚಿತ್ರದಲ್ಲಿದ್ದಾರೆ ಎಂಬುದನ್ನು ಗೌಪ್ಯವಾಗಿಟ್ಟಿದ್ದಾರೆ. ಹೊಸ ನಿರ್ದೇಶಕರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಷ್ಟೇ ತಂತ್ರಜ್ಞರು, ನಾಯಕಿ ಮತ್ತು ಉಳಿದ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಪುತ್ರನನ್ನು ಸಿನಿಮಾ ರಂಗಕ್ಕೆ ಪರಿಚಯಿಸಬೇಕು ಎಂಬ ಸಲುವಾಗಿಯೇ ರಾಮ್ಪ್ರಸಾದ್, ಅರುಣ್ಪ್ರಸಾದ್ಗೆ ಸಿನಿಮಾಗೆ ಬೇಕಾದ ಎಲ್ಲಾ ತಯಾರಿಯನ್ನೂ ಮಾಡಿಸಿದ್ದಾರೆ. ಅರುಣ್ಪ್ರಸಾದ್, ನೀನಾಸಂನಲ್ಲಿ ಒಂದು ವರ್ಷ ನಟನೆ ತರಬೇತಿ ಪಡೆದಿದ್ದಾರೆ. ಆರು ತಿಂಗಳ ಕಾಲ ಕಲರಿ ಕಲೆ ಕಲಿತಿದ್ದಾರೆ.
ಬಾಡಿಬಿಲ್ಡ್ ಮಾಡಿ, ಸಿನಿಮಾ ಹೀರೋಗೆ ಇರಬೇಕಾದಂತಹ ಎಲ್ಲಾ ಗುಣಲಕ್ಷಣಗಳನ್ನು ಹೊಂದಿ ಗಾಂಧಿನಗರದಲ್ಲಿ ನಿಲ್ಲೋಕೆ ರೆಡಿಯಾಗಿದ್ದಾರೆ. ಅಂದಹಾಗೆ, ಇದೊಂದು ಹೊಸ ಜಾನರ್ನ ಕಥೆಯಾಗಿದ್ದು, ಈ ಮೂಲಕ ಹೊಸದೇನನ್ನೋ ಹೇಳಲು ಹೊರಟಿದ್ದಾರಂತೆ ಅಶ್ವಿನಿರಾಮ್ಪ್ರಸಾದ್. ಅವರಿಲ್ಲಿ ಸ್ಟ್ರಾಂಗ್ ಟೆಕ್ನೀಷಿಯನ್ಸ್ ಜತೆ ಕೆಲಸ ಮಾಡುತ್ತಿದ್ದು, ಸೆಪ್ಟೆಂಬರ್ನಲ್ಲಿ ಚಿತ್ರಕ್ಕೆ ಚಾಲನೆ ಕೊಡುವ ಯೋಚನೆ ಅವರದು.
ಟಾಪ್ ನ್ಯೂಸ್
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
![Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ](https://www.udayavani.com/wp-content/uploads/2024/07/17-150x90.jpg)
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.