ಮಧ್ಯಸ್ಥಿಕೆ ಸಂಸ್ಕೃತಿ ಅವಿಭಾಜ್ಯ ಅಂಗ: ನ್ಯಾ| ನರೇಂದ್ರ


Team Udayavani, Jul 15, 2017, 12:22 PM IST

15-GUB-1.jpg

ಕಲಬುರಗಿ: ಮಧ್ಯಸ್ಥಿಕೆ ವ್ಯವಸ್ಥೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ. ಹಿಂದಿನ ಕಾಲದಲ್ಲಿ ವಿವಿಧ ವ್ಯಾಜ್ಯಗಳ ಪರಿಹಾರಕ್ಕಾಗಿ ಈ ಮಧ್ಯಸ್ಥಿಕೆ (ಪಂಚಾಯಿತಿ ಕಟ್ಟೆ) ವ್ಯವಸ್ಥೆಯನ್ನೇ ಬಳಸಲಾಗುತ್ತಿತ್ತು. ಈ ವ್ಯವಸ್ಥೆ ಮೂಲಕ ನ್ಯಾಯವಾದಿಗಳು ಉತ್ತಮ ಕೌಶಲ್ಯ, ಕಲೆ ಮೂಲಕ ಕಕ್ಷಿದಾರರ ವ್ಯಾಜ್ಯಗಳನ್ನು ಪರಿಹರಿಸಲು ಶ್ರಮಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಜಿ. ನರೇಂದ್ರ ತಿಳಿಸಿದರು.

ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎ.ಡಿ.ಆರ್‌. ಸಭಾಭವನದಲ್ಲಿ ಬೆಂಗಳೂರು ಮತ್ತು ಕಲಬುರಗಿ ಮಧ್ಯಸ್ಥಿಕೆ ಕೇಂದ್ರಗಳ ಸಹಯೋಗದಲ್ಲಿ ಆಯೋಜಿಸಿದ ಮಧ್ಯಸ್ಥಿಕೆದಾರರ ಪುನಶ್ಚೇತನ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ಎ. ಪಾಟೀಲ ಮಾತನಾಡಿ, ಮಧ್ಯಸ್ಥಿಕೆ, ಲೋಕ ಅದಾಲತ್‌ ಮತ್ತು ಕೌನ್ಸಿಲೇಶನ್‌ ಮೂಲಕ ನ್ಯಾಯಾಲಯಗಳಲ್ಲಿನ ವಿವಿಧ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಮೂಲಕ ಕ್ರಮ ಅನುಸರಿಸುತ್ತಿದೆ ಎಂದು ಹೇಳಿದರು.

ಕಕ್ಷಿದಾರರೇ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳುವಲ್ಲಿ ಮಧ್ಯಸ್ಥಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಮಧ್ಯಸ್ಥಿಕೆದಾರರು ಹೊಸ ಕಾನೂನು, ಆಲೋಚನೆ ಹಾಗೂ ಸಾಮಾನ್ಯ ತಿಳಿವಳಿಕೆ ಮುಂತಾದವುಗಳ ಮೂಲಕ ಕಕ್ಷಿದಾರರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.
ಮಧ್ಯಸ್ಥಿಕೆದಾರರು ಓರ್ವ ವೈದ್ಯ ಚಿಕಿತ್ಸಕರಂತೆ ಕಾರ್ಯನಿರ್ವಹಿಸಬೇಕು ಅಲ್ಲದೇ ಕಕ್ಷಿದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಶಿಸ್ತು, ತಾಳ್ಮೆಯೊಂದಿಗೆ ಸಂಪೂರ್ಣ ಕಾನೂನು ಜ್ಞಾನದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಬಿ.ವಿ. ಪಾಟೀಲ ಮಾತನಾಡಿ, ಪರ್ಯಾಯ ವ್ಯಾಜ್ಯಗಳ ಇತ್ಯರ್ಥ ವ್ಯವಸ್ಥೆಯಲ್ಲಿ ಮಧ್ಯಸ್ಥಿಕೆ ಒಂದು ಉತ್ಕೃಷ್ಟ ವ್ಯವಸ್ಥೆಯಾಗಿದೆ. ಮಧ್ಯಸ್ಥಿಕೆದಾರರು ಕಾಲ ಕಾಲಕ್ಕೆ ಬದಲಾಗುವ ಕಾನೂನುಗಳ ತಿಳಿವಳಿಕೆ ಹಾಗೂ ಸಮರ್ಥ ಕೌಶಲ್ಯ ಪಡೆದು ಮಧ್ಯಸ್ಥಿಕೆಯಲ್ಲಿ ನಡೆಸುವ ಸಮಾಲೋಚನೆಯಲ್ಲಿ ಸಕ್ರಿಯ ಸಹಕಾರ 
ಕಲ್ಪಿಸುವುದರೊಂದಿಗೆ ಕಕ್ಷಿದಾರರೇ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳುವ ವಾತಾವರಣ ಸೃಷ್ಟಿಸಬೇಕು ಎಂದರು. ಮಧ್ಯಸ್ಥಿಕೆದಾರರು ಮಧ್ಯಸ್ಥಿಕೆಯನ್ನು ಸಮರ್ಪಣಾ ಮನೋಭಾವದಿಂದ, ಪರಿಪೂರ್ಣತೆ, ಸಕಾರಾತ್ಮಕ ಭಾವನೆ ಮತ್ತು ರಚನಾತ್ಮಕ ಚಿಂತನೆಯಿಂದ ನಿರಂತರ ಪರಿಶ್ರಮಪಟ್ಟರೆ ಮಧ್ಯಸ್ಥಿಕೆಯಲ್ಲಿ ಶೇ. 100ರಷ್ಟು ಯಶಸ್ಸು ಸಾ ಧಿಸಬಹುದು ಎಂದರು.

ಗುಲಬರ್ಗಾ ವಕೀಲರ ಸಂಘದ ಅಧ್ಯಕ್ಷ ಆರ್‌. ಕೆ. ಹಿರೇಮಠ, ಹೈಕೋರ್ಟ್‌ ಪೀಠದ ಹೆಚ್ಚುವರಿ ರಜಿಸ್ಟ್ರಾರ್‌ ಜನರಲ್‌ ಕೆ.ಬಿ. ಅಸುದೆ, ಮಧ್ಯಸ್ಥಿಕೆ ಕೇಂದ್ರದ ತರಬೇತುದಾರರಾದ ಮಂಜುಳಾ ತೇಜಸ್ವಿ , ವೃಂದಾ ನಂದಕುಮಾರ, ಕರ್ನಾಟಕ ವಕೀಲರ ಪರಿಷತ್‌ನ ಸದಸ್ಯ ಕಾಶೀನಾಥ ಮೋತಕಪಲ್ಲಿ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ ಸ್ವಾಗತಿಸಿದರು. ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ನವೀನ ವಂದಿಸಿದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.