ಬೀದರನಿಂದ ಕೆಎಸ್‌ಆರ್‌ಪಿ ಸೈಕಲ್‌ ಜಾಥಾಕ್ಕೆ ಚಾಲನೆ


Team Udayavani, Jul 13, 2017, 9:56 AM IST

13-GUB-2.jpg

ಬೀದರ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಆಯೋಜಿಸಿರುವ ಕೆಎಸ್‌ಆರ್‌ಪಿ ಕರ್ನಾಟಕ ದರ್ಶನ ರಾಜ್ಯ ಮಟ್ಟದ ಸೈಕಲ್‌ ಜಾಥಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬುಧವಾರ ಪಾರಿವಾಳ ಹಾಗೂ ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಜಿಲ್ಲಾ ಪೊಲೀಸ್‌ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪೊಲೀಸ್‌ ಅ ಧಿಕಾರಿಗಳು ಹಾಗೂ ಸಿಬ್ಬಂದಿ ನಿತ್ಯ ಒಂದಿಲ್ಲೊಂದು ಒತ್ತಡದಲ್ಲಿಯೇ ಕೆಲಸ ಮಾಡುತ್ತಾರೆ. ಅವರು ಒತ್ತಡ ಮುಕ್ತ ಬದುಕು ಸಾಗಿಸಲಿ ಎನ್ನುವ ಉದ್ದೇಶದಿಂದ ಜಾಥಾ ಆಯೋಜಿಸಿರುವುದು ಶ್ಲಾಘನೀಯ. ಜಾಥಾ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಸಂಬಂಧ ಜಾಗೃತಿ ಮೂಡಿಸುತ್ತಿರುವುದು ಅಭಿನಂದನಾರ್ಹ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.. ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಮಾತನಾಡಿ, ಆರೋಗ್ಯದ ಹಿತದೃಷ್ಟಿಯಿಂದ ಸೈಕಲ್‌ ಬಳಕೆ ಅಗತ್ಯತೆ ಅತಿ ಅವಶ್ಯವಾಗಿದೆ ಎಂಬುದನ್ನು ಒತ್ತಿ ಹೇಳುವ ಉದ್ದೇಶದಿಂದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಯಶ ಕಾಣಲಿ. ಜನತೆಗೆ ಸೂಕ್ತ ರೀತಿಯಲ್ಲಿ ಸಂದೇಶ ತಲುಪುವಂತಾಗಲಿ ಎಂದು ಶುಭ ಹಾರೈಸಿದರು.

ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಭಾಸ್ಕರ್‌ ರಾವ್‌ ಮಾತನಾಡಿ, ಕೆಎಸ್‌ಆರ್‌ಪಿ ರಾಜ್ಯ ಪೊಲೀಸ್‌ ಇಲಾಖೆಯ ಬಹುಮುಖ್ಯ ಅಂಗವಾಗಿದೆ. ಬೆಂಗಳೂರಿನಲ್ಲಿ 4, ಬೆಳಗಾವಿ, ಮೈಸೂರು, ಕಲಬುರಗಿ, ಮಂಗಳೂರು, ಶಿವಮೋಗ್ಗ, ಶಿಗ್ಗಾವಿ ಹಾಗೂ ಹಾಸನದಲ್ಲಿ ತಲಾ ಒಂದು ಕೆಎಸ್‌ಆರ್‌ಪಿ ಪಡೆಗಳಿವೆ. ಮುನಿರಾಬಾದ್‌ ಹಾಗೂ ವಿಜಯಪುರದಲ್ಲಿ ತಲಾ ಒಂದು ಇಂಡಿಯಾ ರಿಸರ್ವ್‌ ಬೆಟಾಲಿಯನ್‌ ಹಾಗೂ ಮುನಿರಾಬಾದ್‌ ಮತ್ತು ಬೆಳಗಾವಿಯಲ್ಲಿ ತಲಾ ಒಂದು ತರಬೇತಿ ಶಾಲೆಗಳಿವೆ. ಈ ಎಲ್ಲ ಕೇಂದ್ರಗಳಿಂದ ತಲಾ ಮೂವರು ಸಿಬ್ಬಂದಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜುಲೈ 25ರಂದು ಬೆಂಗಳೂರಿನ ವಿಧಾನಸೌಧದ ಮುಂದೆ ಸೈಕಲ್‌
ಜಾಥಾ ಸಮಾವೇಶಗೊಳ್ಳಲಿದೆ. ಜಾಥಾ ವೇಳೆ ಪ್ಲಾಸ್ಟಿಕ್‌ ಬಳಕೆ ದುಷ್ಪರಿಣಾಮ, ಶೌಚಾಲಯದ ಮಹತ್ವ, ಪರಿಸರ ಸಂರಕ್ಷಿಸಲು ಸಸಿ
ನೆಡುವಂತೆ ಜನತೆಗೆ ತಿಳಿ ಹೇಳಲಾಗುವುದು ಎಂದು ಹೇಳಿದರು.

