ಮುಗಿದ ರಾಷ್ಟ್ರಪತಿ ಚುನಾವಣೆ: ಜುಲೈ 20ಕ್ಕೆ ಫಲಿತಾಂಶ ಬಹಿರಂಗ
Team Udayavani, Jul 17, 2017, 8:00 PM IST
ಹೊಸದಿಲ್ಲಿ : ಎನ್ಡಿಎ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ಮತ್ತು ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್ ಅವರು ಕಣದಲ್ಲಿರುವ ರಾಷ್ಟ್ರಪತಿ ಚುನಾವಣೆ ಇಂದು ಸೋಮವಾರ ಮುಗಿದಿದ್ದು ಇದೇ ಜು.20ರ ಗುರುವಾರದಂದು ಫಲಿತಾಂಶ ಹೊರಬೀಳಲಿದೆ.
ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ “ಎಲ್ಲ ಟಿಎಂಸಿ ಶಾಸಕರು ಜಂಟಿ ವಿಪಕ್ಷ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ಮತ ಹಾಕುವ ಮೂಲಕ ದೇಶದಲ್ಲಿ ನಡೆಯುತ್ತಿರುವ ಎಲ್ಲ ಅಹಿತಕರ ವಿದ್ಯಮಾನಗಳಿಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ’ ಎಂದು ಹೇಳಿದರು.
”ಮೀರಾ ಕುಮಾರ್ ಅವರಿಗೆ ಪಶ್ಚಿಮ ಬಂಗಾಲದಿಂದ ಗರಿಷ್ಠ ಮತಗಳು ಸಿಗಲಿವೆ; ಟಿಎಂಸಿಯ ಎಲ್ಲ ಸಂಸದರು, ಶಾಸಕರು ಅವರಿಗೇ ಮತ ಹಾಕಿದ್ದಾರೆ” ಎಂದು ಮಮತಾ ಹೇಳಿದರು.
ಇದೇ ವೇಳೆ ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅವರು ಮಾತನಾಡಿ, “ಎನ್ಸಿಪಿ ಸಂಸದರು ಮತ್ತು ಶಾಸಕರು ಎನ್ಡಿಎ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ವದಂತಿ ಸುಳ್ಳು; ನಾವೆಲ್ಲರೂ ಮೀರಾ ಕುಮಾರ್ ಅವರಿಗೇ ಮತ ಹಾಕಿದ್ದೇವೆ’ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು “ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ನಿರಾಯಾಸವಾಗಿ ಗೆಲವು ಸಾಧಿಸುವರು” ಎಂದು ವಿಶ್ವಾಸದಿಂದ ಹೇಳಿದ್ದಾರೆ.
”ಸಿಕ್ಕಿಂ ವಿಧಾನಸಭೆಯ 32 ಮಂದಿ ಶಾಸಕರ ಪೈಕಿ 30 ಮಂದಿ ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ” ಎಂದು ನಿರ್ವಚನಾಧಿಕಾರಿ ಎಲ್ ಎಂ ಪ್ರಧಾನ್ ಹೇಳಿದ್ದಾರೆ. ಇಬ್ಬರು ಶಾಸಕರು ಅನಿವಾರ್ಯ ಕಾರಣಗಳಿಂದ ಮತದಾನ ಮಾಡಿಲ್ಲ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.