ದಂಡತೀರ್ಥ : ಸಮೂಹ ವಿದ್ಯಾಸಂಸ್ಥೆಗಳ ವಾರ್ಷಿಕ ಮಹಾಸಭೆ
Team Udayavani, Jul 11, 2017, 3:45 AM IST
ಕಾಪು: ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಶಿಕ್ಷಕ – ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಎರಡು ಹಂತಗಳಲ್ಲಿ ಜು. 8ರಂದು ಶಾಲೆಯ ಸಭಾ ಭವನದಲ್ಲಿ ನಡೆಯಿತು.
ಶಾಲಾ ಸಂಚಾಲಕ ಡಾ| ಕೆ. ಪ್ರಭಾಕರ ಶೆಟ್ಟಿ ಮಾತನಾಡಿ, ಪಿಯುಸಿ ವಿಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀ ವರ್ಷದಂತೆ ಈ ವರ್ಷವೂ ಸುಮಾರು 7 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ. ಇದೇ ರೀತಿಯಲ್ಲಿ ಸಂಸ್ಥೆ ಮುನ್ನಡೆಯ ಬೇಕಾದರೆ ಪೋಷಕರು ಇನ್ನಷ್ಟು ಉತ್ತಮ ರೀತಿಯ ಸಹಕಾರ ನೀಡುವಂತಾಗಬೇಕು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಜಯ ಪಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಹೆತ್ತವರು ಪರಸ್ಪರ ಹೊಂದಾಣಿಕೆಯಿಂದ ಮಕ್ಕಳ ಮತ್ತು ಶಾಲೆಯ ಪ್ರಗತಿಗೆ ಕಾರಣರಾಗಬೇಕು. ಅತ್ಯುತ್ತಮ ಆಡಳಿತ ಮಂಡಳಿಯಿಂದಾಗಿ ವಿದ್ಯಾ ಸಂಸ್ಥೆಯು ಜಿಲ್ಲೆಯಲ್ಲಿ ಗೌರವವನ್ನು ಪಡೆದುಕೊಂಡಿದೆ ಎಂದರು. ಡಾ| ಮನೋಜ್ ಶೆಟ್ಟಿ ಹೆತ್ತವರಿಗೆ ಮತ್ತು ಶಿಕ್ಷಕರಿಗೆ ಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್, ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಚಿತ್ರಲೇಖ ಟಿ. ಶೆಟ್ಟಿ ವಿವಿಧ ಮಾಹಿತಿ ನೀಡಿದರು. ಆಡಳಿತ ಮಂಡಳಿ ಸದಸ್ಯ ಡಾ| ಕೆ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.
ಉಪನ್ಯಾಸಕ ಸೂರತ್ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ನೀಲಾನಂದ ನಾಯ್ಕ ವರದಿ ಹಾಗೂ ಲೆಕ್ಕ ಪತ್ರದ ವಿವರಣೆ ನೀಡಿದರು. ಗ್ಯಾಬ್ರಿಯಲ್ ಎಫ್. ಮಸ್ಕರೇನಸ್ ಮತ್ತು ದೆ„ಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ವಂದಿಸಿದರು. ಶಿವಣ್ಣ ಬಾಯಾರ್ ಮತ್ತು ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.