ಹೆಚ್ಚುವರಿ 11.59 ಎಕ್ರೆ ಕೈಬಿಡಲು ಪಾಲಿಕೆ ತೀರ್ಮಾನ


Team Udayavani, Jul 19, 2017, 2:35 AM IST

palike-teermana.jpg

ಲಾಲ್‌ಬಾಗ್‌: ಪಂಪ್‌ವೆಲ್‌ನಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣಕ್ಕೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿಯಾಗಿ 2ನೇ ಹಂತದ ಭೂಸ್ವಾಧೀನದ ತಾರೆತೋಟ ವ್ಯಾಪ್ತಿಯ ಸುಮಾರು 11.59 ಎಕ್ರೆ ಭೂಮಿಯನ್ನು ಕೈಬಿಡುವ ಸಂಬಂಧ ಮಹಾನಗರ ಪಾಲಿಕೆ ಮಂಗಳವಾರ ತೀರ್ಮಾನ ಕೈಗೊಂಡಿದೆ. 

ಈ ನಿರ್ಣಯದಿಂದ 9 ವರ್ಷಗಳಿಂದ ಅತಂತ್ರರಾಗಿದ್ದ ಸುಮಾರು 60ಕ್ಕೂ ಅಧಿಕ ಕುಟುಂಬಗಳಿಗೆ ನೆರವಾಗಲಿದೆ.
ಮೇಯರ್‌ ಕವಿತಾ ಸನಿಲ್‌ ಅವರ ಅಧ್ಯಕ್ಷತೆಯಲ್ಲಿ, ಮನಪಾ ನಗರ ಯೋಜನೆ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ರವೂಫ್‌ ನೇತೃತ್ವದಲ್ಲಿ ಮಂಗಳವಾರ ನಡೆದ ಸ್ಥಾಯೀ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಂಪ್‌ವೆಲ್‌ನಲ್ಲಿ ನೂತನ ಬಸ್‌ ತಂಗುದಾಣಕ್ಕೆ 1ನೇ ಹಂತದಲ್ಲಿ 7.50 ಎಕ್ರೆ ಹಾಗೂ 4 ಎಕ್ರೆ  ಸಹಿತ ಒಟ್ಟು 11.50 ಎಕ್ರೆ  ಭೂಮಿಯನ್ನು ಮೊದಲು ಭೂಸ್ವಾಧೀನ ಮಾಡಲಾಗಿತ್ತು. 

ಜಿಲ್ಲಾಡಳಿತ ಇದನ್ನು ಬಸ್‌ನಿಲ್ದಾಣಕ್ಕೆ ನಿಗದಿಪಡಿಸಿ ನಕ್ಷೆ ರೂಪಿಸಿತ್ತು. ಇದನ್ನು ಹೊರತು ಪಡಿಸಿ, ಹೆಚ್ಚುವರಿಯಾಗಿ ಮೊದಲ ಭೂಸ್ವಾಧೀನ ಜಾಗದ ಪಕ್ಕದಲ್ಲಿ ಮತ್ತೆ 11.59 ಎಕರೆ ಜಾಗವನ್ನು ಭೂಸ್ವಾಧೀನ ಮಾಡಲು ಪಾಲಿಕೆ 2008ರಲ್ಲಿ ನಿರ್ಧರಿಸಿತ್ತು. 

ಪರಿಹಾರವೂ ಇಲ್ಲ- ಭೂಮಿಯೂ ಇಲ್ಲ..!
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣವಾದ ಬಳಿಕ ಇದರೊಳ ಗಡೆಯೇ ಬಸ್‌ ನಿಲ್ದಾಣ ಕಲ್ಪಿಸಲು ನಕ್ಷೆ ಸಿದ್ಧಪಡಿಸಲಾಗಿತ್ತು. 

ಹೀಗಾಗಿ ಹೆಚ್ಚುವರಿಯಾಗಿ ಪಡೆಯಲಾಗಿದ್ದ ಭೂಮಿಗೆ ಪರಿಹಾರ ಹಸ್ತಾಂತರ ಆಗಿರಲಿಲ್ಲ.
ಕಳೆದ 9 ವರ್ಷಗಳಿಂದ ಈ ಭೂಮಿ ಕಡತದಲ್ಲಿ “ಪಾಲಿಕೆಯದ್ದು’ ಎಂದೇ ಉಳಿದುಕೊಂಡಿತ್ತು. ಅತ್ತ  ಜಾಗ ಕಳೆದುಕೊಂಡವರಿಗೆ ಹಣವೂ ಇಲ್ಲ. ಇತ್ತ ಭೂಮಿಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣ ವಾಗಿತ್ತು. ತೀರಾ ಬಡ ಕುಟುಂಬಗಳು ಈ ಜಾಗದಲ್ಲಿ ನೆಲೆಸಿದ ಕಾರಣ ಮನೆ ಸಹಿತ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈ ಭೂಮಿಯಲ್ಲಿ ನಡೆಸಲು ಅವಕಾಶವಿರಲಿಲ್ಲ. “ತಮ್ಮ ಜಾಗವನ್ನು ಪಡೆದು ಪರಿಹಾರ ಮೊತ್ತವನ್ನಾದರೂ ನೀಡಿ, ಅಥವಾ ಭೂಮಿ ಯನ್ನು  ವಾಪಸ್‌ ಕೊಡಿ’ ಎಂದು ಈ ಕುಟುಂಬಗಳು ಹಲವು ಬಾರಿ ಪಾಲಿಕೆಗೆ ಮನವಿ ಕೂಡ ಸಲ್ಲಿಸಿತ್ತು. 
2014ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಆಗಿನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 2ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣ ಕೈಬಿಡಲು ಮನಪಾಕ್ಕೆ ಸೂಚನೆ ನೀಡಲಾಗಿತ್ತು. 

