ಮರಳಿನಿಂದ ಜಾರುವ ರಸ್ತೆಗೆ ಮೋಕ್ಷ ಬೇಕಿದೆ
Team Udayavani, Jul 17, 2017, 3:45 AM IST
ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯ ಮುಂದಿನ ರಸ್ತೆ ಮರಳು ತುಂಬಿ ಅಪಾಯವನ್ನು ಆಹ್ವಾನಿಸುತ್ತಿದೆ.
ಕಾನೂನು ಬಾಹಿರವಾಗಿ ಸಮುದ್ರತೀರ ಮತ್ತು ಹೊಳೆಗಳಿಂದ ಅಕ್ರಮವಾಗಿ ಲಾರಿ, ಟೆಂಪೊ, ಇನ್ನಿತರ ವಾಹನಗಳಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ವಾಹನಗಳನ್ನು ವಶಪಡಿಸಿ ಈ ರಸ್ತೆ ಪಕ್ಕದಲ್ಲಿರಿಸಿದಾಗ ಮಾರುತಿ, ಆಮ್ನಿ, ರಿಕ್ಷಾ ಮುಂತಾದ ಸಣ್ಣ ವಾಹನಗಳಿಂದ ಮರಳು ರಸ್ತೆಗೆ ಜಾರಿಬಿದ್ದು ರಸ್ತೆಯಲ್ಲಿ ಶೇಖರಣೆಯಾಗುವುದು. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗುವುದು. ಬೈಕ್ಗಳು ಈ ರಸ್ತೆಯಲ್ಲಿ ಹಲವು ಬಾರಿ ಸ್ಕಿಡ್ ಆಗಿ ಅಪಾಯ ಸಂಭವಿಸಿದೆ.
ಕುಂಬಳೆ ಗ್ರಾಮ ಪಂಚಾಯತ್ ಮತ್ತು ಪೊಲೀಸ್ ಠಾಣೆಯ ಮುಂದೆಯೇ ಈ ಅವಾಂತರ ನಡೆಯುತ್ತಿದ್ದರೂ ಸ್ಥಳೀಯಾಡಳಿತವಾಗಲಿ ಪೊಲೀಸರಾಗಲಿ ಈ ಸಮಸ್ಯೆಗೆ ಪರಿಹಾರ ಕಂಡಿಲ್ಲ.ವಿದ್ಯಾಲಯಕ್ಕೆ ಸಿ.ಐ.ಕಚೇರಿಗೆ,ಕೃಷಿ ಭವನ ಸಾರ್ವಜನಿಕ ಶ್ಮಶಾನಗಳಿಗೆ ತೆರಳುವ ರಸ್ತೆಯಲ್ಲಿ ತುಂಬಿರುವ ಮರಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದಾಗಿ ಸಾರ್ವಜನಿಕರ ಬೇಡಿಕೆಯಾಗಿದೆ. ಇನ್ನಷ್ಟು ಅಪಾಯ ಸಂಭವಿಸುವ ಮುನ್ನ ಸಮಸ್ಯೆಗೆ ಪರಿಹಾರ ಕಾಣಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.