ಶಾಸಕ ರಹೀಮ್‌ ಖಾನ್‌, ಜಿಪಂ ಸಿಇಒ ಡಾ| ಆರ್‌. ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಪ್ರಕಾಶ ನಿಕ್ಕಂ, ಹೆಚ್ಚುವರಿ
ಪೊಲೀಸ್‌ ವರಿಷ್ಠಾ ಧಿಕಾರಿ ಶ್ರೀಹರಿ ಬಾಬು ಹಾಗೂ ಪೊಲೀಸ್‌ ಅಧಿ ಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಪಿಎಸ್‌ಐ ವೀರಣ್ಣ ಮಗ್ಗಿ
ನಿರೂಪಿಸಿದರು. 

ಜಾಥಾ ಸಂಚರಿಸುವ ಮಾರ್ಗ
ಸೈಕಲ್‌ ಜಾಥಾ ಮೊದಲ ದಿನ ಬೀದರನಿಂದ ಕಲಬುರಗಿಗೆ 115 ಕಿಮೀ ಸಂಚರಿಸಿತು. ಜುಲೈ 13ರಂದು ಕಲಬುರಗಿಯಿಂದ ವಿಜಯಪುರ 115 ಕಿಮೀ, 14ರಂದು ವಿಜಯಪುರದಿಂದ ಜಮಖಂಡಿ ಮಾರ್ಗವಾಗಿ ಬೆಳಗಾವಿಗೆ 210 ಕಿಮೀ ಸಂಚರಿಸಲಿದೆ. 15ರಂದು ವಿಶ್ರಾಂತಿ ದಿನ. 16ರಂದು ಬೆಳಗಾವಿಯಿಂದ ಬಾಗಲಕೋಟೆ 141 ಕಿಮೀ, 17ರಂದು ಬಾಗಲಕೋಟೆಯಿಂದ ಮುನಿರಾಬಾದ್‌ 146 ಕಿಮೀ, 18ರಂದು ಮುನಿರಾಬಾದ್‌ನಿಂದ ಗದಗ ಮಾರ್ಗವಾಗಿ ಶಿಗ್ಗಾವಿ 158 ಕಿಮೀ, ಜು. 19ರಂದು
ಶಿಗ್ಗಾವಿಯಿಂದ ಶಿವಮೋಗ್ಗ 165 ಕಿಮೀ ಸಂಚರಿಸಲಿದೆ. 20ರಂದು ವಿಶ್ರಾಂತಿ ದಿನ. 21ರಂದು ಶಿವಮೋಗ್ಗದಿಂದ ಮಂಗಳೂರು 220 ಕಿಮೀ, 22ರಂದು ಮಂಗಳೂರದಿಂದ ಹಾಸನ 168 ಕಿಮೀ, 23ರಂದು ಹಾಸನದಿಂದ ಮೈಸೂರು 125 ಕಿಮೀ ಸಂಚರಿಸಲಿದೆ. 24ರಂದು ವಿಶ್ರಾಂತಿ ದಿನ. 25ರಂದು ಸೈಕಲ್‌ ಜಾಥಾ ಮೈಸೂರಿನಿಂದ ಹೊರಟು ಬೆಂಗಳೂರಿಗೆ (140 ಕಿಮೀ) ಪಯಣ ಬೆಳೆಸಲಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.