ಸಂಸ್ಕೃತಿ ಪ್ರತಿಬಿಂಬಿಸುವ ಕ್ರೀಡೆಗಳಿಗೆ ಒತ್ತು ನೀಡಿ: ಜಿಟಿಡಿ


Team Udayavani, Jul 17, 2017, 12:16 PM IST

mys6.jpg

ಮೈಸೂರು: ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕ್ರೀಡೆಗಳನ್ನು ಏರ್ಪಡಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಕರಾವಳಿ ಸಾಂಸ್ಕೃತಿಕ ಚಾವಡಿವತಿಯಿಂದ ವಿಜಯನಗರ 4ನೇ ಹಂತದಲ್ಲಿ ಕೆಸರು ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಸಂಸ್ಕೃತಿಯ ಪ್ರತೀಕವಾದ ಕಂಬಳಕ್ಕೆ ರಾಷ್ಟ್ರಪತಿ ಅಂಕಿತ ಹಾಕಿರುವುದು ಶ್ಲಾಘನೀಯ ಸಂಗತಿ. ತುಳು ಸಮುದಾಯದವರೆಲ್ಲರೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೆಡೆ ಸೇರಿ ನಿಮ್ಮ ಸಂಸ್ಕೃತಿ ಬಿಂಬಿಸುವ ಆಟಗಳನ್ನು ಆಯೋಜಿಸಿರುವುದು ಸಂತೋಷದ ಸಂಗತಿ. ಪ್ರಾದೇಶಿಕ ನೆಲಗಟ್ಟಿನಲ್ಲಿ ಸ್ಪ$ರ್ಧೆಗಳನ್ನು ನೋಡದೆ ಎಲ್ಲವನ್ನೂ ನಮ್ಮ ರಾಜ್ಯದ ಕ್ರೀಡೆಗಳೆಂದು ತಿಳಿದುಕೊಳ್ಳುವಂತೆ ಕಿವಿಮಾತು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ. ಚಂದ್ರಹಾಸ ರೈ ಮಾತನಾಡಿ, ಮೈಸೂರು ಭಾಗದಲ್ಲಿ ನೆಲೆಸಿರುವ ತುಳು ಸಮುದಾಯದವರನ್ನು ಒಂದೆಡೆ ಸೇರಿಸಿ ಕರಾವಳಿ ಭಾಗದ ಕ್ರೀಡೆಗಳನ್ನು ಇಲ್ಲಿ ಅನಾವರಣಗೊಳಿಸುತ್ತಿರುವುದು ಶ್ಲಾಘನೀಯ. ಮುಂದಿನ ವರ್ಷದಿಂದ ಅಕಾಡೆಮಿಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ತಮಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕರಾವಳಿ ಸಾಂಸ್ಕೃತಿಕ ಚಾವಡಿ ಅಧ್ಯಕ್ಷ ಕೆ.ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಅಧ್ಯಕ್ಷ ಟಿ. ಪ್ರಭಾಕರ್‌ ಶೆಟ್ಟಿ, ಮ್ಯಾನೇಜಿಂಗ್‌ ಟ್ರಸ್ಟಿ ಕೆ. ಗಣೇಶ್‌ ನಾರಾಯಣ ಹೆಗ್ಡೆ, ಶ್ರೀ ಕಾಳಿಕಾಂಬ ದೇವಸ್ಥಾನದ ಅಧ್ಯಕ್ಷ ಚೆಲುವಾಚಾರ್‌, ಚಾವಡಿ ಗೌರವಾಧ್ಯಕ್ಷ ಡಾ. ದಿನೇಶ್‌ ಶೆಟ್ಟಿ, ಕಾರ್ಯದರ್ಶಿ ಸುಕುಮಾರ್‌, ಕೋಶಾಧಿಕಾರಿ ಪಿ. ಲಕ್ಷ್ಮಣ್‌ ಶೆಟ್ಟಿಗಾರ್‌ ಇತರರು ಇದ್ದರು.

ಕೆಸರುಗದ್ದೆಯಲ್ಲಿ ಆಟ: ಕೆಸರು ಗದ್ದೆಯಲ್ಲಿ ಒಂದು ದಿನ-2017 ಸ್ಪರ್ಧೆಯಲ್ಲಿ ಕರಾವಳಿ ಭಾಗದ ಕ್ರೀಡಾ ಸಂಸ್ಕೃತಿ ಅನಾವರಣವಾಯಿತು. ಒಂದ ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಒಬ್ಬರಿಗಿಂತ ಒಬ್ಬರು ವಿಭಿನ್ನ ಚಿತ್ರವನ್ನು ಬಿಡಿಸಿ ಗಮನ ಸೆಳೆದರೆ, ಕೆಸರುಗದ್ದೆ ಓಟದಲ್ಲಿ ಬಿದ್ದು-ಎದ್ದು ಓಡಿದ ಮಕ್ಕಳೇ ಹೆಚ್ಚಿದ್ದರು. ಹಲವರು ಗುರಿ ತಲುಪಲಾಗದೆ ನಿರಾಶರಾಗಿ ಕೆಸರಿನಲ್ಲೇ ಒದ್ದಾಡಿ ನಲಿದರು. ಪೋಷಕರು ತಮ್ಮ ಮಕ್ಕಳ ಕೆಸರುಗದ್ದೆ ಓಟವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಂಭ್ರಮಿಸಿದರು.

ಟಾಪ್ ನ್ಯೂಸ್

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

10

Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

9

Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.