ಅಂದು 19 ಕೋಟಿ; ಈಗ 30 ಕೋಟಿ ಪರಿಹಾರ..!
2ನೇ ಹಂತದ ಭೂಸ್ವಾಧೀನ ಮಾಡಿರುವ ಭೂಮಿಗೆ 2009ರಲ್ಲಿ 19 ಕೋಟಿ ರೂ. ಇದ್ದ ಪರಿಹಾರ ಮೊತ್ತ ಈಗ 30 ಕೋಟಿ ರೂ.ಗೆ ಏರಿಕೆಯಾಗಿದೆ. 

ಇಷ್ಟು ದೊಡ್ಡ ಮೊತ್ತವನ್ನು ಪರಿಹಾರ ನೀಡಲು ಪಾಲಿಕೆಗೆ  ಕಷ್ಟ ಸಾಧ್ಯ. ಜತೆಗೆ ಬಸ್‌ ನಿಲ್ದಾಣಕ್ಕೆಂದು (11.50 ಎಕರೆ) ಈಗಾಗಲೇ ಜಾಗ ಮೀಸಲಿರಿಸಿರುವುದರಿಂದ ಹೆಚ್ಚುವರಿಯಾಗಿ ಅನಗತ್ಯವಾಗಿ ಬೇರೆ ಜಮೀನಿನ ಆವಶ್ಯಕತೆ ಇಲ್ಲ  ಮತ್ತು  60 ಕುಟುಂಬಗಳು ಈ ಸಂಬಂಧ ಕಳೆದ 9 ವರ್ಷಗಳಿಂದ ಭೂಮಿ ಅಥವಾ ಪರಿಹಾರ ನೀಡುವಂತೆ ನಿರಂತರವಾಗಿ ಪಾಲಿಕೆಗೆ ಮನವಿ ಮಾಡುತ್ತಿರುವ ಕಾರಣದಿಂದ ಜಾಗ ಕೈಬಿಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಈಗ ನಗರ ಯೋಜನಾ ಸ್ಥಾಯೀ ಸಮಿತಿಯಲ್ಲಿ ಕೆಲವರ ವಿರೋಧದ ಮಧ್ಯೆಯೂ 2ನೇ ಹಂತದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ನಿರ್ಣಯ ಕೈಗೊಂಡಿದೆ. ಮುಂದಿನ ಪಾಲಿಕೆ ಸಭೆಯಲ್ಲಿ ಇದು ಸ್ಥಿರೀಕರಣಗೊಳ್ಳುವ ಸಾಧ್ಯತೆ ಇದೆ. ಈ ಮೂಲಕ ಕಳೆದ 9 ವರ್ಷಗಳಿಂದ ಭೂಮಿಯೂ ಇಲ್ಲ ಪರಿಹಾರವೂ ಇಲ್ಲ ಎಂದು ಕಾಯುತ್ತ ಕುಳಿತಿರುವ ಸುಮಾರು 60 ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ ಎಂದು ಮೂಲಗಳು ತಿಳಿಸಿವೆ.

ಬಸ್‌ ನಿಲ್ದಾಣ ನಿರ್ಮಾಣ: ಪ್ರಸ್ತಾವನೆ ಪರಿಶೀಲನೆ
ಪಂಪ್‌ವೆಲ್‌ನಲ್ಲಿ ಸುಸಜ್ಜಿತ  ಬಸ್‌ ನಿಲ್ದಾಣ ಕಲ್ಪಿಸುವ ಹಲವು ವರ್ಷದ ಕನಸಿಗೆ ಈಗ ಮೂರ್ತರೂಪ ದೊರಕಿದ್ದು, ಪ್ರಾಥಮಿಕ ಸಿದ್ಧತೆಗಳು ಈಗಾಗಲೇ ನಡೆಯುತ್ತಿದೆ. ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವ (ಪಿಪಿಪಿ)ದಲ್ಲಿ ಬಸ್‌ ನಿಲ್ದಾಣ ನಿರ್ಮಿಸುವ ಸಂಬಂಧ ಆಸಕ್ತ ಅಭಿವೃದ್ಧಿ ಸಂಸ್ಥೆಯವರಿಂದ ಮಾದರಿ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 6 ಜನರು ಈ ಸಂಬಂಧ ಮುಂದೆ ಬಂದು ಮಾದರಿ ಪ್ರಸ್ತಾವನೆ  ಸಲ್ಲಿಸಿದ್ದಾರೆ. ಈಗಾಗಲೇ ಬಂದ ಮಾದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಜು. 27ರಂದು ಇದು ಅಂತಿಮಗೊಳ್ಳಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತಂತೆ ಪ್ರಾಥಮಿಕ ವಿಚಾರ ವಿನಿಮಯ ಸಭೆ ನಡೆದಿದೆ. ಪಂಪ್‌ವೆಲ್‌ ಹೆದ್ದಾರಿ ಪಕ್ಕದ ಸುಮಾರು 11.50 ಎಕರೆ ಜಾಗದಲ್ಲಿ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.