ಅತ್ಯಾಚಾರ: ಮೂವರಿಗೆ ನ್ಯಾಯಾಂಗ ಬಂಧನ


Team Udayavani, Jul 12, 2017, 4:15 AM IST

Judicial-Custody-600.jpg

ಉಡುಪಿ: ರಾಣೆಬೆನ್ನೂರಿನಲ್ಲಿ ಬೆಳಗಾವಿ ಮೂಲದ ಅಪ್ರಾಪ್ತ ವಯಸ್ಕ ಯುವತಿಯನ್ನು ಅತ್ಯಾಚಾರಗೈದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ ಮೂವರು ಚಾಲಕ/ನಿರ್ವಾಹಕರನ್ನು ಉಡುಪಿ ಪೊಲೀಸರು ರಾಣೆಬೆನ್ನೂರಿನ ಹಿರೇಕೆರೂರಿನಲ್ಲಿ ಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಮೂವರಿಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಚಾಲಕ/ನಿರ್ವಾಹಕರಾದ ಹಾವೇರಿ ರಾಣೆಬೆನ್ನೂರಿನ ಬನಶಂಕರಿ ನಗರದ ರಾಘವೇಂದ್ರ ಪ್ರಭಾಕರ ಬಡಿಗೇರ ಯಾನೆ ರಾಘು ಯಾನೆ ಆನೆ ರಾಘು (35), ಹಿರೇಕೆರೂರಿನ ಯುವರಾಜ್‌ ಕಟ್ಟೆಕಾರ್‌ (35) ಮತ್ತು ಹಿರೇಕೆರೂರು ಒಡೆಯರ ಹಳ್ಳಿಯ ವೀರಯ್ಯ ಆರ್‌. ಹಿರೇಮಠ (41) ಆರೋಪಿಗಳು.

ಘಟನೆ ಹಿನ್ನೆಲೆ: ಮೂಲತಃ ಬೆಳಗಾವಿಯವಳಾದ ಅಪ್ರಾಪ್ತ ವಯಸ್ಕ ಯುವತಿಯು ಪೋಷಕರೊಂದಿಗೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ವಾಸ್ತವ್ಯವಿದ್ದರು. ಅವರು ಜು. 5ರಂದು ಕಾಣೆಯಾಗಿದ್ದರು. ಈ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜು. 6ರಂದು ಕಾರ್ಯಾಚರಣೆಗೆ ಇಳಿದ ಪೊಲೀಸರ ವಿಶೇಷ ತಂಡವು ಜು. 8ರಂದು ಬೆಂಗಳೂರಿನ ಸಂಜಯನಗರ ಪೊಲೀಸ್‌ ಠಾಣೆಯಿಂದ ಬಾಲಕಿಯನ್ನು ಕರೆದುಕೊಂಡು ಬಂದು ಮಹಿಳಾ ಪಿಎಸ್‌ಐ ಮುಂದೆ ಹಾಜರುಪಡಿಸಿದ್ದರು. 

ನೊಂದ ಬಾಲಕಿಯು ತಾನು ರಾಜು ಬಳಿಗಾರ್‌ನನ್ನು ನೋಡಲು ಜು. 5ರಂದು ಹೋಗಿದ್ದು, ಆತನ ಮನೆಯವರು ಆಕ್ಷೇಪಿಸಿ ಹಲಗೇರಿ ಬಸ್‌ ನಿಲ್ದಾಣದಿಂದ ಊರಿಗೆ ಹೋಗಲು ರಾಣೆಬೆನ್ನೂರು ಬಸ್‌ ನಿಲ್ದಾಣಕ್ಕೆ ಬಿಟ್ಟು ಬಂದಿದ್ದರು. ರಾಣೆಬೆನ್ನೂರು ಬಸ್‌ ನಿಲ್ದಾಣದಲ್ಲಿ ಕೆಸ್ಸಾರ್ಟಿಸಿ ಬಸ್ಸಿನಲ್ಲಿ ಮಧ್ಯರಾತ್ರಿ ಮೂವರು ವ್ಯಕ್ತಿಗಳು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಹೇಳಿಕೆ ನೀಡಿದ್ದರು. ಅದರಂತೆ ಮತ್ತೆ ಕಾರ್ಯಪ್ರವೃತ್ತರಾದ ಪೊಲೀಸರ ತಂಡವು ಎಲ್ಲ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಹಿರಿಯಡಕ ಸಬ್‌ಜೈಲಿನಲ್ಲಿ ಇರಿಸಲಾಗಿದೆ.

ಎಸ್‌ಪಿ ಕೆ.ಟಿ. ಬಾಲಕೃಷ್ಣ, ಡಿವೈಎಸ್‌ಪಿ ಎಸ್‌.ಜೆ. ಕುಮಾರಸ್ವಾಮಿ ಮಾರ್ಗದರ್ಶನ, ಉಡುಪಿ ಸಿಪಿಐ ನವೀನ್‌ಚಂದ್ರ ಜೋಗಿ, ಮಹಿಳಾ ಠಾಣೆ ಪ್ರಭಾರ ಪಿಎಸ್‌ಐ ಕಲ್ಪನಾ ಬಿ., ಎಎಸ್‌ಐ ವಿಜಯ, ಸಿಬಂದಿ ಉಮೇಶ್‌, ಜೀವನ್‌, ಅರುಣ್‌, ಬಾಲಕೃಷ್ಣ ಇಮ್ರಾನ್‌, ಜ್ಯೋತಿ ನಾಯಕ್‌, ಸುಮನಾ, ಮಾಲತಿ, ಶ್ರುತಿ, ಮಹಾಬಲೇಶ್ವರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಅಮಾನತು: ಮೂವರು ಆರೋಪಿಗಳನ್ನು ಕೆಎಸ್‌ಆರ್‌ಟಿಸಿ ಅಮಾನತು ಮಾಡಿದೆ. ಅವರ ವಿರುದ್ಧ ಕ್ರಮಕ್ಕೆ ಸಚಿವೆ ಉಮಾಶ್ರೀ ಆಗ್ರಹಿಸಿದ್ದರು.

ಟಾಪ್ ನ್ಯೂಸ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.